AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟದಲ್ಲಿ ಭೂಕಂಪ: 3.6 ರಷ್ಟು ತೀವ್ರತೆ ದಾಖಲು

ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟಗಳಲ್ಲಿ ಲಘು ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ಕಂಪನದ ತೀವ್ರತೆ ದಾಖಲು ಆಗಿದೆ. 

Earthquake: ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟದಲ್ಲಿ ಭೂಕಂಪ: 3.6 ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 28, 2023 | 6:54 PM

Share

ಮೇಘಾಲಯ: ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟಗಳಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಲಘು ಭೂಕಂಪನ (Earthquake) ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ಕಂಪನದ ತೀವ್ರತೆ ದಾಖಲು ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ದಿಂದ 10 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯ ಇದುವರೆಗೂ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ. ಮೇ 22 ರಂದು ನೆರೆಯ ದೇಶ ಮ್ಯಾನ್ಮಾರ್​ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿತ್ತು.

ಮ್ಯಾನ್ಮಾರ್ನಲ್ಲಿ ಬೆಳಿಗ್ಗೆ 8:15 ರ ಸುಮಾರಿಗೆ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿತ್ತು. ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿರಲಿಲ್ಲ.

ಇದನ್ನೂ ಓದಿ: Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ, 4.9 ತೀವ್ರತೆ ದಾಖಲು

ಭಾನುವಾರ ಬೆಳಗ್ಗೆ 10.19ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.9ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ  5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಹಾಗೆಯೇ ದೆಹಲಿ, ಎನ್​ಸಿಆರ್​ ಹಾಗೂ ಪಂಜಾಬ್​ ಹರ್ಯಾಣ ಭಾಗಗಳಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರ ಬಿಂದು ಅಫ್ಘಾನಿಸ್ತಾನದ ತಜಿಖಿಸ್ತಾನದ ಗಡಿಯಲ್ಲಿದೆ.

ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಎರಡು ಸಲ ಕಂಪಿಸಿದ ಭೂಮಿ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಕ್ರಮವಾಗಿ ಸಂಜೆ 5:15 ಮತ್ತು 5:28 ಕ್ಕೆ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.3 ರ ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಹೇಳಿದೆ.ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಹೊರತಾಗಿ, ಪಾಲ್ಘರ್ ಜಿಲ್ಲಾಧಿಕಾರಿಗಳ ಕಚೇರಿ ಕೂಡಾ ಭೂಕಂಪ ವರದಿಯನ್ನು ದೃಢಪಡಿಸಿದೆ. ಇದುವರೆಗೆ ಯಾವುದೇ ಹಾನಿ ವರದಿಯಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:40 pm, Sun, 28 May 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ