AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Earthquake ಉತ್ತರ ಪ್ರದೇಶದ ಅಯೋಧ್ಯೆ ಬಳಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ

ಎನ್​​ಸಿಎಸ್ ಪ್ರಕಾರ, ಅಯೋಧ್ಯೆಯಿಂದ 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಭೂಮಿ ಕಂಪಿಸಿದೆ. 06-01-2022 ರಂದು 23:59:22 IST ವೇಳೆಗೆ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.

Ayodhya Earthquake ಉತ್ತರ ಪ್ರದೇಶದ ಅಯೋಧ್ಯೆ ಬಳಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ
ಅಯೋಧ್ಯೆಯಲ್ಲಿ ಭೂಕಂಪ
TV9 Web
| Edited By: |

Updated on:Jan 07, 2022 | 10:36 AM

Share

ಅಯೋಧ್ಯೆ: ಉತ್ತರ ಪ್ರದೇಶದ (Uttarpradesh) ಅಯೋಧ್ಯೆಯ (Ayodhya) ಬಳಿ ರಿಕ್ಟರ್ ಮಾಪಕದಲ್ಲಿ 4.3 ಅಳತೆಯ ಭೂಕಂಪ (Earthquake )ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಶುಕ್ರವಾರ ತಿಳಿಸಿದೆ. ಎನ್​​ಸಿಎಸ್ ಪ್ರಕಾರ, ಅಯೋಧ್ಯೆಯಿಂದ 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಭೂಮಿ ಕಂಪಿಸಿದೆ. 06-01-2022 ರಂದು 23:59:22 IST ವೇಳೆಗೆ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ಈ ಸ್ಥಳವು ಭಾರತದಲ್ಲಿನ ಅಯೋಧ್ಯೆಯ (ಉತ್ತರ ಪ್ರದೇಶ) 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಮತ್ತು ನೇಪಾಳದ ರಾಜಧಾನಿಯಾದ ಕಠ್ಮಂಡುವಿನಿಂದ ಸುಮಾರು 300 ಕಿಮೀ ಪಶ್ಚಿಮ ವಾಯವ್ಯ ಭಾಗದಲ್ಲಿದೆ. ಪ್ರಬಲವಾದ ಹಿಮಾಲಯದಲ್ಲಿ ನೆಲೆಸಿರುವ ಇಡೀ ನೇಪಾಳವು ಭೂಕಂಪ ಪೀಡಿತ ಪ್ರದೇಶವಾಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಭೂಕಂಪದ ಈ ಕಂಪನಗಳು ರಾತ್ರಿ 11.59 ಕ್ಕೆ ಅನುಭವವಾಯಿತು. ಭೂಕಂಪನದ ಅನುಭವವಾದ ನಂತರ ಜನರು ಮನೆಗಳಿಂದ ಹೊರಬಂದರು. ಈ ವೇಳೆ ಮಕ್ಕಳು, ಮಹಿಳೆಯರು ಹಾಗೂ ಹಿರಿಯರ ಮುಖದಲ್ಲಿ ಭಯ ಸ್ಪಷ್ಟವಾಗಿ ಕಾಣುತ್ತಿತ್ತು. ಈ ಜನರು ಸುಮಾರು ಒಂದೂವರೆ-ಎರಡು ಗಂಟೆಗಳ ನಂತರ ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಏಪ್ರಿಲ್ 2015 ರಲ್ಲಿ ಇದಕ್ಕೂ ಮೊದಲು ಅಯೋಧ್ಯೆ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಭೂಕಂಪದ ಪ್ರಬಲ ಕಂಪನಗಳು ಸಂಭವಿಸಿವೆ. ಈ ವೇಳೆ ರಾಮನಗರಿಯ ಮಾ ಕಾಮಾಖ್ಯ ದೇವಸ್ಥಾನದ ಮೇಲ್ಛಾವಣಿ ಬಿದ್ದಿತ್ತು. ಇದರಿಂದ ಅಲ್ಲಿ ಕಾಲ್ತುಳಿತ ಉಂಟಾಯಿತು. ಜನರು ಪ್ರಾಣ ಉಳಿಸಿಕೊಳ್ಳಲು ದೇವಸ್ಥಾನದ ಆವರಣದಿಂದ ಹೊರಗೆ ಓಡಿ ಬಂದರು. ಇದಲ್ಲದೇ ಲಖನೌದ ನಾಗ್ರಾಮ್‌ನಲ್ಲಿ ಮಸೀದಿಯ ಗೋಡೆ ಕುಸಿದಿದ್ದರಿಂದ ಸುತ್ತಮುತ್ತಲಿನ ಪ್ರದೇಶದಿಂದ ಜನರು ಓಡಿಹೋಗಿದ್ದರು. ಆದರೆ, ಮರುದಿನ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.

ಇದನ್ನೂ ಓದಿ:  PM Modi: ₹ 530 ಕೋಟಿ ವೆಚ್ಚದಲ್ಲಿ ನಿರ್ಮಿತವಾದ ಕೋಲ್ಕತ್ತಾದ ಸಿಎನ್​ಸಿಐ 2ನೇ ಕ್ಯಾಂಪಸ್ಅನ್ನು ಇಂದು​ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ನಿಯೋಗ ಕರೆದೊಯ್ದರೆ ಮೋದಿ ಹತ್ರ ನಾನು ಮಾತಾಡ್ತೇನಿ- ಸಿದ್ದರಾಮಯ್ಯ ಘೋಷಣೆ

Published On - 10:13 am, Fri, 7 January 22

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ