Ayodhya Earthquake ಉತ್ತರ ಪ್ರದೇಶದ ಅಯೋಧ್ಯೆ ಬಳಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ

ಎನ್​​ಸಿಎಸ್ ಪ್ರಕಾರ, ಅಯೋಧ್ಯೆಯಿಂದ 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಭೂಮಿ ಕಂಪಿಸಿದೆ. 06-01-2022 ರಂದು 23:59:22 IST ವೇಳೆಗೆ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.

Ayodhya Earthquake ಉತ್ತರ ಪ್ರದೇಶದ ಅಯೋಧ್ಯೆ ಬಳಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ
ಅಯೋಧ್ಯೆಯಲ್ಲಿ ಭೂಕಂಪ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 07, 2022 | 10:36 AM

ಅಯೋಧ್ಯೆ: ಉತ್ತರ ಪ್ರದೇಶದ (Uttarpradesh) ಅಯೋಧ್ಯೆಯ (Ayodhya) ಬಳಿ ರಿಕ್ಟರ್ ಮಾಪಕದಲ್ಲಿ 4.3 ಅಳತೆಯ ಭೂಕಂಪ (Earthquake )ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಶುಕ್ರವಾರ ತಿಳಿಸಿದೆ. ಎನ್​​ಸಿಎಸ್ ಪ್ರಕಾರ, ಅಯೋಧ್ಯೆಯಿಂದ 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಭೂಮಿ ಕಂಪಿಸಿದೆ. 06-01-2022 ರಂದು 23:59:22 IST ವೇಳೆಗೆ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ಈ ಸ್ಥಳವು ಭಾರತದಲ್ಲಿನ ಅಯೋಧ್ಯೆಯ (ಉತ್ತರ ಪ್ರದೇಶ) 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಮತ್ತು ನೇಪಾಳದ ರಾಜಧಾನಿಯಾದ ಕಠ್ಮಂಡುವಿನಿಂದ ಸುಮಾರು 300 ಕಿಮೀ ಪಶ್ಚಿಮ ವಾಯವ್ಯ ಭಾಗದಲ್ಲಿದೆ. ಪ್ರಬಲವಾದ ಹಿಮಾಲಯದಲ್ಲಿ ನೆಲೆಸಿರುವ ಇಡೀ ನೇಪಾಳವು ಭೂಕಂಪ ಪೀಡಿತ ಪ್ರದೇಶವಾಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಭೂಕಂಪದ ಈ ಕಂಪನಗಳು ರಾತ್ರಿ 11.59 ಕ್ಕೆ ಅನುಭವವಾಯಿತು. ಭೂಕಂಪನದ ಅನುಭವವಾದ ನಂತರ ಜನರು ಮನೆಗಳಿಂದ ಹೊರಬಂದರು. ಈ ವೇಳೆ ಮಕ್ಕಳು, ಮಹಿಳೆಯರು ಹಾಗೂ ಹಿರಿಯರ ಮುಖದಲ್ಲಿ ಭಯ ಸ್ಪಷ್ಟವಾಗಿ ಕಾಣುತ್ತಿತ್ತು. ಈ ಜನರು ಸುಮಾರು ಒಂದೂವರೆ-ಎರಡು ಗಂಟೆಗಳ ನಂತರ ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಏಪ್ರಿಲ್ 2015 ರಲ್ಲಿ ಇದಕ್ಕೂ ಮೊದಲು ಅಯೋಧ್ಯೆ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಭೂಕಂಪದ ಪ್ರಬಲ ಕಂಪನಗಳು ಸಂಭವಿಸಿವೆ. ಈ ವೇಳೆ ರಾಮನಗರಿಯ ಮಾ ಕಾಮಾಖ್ಯ ದೇವಸ್ಥಾನದ ಮೇಲ್ಛಾವಣಿ ಬಿದ್ದಿತ್ತು. ಇದರಿಂದ ಅಲ್ಲಿ ಕಾಲ್ತುಳಿತ ಉಂಟಾಯಿತು. ಜನರು ಪ್ರಾಣ ಉಳಿಸಿಕೊಳ್ಳಲು ದೇವಸ್ಥಾನದ ಆವರಣದಿಂದ ಹೊರಗೆ ಓಡಿ ಬಂದರು. ಇದಲ್ಲದೇ ಲಖನೌದ ನಾಗ್ರಾಮ್‌ನಲ್ಲಿ ಮಸೀದಿಯ ಗೋಡೆ ಕುಸಿದಿದ್ದರಿಂದ ಸುತ್ತಮುತ್ತಲಿನ ಪ್ರದೇಶದಿಂದ ಜನರು ಓಡಿಹೋಗಿದ್ದರು. ಆದರೆ, ಮರುದಿನ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.

ಇದನ್ನೂ ಓದಿ:  PM Modi: ₹ 530 ಕೋಟಿ ವೆಚ್ಚದಲ್ಲಿ ನಿರ್ಮಿತವಾದ ಕೋಲ್ಕತ್ತಾದ ಸಿಎನ್​ಸಿಐ 2ನೇ ಕ್ಯಾಂಪಸ್ಅನ್ನು ಇಂದು​ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ನಿಯೋಗ ಕರೆದೊಯ್ದರೆ ಮೋದಿ ಹತ್ರ ನಾನು ಮಾತಾಡ್ತೇನಿ- ಸಿದ್ದರಾಮಯ್ಯ ಘೋಷಣೆ

Published On - 10:13 am, Fri, 7 January 22

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ