AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪ: ರಿಕ್ಟರ್​ ಮಾಪನದಲ್ಲಿ 5.4ರಷ್ಟು ತೀವ್ರತೆ ದಾಖಲು

ಇಂದು (ನ. 12) ರಾತ್ರಿ 8 ಗಂಟೆ ಸುಮಾರಿಗೆ ದೆಹಲಿ ಮತ್ತು ನೆರೆಯ ನಗರಗಳಲ್ಲಿ ಭೂಕಂಪನದ ಅನುಭವ ಉಂಟಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ಟೀಟ್ವ್​ ಮಾಡಿದೆ.

Delhi Earthquake: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪ: ರಿಕ್ಟರ್​ ಮಾಪನದಲ್ಲಿ 5.4ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 12, 2022 | 9:01 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ನ. 12) ಮತ್ತೆ ಭೂಕಂಪನದ (Earthquake) ಅನುಭವ ಉಂಟಾಗಿದ್ದು, ರಿಕ್ಟರ್​ ಮಾಪನದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಟ್ವೀಟ್​ ಮಾಡಿದೆ.  ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್​​ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿದ್ದು, 10 km ಆಳದಲ್ಲಿ ಭೂಮಿ ಕಂಪಿಸಿದೆ ಎನ್ನಲಾಗುತ್ತಿದೆ.

ಇದೇ ತಿಂಗಳು (ನ 9) ನೇಪಾಳದ ದೋಟಿ ಜಿಲ್ಲೆಯಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಹಲವು ಮನೆಗಳು ಕುಸಿದಿದ್ದು, ಸುದ್ದಿಸಂಸ್ಥೆಗಳು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ ಆರು ಮಂದಿ ಮೃತಪಟ್ಟಿರುವುದು ದೃಢವಾಗಿತ್ತು. ನೇಪಾಳದ ಭೂಕಂಪದ ಉತ್ತರಕಂಪನಗಳು (Strong Tremors) ದೆಹಲಿ, ರಾಷ್ಟ್ರ ರಾಜಧಾನಿ ಪ್ರದೇಶ, ನೋಯ್ಡಾ ಸೇರಿದಂತೆ ಹಲವೆಡೆ ಜನರ ಅನುಭವಕ್ಕೆ ಬಂದಿತ್ತು. ಭೂಕಂಪದಿಂದ ಆಘಾತಕ್ಕೊಳಗಾದ ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದರು. ಸುಮಾರು 10 ಸೆಕೆಂಡ್​ಗಳ ಕಾಲ ಭೂಕಂಪದ ಅನುಭವವಾಯಿತು ಎಂದು ವರದಿಯಾಗಿತ್ತು. ಭೂಕಂಪದ ಅನುಭವ ಉಂಟಾದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಭೂಕಂಪನದ ಅನುಭವವನ್ನು ಹಂಚಿಕೊಂಡಿದ್ದಾರೆ. ಅನೇಕರು ಮೀಮ್ಗಳನ್ನು ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಭೂಕಂಪ, ಜ್ವಾಲಾಮುಖಿ, ರೈಲು ದುರಂತ, ರಾಜಕೀಯ ನಾಯಕರ ತಲೆದಂಡದ ಬಗ್ಗೆ ಕರ್ನಾಟಕದ ಖ್ಯಾತ ಜ್ಯೋತಿಷಿ ಭವಿಷ್ಯ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:21 pm, Sat, 12 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ