AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Earthquake: ಲಡಾಖ್​ನ ಕಾರ್ಗಿಲ್​ನಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ

ಲಡಾಖ್​​ನ ಕಾರ್ಗಿಲ್ ನಗರದಲ್ಲಿ ಇಂದು ಭೂಕಂಪನ ವರದಿಯಾಗುತ್ತಿದ್ದಂತೆ ಭಾರತದಲ್ಲಿ ಭೂಕಂಪಗಳ ಅಲೆ ಮುಂದುವರೆದಿದೆ. ಭೂಕಂಪದ ತೀವ್ರತೆ 4.3ರಷ್ಟಿದ್ದು, ಕಾರ್ಗಿಲ್​ನಲ್ಲಿ ಭೂ ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ.

Kargil Earthquake: ಲಡಾಖ್​ನ ಕಾರ್ಗಿಲ್​ನಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ
ಭೂಕಂಪ
TV9 Web
| Edited By: |

Updated on:Nov 22, 2022 | 1:51 PM

Share

ಲೇಹ್: ಲಡಾಖ್‌ನ ಕಾರ್ಗಿಲ್‌ (Kargil) ಬಳಿ ಇಂದು (ಮಂಗಳವಾರ) ಬೆಳಗ್ಗೆ 10.05ಕ್ಕೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಆದರೆ, ಈ ಭೂಕಂಪದಿಂದ ಯಾವುದೇ ಹಾನಿಗಳು ಸಂಭವಿಸಿಲ್ಲ ಎನ್ನಲಾಗಿದೆ.

ಲಡಾಖ್​​ನ ಕಾರ್ಗಿಲ್ ನಗರದಲ್ಲಿ ಇಂದು ಭೂಕಂಪನ ವರದಿಯಾಗುತ್ತಿದ್ದಂತೆ ಭಾರತದಲ್ಲಿ ಭೂಕಂಪಗಳ ಅಲೆ ಮುಂದುವರೆದಿದೆ. ಭೂಕಂಪದ ತೀವ್ರತೆ 4.3ರಷ್ಟಿದ್ದು, ಕಾರ್ಗಿಲ್​ನಲ್ಲಿ ಭೂ ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ. ಭೂಕಂಪನದ ರಾಷ್ಟ್ರೀಯ ಕೇಂದ್ರವು ಲಡಾಖ್‌ನಲ್ಲಿ ಭೂಕಂಪನದ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದೆ. ಭೂಕಂಪನ ಇಲಾಖೆಯ ಪ್ರಕಾರ, ಇಂದು ಬೆಳಿಗ್ಗೆ 10.05ರ ಸುಮಾರಿಗೆ ಭೂಕಂಪನ ವರದಿಯಾಗಿದೆ.

ಇದನ್ನೂ ಓದಿ: Solomon Islands Tsunami: ಸೊಲೊಮನ್ ದ್ವೀಪಗಳಲ್ಲಿ 7.3ರ ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಇಂದು ಮಧ್ಯಾಹ್ನ ಸೊಲೊಮನ್ ದ್ವೀಪಗಳಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಈ ಭೂಕಂಪದಿಂದ ಕಿಟಕಿ, ಟೇಬಲ್‌ಗಳು ಜಖಂ ಆಗಿದ್ದವು. ಇದರಿಂದಾಗಿ ಜನರು ಎತ್ತರದ ಸುರಕ್ಷಿತ ಪ್ರದೇಶಕ್ಕೆ ಓಡಿದರು. ಆದರೆ, ಇದರಿಂದ ವ್ಯಾಪಕ ಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಈ ತಿಂಗಳ ಆರಂಭದಲ್ಲಿ ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಭಾರತದ ಇತರ ಉತ್ತರದ ರಾಜ್ಯಗಳು ನೆರೆಯ ರಾಷ್ಟ್ರ ನೇಪಾಳದಿಂದ ಉಂಟಾದ ಪ್ರಬಲ ಭೂಕಂಪಗಳಿಂದ ತತ್ತರಿಸಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Tue, 22 November 22

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್