AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಹಿಮಾಚಲ ಪ್ರದೇಶದ ಧರ್ಮಶಾಲಾ ವ್ಯಾಪ್ತಿಯಲ್ಲಿ ಭೂಕಂಪ

ಹಿಮಾಚಲ ಪ್ರದೇಶದ ಧರ್ಮಶಾಲಾ ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 3.2 ಕಂಪನದ ತೀವ್ರತೆ ದಾಖಲಾಗಿದೆ.

Earthquake: ಹಿಮಾಚಲ ಪ್ರದೇಶದ ಧರ್ಮಶಾಲಾ ವ್ಯಾಪ್ತಿಯಲ್ಲಿ ಭೂಕಂಪ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jan 14, 2023 | 7:19 AM

Share

Earthquake in Himachal Pradesh: ಶನಿವಾರ(ಜ.14) ಮುಂಜಾನೆ 5:17 ಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ 22ಕಿಮೀ ಪೂರ್ವದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ಕಂಪನದ ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪನ ನಡೆದ ಕಡೆ ಇಲ್ಲಿಯವರೆಗೆ ಯಾವುದೇ ಹಾನಿ ಮತ್ತು ನಾಶದ ವರದಿಯಾಗಿಲ್ಲ ಎಂಬುದನ್ನು ತಿಳಿಸಿದೆ.

ಇದನ್ನೂ ಓದಿ: Joshimath Sinking: ಜೋಶಿಮಠ 12 ದಿನಗಳಲ್ಲಿ 5.4 ಸೆಂ.ಮೀನಷ್ಟು ಮುಳುಗಿದೆ: ಇಸ್ರೋ ಮಾಹಿತಿ

ಮುಳುಗುತ್ತಿದೆ ಜೋಶಿಮಠ

ಉತ್ತರಾಖಂಡದ ಜೋಶಿಮಠದಲ್ಲಿ ಕ್ಷಣ ಕ್ಷಣಕ್ಕೂ ಭೂಮಿ ಕುಸಿಯುತ್ತಿದೆ. ಇತ್ತೀಚೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮತ್ತೊಂದು ಬೆಚ್ಚಿಬೀಳೀಸುವ ವರದಿಯನ್ನು ಹೊರ ಹಾಕಿದೆ. ಇಸ್ರೋ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಜೋಶಿಮಠ ನಗರದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದ್ದು ಕೇವಲ 12 ದಿನಗಳಲ್ಲಿ 5.4 ಸೆಂ.ಮೀನಷ್ಟು ಮುಳುಗಿದೆ ಎನ್ನವ ಮಾಹಿತಿ ಬಹಿರಂಗಪಡಿಸಿದೆ. ಜೋಶಿಮಠದಲ್ಲಿ ಭೂಮಿ ನಿಧಾನವಾಗಿ ಮುಳುಗುವ ಪ್ರಕ್ರಿಯೆ ಹೇಗೆ ನಡೆಯುತ್ತಿದೆ ಎಂಬುದನ್ನು ತೋರಿಸುವ ಚಿತ್ರಗಳನ್ನು ಬಿಡುಗಡೆ ಮಾಡಿದೆ.  ಹೀಗಾಗಿ ಆತಂಕ ಹೆಚ್ಚಾಗಿದ್ದು ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಜೋಶಿಮಠವನ್ನು ಚಮೋಲಿ ಜಿಲ್ಲಾಡಳಿತ ಭೂಕುಸಿತ ಪ್ರದೇಶ ಎಂದು ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ನೂರಾರು ಮನೆ ಮತ್ತು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು ಜೋಶಿಮಠದಿಂದ ನೂರಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ನಡುವೆ ರಾಜ್ಯ ಸರ್ಕಾರವು 1.5 ಲಕ್ಷ ರೂಪಾಯಿಗಳ ಮಧ್ಯಂತರ ಪರಿಹಾರ ಪ್ಯಾಕೇಜ್ ಘೋಷಿಸಿದ್ದು, ಪುನರ್ವಸತಿ ಪ್ಯಾಕೇಜ್‌ಗೆ ಕೆಲಸ ಮಾಡುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:14 am, Sat, 14 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್