AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ: 3.4 ತೀವ್ರತೆ ದಾಖಲು

Kolhapur Earthquake: ಮಹರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಭೂಕಂಪ ಸಂಭವಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ: 3.4 ತೀವ್ರತೆ ದಾಖಲು
ಭೂಕಂಪImage Credit source: Hindustan Times
ನಯನಾ ರಾಜೀವ್
|

Updated on:Aug 16, 2023 | 9:17 AM

Share

ಮಹರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಭೂಕಂಪ ಸಂಭವಿಸಿದೆ. 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಗಳಿಲ್ಲ. ಕೊಲ್ಹಾಪುರವು ಪಶ್ಚಿಮ ಮಹಾರಾಷ್ಟ್ರದಲ್ಲಿದೆ, ಮುಂಬೈನಿಂದ ಸುಮಾರು 375 ಕಿಮೀ ದೂರದಲ್ಲಿದೆ. ಈ ನಡುವೆ ಸತಾರಾ ಜಿಲ್ಲೆಯ ಪಟಾನ್ ನಗರ ಸೇರಿದಂತೆ ಸಮೀಪದ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 6.40ಕ್ಕೆ ಭೂಕಂಪ ಸಂಭವಿಸಿದೆ.

ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಕೊಯ್ನಾ ಅಣೆಕಟ್ಟಿನಿಂದ 20 ಕಿ.ಮೀ ದೂರದಲ್ಲಿ ಭೂಕಂಪನದ ಅನುಭವವಾಗಿದ್ದು, ಅಣೆಕಟ್ಟು ಸುರಕ್ಷಿತವಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಮೂರು ತಿಂಗಳ ಹಿಂದೆ ಪಾಲ್ಘರ್‌ನಲ್ಲಿ ಭೂಕಂಪ ಸಂಭವಿಸಿತ್ತು , ಮೇ 27ರಂದು ಶನಿವಾರದಂದು ಮಹಾರಾಷ್ಟ್ರದ ಪಾಲ್ಘಡ ಜಿಲ್ಲೆಯಲ್ಲಿ 3.3 ಮತ್ತು 3.5 ತೀವ್ರತೆಯ ಲಘು ಕಂಪನಗಳು ಸಂಭವಿಸಿದವು. 3.3 ರ ತೀವ್ರತೆಯೊಂದಿಗೆ ಆರಂಭಿಕ ಕಂಪನವು ಸಂಜೆ 5:15 ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ, ನಂತರ 15 ನಿಮಿಷಗಳ ನಂತರ 5.28 ಕ್ಕೆ 3.5 ರ ತೀವ್ರತೆಯೊಂದಿಗೆ ಎರಡನೇ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Wed, 16 August 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ