AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ: 3.4 ತೀವ್ರತೆ ದಾಖಲು

Kolhapur Earthquake: ಮಹರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಭೂಕಂಪ ಸಂಭವಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ: 3.4 ತೀವ್ರತೆ ದಾಖಲು
ಭೂಕಂಪImage Credit source: Hindustan Times
ನಯನಾ ರಾಜೀವ್
|

Updated on:Aug 16, 2023 | 9:17 AM

Share

ಮಹರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಭೂಕಂಪ ಸಂಭವಿಸಿದೆ. 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಗಳಿಲ್ಲ. ಕೊಲ್ಹಾಪುರವು ಪಶ್ಚಿಮ ಮಹಾರಾಷ್ಟ್ರದಲ್ಲಿದೆ, ಮುಂಬೈನಿಂದ ಸುಮಾರು 375 ಕಿಮೀ ದೂರದಲ್ಲಿದೆ. ಈ ನಡುವೆ ಸತಾರಾ ಜಿಲ್ಲೆಯ ಪಟಾನ್ ನಗರ ಸೇರಿದಂತೆ ಸಮೀಪದ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 6.40ಕ್ಕೆ ಭೂಕಂಪ ಸಂಭವಿಸಿದೆ.

ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಕೊಯ್ನಾ ಅಣೆಕಟ್ಟಿನಿಂದ 20 ಕಿ.ಮೀ ದೂರದಲ್ಲಿ ಭೂಕಂಪನದ ಅನುಭವವಾಗಿದ್ದು, ಅಣೆಕಟ್ಟು ಸುರಕ್ಷಿತವಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಮೂರು ತಿಂಗಳ ಹಿಂದೆ ಪಾಲ್ಘರ್‌ನಲ್ಲಿ ಭೂಕಂಪ ಸಂಭವಿಸಿತ್ತು , ಮೇ 27ರಂದು ಶನಿವಾರದಂದು ಮಹಾರಾಷ್ಟ್ರದ ಪಾಲ್ಘಡ ಜಿಲ್ಲೆಯಲ್ಲಿ 3.3 ಮತ್ತು 3.5 ತೀವ್ರತೆಯ ಲಘು ಕಂಪನಗಳು ಸಂಭವಿಸಿದವು. 3.3 ರ ತೀವ್ರತೆಯೊಂದಿಗೆ ಆರಂಭಿಕ ಕಂಪನವು ಸಂಜೆ 5:15 ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ, ನಂತರ 15 ನಿಮಿಷಗಳ ನಂತರ 5.28 ಕ್ಕೆ 3.5 ರ ತೀವ್ರತೆಯೊಂದಿಗೆ ಎರಡನೇ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Wed, 16 August 23

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು