AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay of Bengal: ಬಂಗಾಳಕೊಲ್ಲಿಯಲ್ಲಿ ಕಂಪಿಸಿದ ಭೂಮಿ; 3.9 ತೀವ್ರತೆ ದಾಖಲು

Earthquake:ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಇದೇ ಪ್ರದೇಶದಲ್ಲಿ ಕಳೆದ 7 ತಿಂಗಳಲ್ಲಿ ಕನಿಷ್ಠ ಮೂರು ಭೂಕಂಪ ಸಂಭವಿಸಿದೆ. ಇದಕ್ಕೂ ಮೊದಲು ಜನವರಿ 1, 2023 ರಂದು ರಿಕ್ಟರ್ ಮಾಪಕದಲ್ಲಿ 4.5 ರ ತೀವ್ರತೆಯ ಭೂಕಂಪ ಇಲ್ಲಿ ಸಂಭವಿಸಿದ್ದು 36 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿತ್ತು

Bay of Bengal: ಬಂಗಾಳಕೊಲ್ಲಿಯಲ್ಲಿ ಕಂಪಿಸಿದ ಭೂಮಿ; 3.9 ತೀವ್ರತೆ ದಾಖಲು
ಭೂಕಂಪ
ರಶ್ಮಿ ಕಲ್ಲಕಟ್ಟ
|

Updated on:Jun 05, 2023 | 12:43 PM

Share

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (National Center for Seismology) ಪ್ರಕಾರ ಸೋಮವಾರ ಬೆಳಗ್ಗೆ ಬಂಗಾಳ ಕೊಲ್ಲಿಯಲ್ಲಿ (Bay of Bengal) 3.9 ತೀವ್ರತೆಯ ಭೂಕಂಪ (earthquake)ಸಂಭವಿಸಿದೆ. ಇದರ ಕೇಂದ್ರಬಿಂದು ಮ್ಯಾನ್ಮಾರ್ ಬಳಿ ಬಂಗಾಳ ಕೊಲ್ಲಿಯ ಕೆಳಗೆ ಇದೆ. ಭೂಕಂಪವು 15.32 ಅಕ್ಷಾಂಶ ಮತ್ತು 92.84 ರೇಖಾಂಶದಲ್ಲಿ ಕೇಂದ್ರೀಕೃತವಾಗಿತ್ತು. 10 ಕಿಲೋಮೀಟರ್ ಆಳವಿರುವ ಇದು ಭಾರತದ ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿದೆ. 2023 ಜೂನ್ 05ರಂದು 07:40:23ಕ್ಕೆ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು15.32 ಅಕ್ಷಾಂಶ ಮತ್ತು 92.84 ರೇಖಾಂಶದಲ್ಲಿದ್ದು 10 ಕಿಮೀ ಆಳಹೊಂದಿದೆ. ಇದು ಬಂಗಾಳಕೊಲ್ಲಿಯಲ್ಲಿ ಕೇಂದ್ರ ಬಿಂದು ಇದೆ ಎಂದು ಎನ್ ಸಿಎಸ್ ಟ್ವೀಟ್ ಮಾಡಿದೆ.

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಇದೇ ಪ್ರದೇಶದಲ್ಲಿ ಕಳೆದ 7 ತಿಂಗಳಲ್ಲಿ ಕನಿಷ್ಠ ಮೂರು ಭೂಕಂಪ ಸಂಭವಿಸಿದೆ. ಇದಕ್ಕೂ ಮೊದಲು ಜನವರಿ 1, 2023 ರಂದು ರಿಕ್ಟರ್ ಮಾಪಕದಲ್ಲಿ 4.5 ರ ತೀವ್ರತೆಯ ಭೂಕಂಪ ಇಲ್ಲಿ ಸಂಭವಿಸಿದ್ದು 36 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿತ್ತು. ಬೆಳಿಗ್ಗೆ 10:57 ಭೂಮಿ ಕಂಪಿಸಿದ್ದು ಅದೇ ದಿನ, ರಿಕ್ಟರ್ ಮಾಪಕದಲ್ಲಿ 3.8 ರ ತೀವ್ರತೆಯ ಮತ್ತೊಂದು ಭೂಕಂಪವು ಹರಿಯಾಣದ ಜಜ್ಜರ್‌ನ ವಾಯುವ್ಯದಲ್ಲಿ 1:19ಕ್ಕೆ ಸಂಭವಿಸಿದೆ.

ಕಳೆದ ವರ್ಷ ಡಿಸೆಂಬರ್ 5ರಂದು ರಿಕ್ಟರ್ ಮಾಪಕದಲ್ಲಿ 5.1 ರ ತೀವ್ರತೆಯ ಭೂಕಂಪ ಸಂಭವಿಸಿದೆ.ಬಂಗಾಳಕೊಲ್ಲಿಯಲ್ಲಿ 10 ಕಿ.ಮೀ ಆಳದಲ್ಲಿ ಬೆಳಗ್ಗೆ 8:32ರ ಸುಮಾರಿಗೆ ಈ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: Odisha Train Accident: ಒಡಿಶಾದ ರೈಲ್ವೆ ಟ್ರ್ಯಾಕ್​ಗಳ​ ಮೇಲೆ ಜನರಂತೆಯೇ ಅನಾಥವಾಗಿ ಬಿದ್ದಿದ್ದವು, ಬೆಂಗಾಲಿ ಕವಿತೆಯ ಸಾಲುಗಳು

ಈ ಬಾರಿ, ಭೂಕಂಪದ ಸ್ಥಳವು ಒಡಿಶಾಕ್ಕೆ ಸಮೀಪದಲ್ಲಿದೆ, ಏಕೆಂದರೆ ಇದು ಪುರಿ (ಪೂರ್ವ) ಮತ್ತು ಭುವನೇಶ್ವರ (ಪೂರ್ವ-ಆಗ್ನೇಯ) ನಿಂದ 421 ಕಿಮೀ ಮತ್ತು 434 ಕಿಮೀ ದೂರದಲ್ಲಿದೆ. ಆ ಸಮಯದಲ್ಲಿ, ಢಾಕಾ ಮತ್ತು ಬಾಂಗ್ಲಾದೇಶದ ಇತರ ಭಾಗಗಳಲ್ಲಿ ಕಂಪನದ ಅನುಭವವಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Mon, 5 June 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!