AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ಬಿಕಾನೆರ್​​ನಲ್ಲಿ 4.3ರಷ್ಟು ತೀವ್ರತೆಯ ಭೂಕಂಪ; ಹೆದರಿ ಮನೆಯಿಂದ ಓಡಿದ ಜನರು

ರಾಜಸ್ಥಾನದ ಬಿಕಾನೆರ್​ನಲ್ಲಿ ಭೂಮಿ ನಡುಗುವುದಕ್ಕೂ ಮೊದಲು ಮ್ಯಾನ್ಮಾರ್-ಭಾರತ ಗಡಿ ಕೂಡ ನಡುಗಿದೆ ಎಂದು ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ಹೇಳಿದೆ.

Rajasthan Earthquake: ಬಿಕಾನೆರ್​​ನಲ್ಲಿ 4.3ರಷ್ಟು ತೀವ್ರತೆಯ ಭೂಕಂಪ; ಹೆದರಿ ಮನೆಯಿಂದ ಓಡಿದ ಜನರು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Dec 13, 2021 | 8:38 AM

Share

ರಾಜಸ್ಥಾನದ ಬಿಕಾನೆರ್​​ನಲ್ಲಿ ಪ್ರಬಲ ಭೂಕಂಪವಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ. ಸದ್ಯ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ. ಜೀವ ಹೋದ ವರದಿಯೂ ಆಗಿಲ್ಲ. ನಿನ್ನೆ ಸಂಜೆ 6.56ರ ಹೊತ್ತಿಗೆ ಭೂಮಿ ಕಂಪಿಸಿದೆ. ಹೀಗೆ ಭೂಮಿ ನಡುಗುತ್ತಿದ್ದಂತೆ ಸ್ಥಳೀಯ ಜನರು ಗಾಬರಿಯಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಸಂಜೆ ಮನೆಯಲ್ಲಿ ಕುಳಿತಿದ್ದಾಗ ಒಮ್ಮೆಲೇ ಭೂಮಿ ಕಂಪನವಾಗಲು ಶುರುವಾಯಿತು. ಭಯದಿಂದ ಎಲ್ಲರೂ ಹೊರಗೆ ಓಡಿದೆವು. ಆದರೆ ಅದೃಷ್ಟಕ್ಕೆ ನಮ್ಮ ಮನೆ ಬೀಳಲಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.  ಇತ್ತೀಚೆಗಷ್ಟೇ ರಾಜಸ್ಥಾನದ ಜಾಲೋರ್​​ನಲ್ಲಿ ಭೂಕಂಪವಾಗಿತ್ತು. ಆಗಲೂ ಕೂಡ ಪ್ರಾಣ ಅಥವಾ ಆಸ್ತಿಪಾಸ್ತಿ ಹಾನಿಯಾಗಿರಲಿಲ್ಲ. 

ರಾಜಸ್ಥಾನದ ಬಿಕಾನೆರ್​ನಲ್ಲಿ ಭೂಮಿ ನಡುಗುವುದಕ್ಕೂ ಮೊದಲು ಮ್ಯಾನ್ಮಾರ್-ಭಾರತ ಗಡಿ ಕೂಡ ನಡುಗಿದೆ. ಮಿಝೋರಾಂನ ಥೆಂಜಾವ್ಲ್​, ಪಶ್ಚಿಮ ಬಂಗಾಳದ ಕೋಲ್ಕತ್ತಗಳಲ್ಲಿಯೂ ಭೂಕಂಪನದ ಅನುಭವ ಆಗಿದೆ. ಅದರಲ್ಲೂ ಮಿಝೋರಾಂನ ಥೆಂಜಾವ್ಲ್​​ನಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎನ್ನಲಾಗಿದೆ. ಭಾರತ-ಮೈನ್ಮಾರ್​ ಗಡಿಯ ಭೂಕಂಪನದ ಕೇಂದ್ರ ಥೆಂಜಾವ್ಲ್​ ಆಗಿತ್ತು ಎಂದು ಭಾರತೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ.

ಇದನ್ನೂ ಓದಿ: Virat Kohli: ವಿದೇಶಿ ತಂಡಕ್ಕೆ ನಡುಕ ಹುಟ್ಟಿಸಿದೆ ವಿರಾಟ್ ಕೊಹ್ಲಿ ಬಗ್ಗೆ ಗೌತಮ್ ಗಂಭೀರ್ ನೀಡಿದ ಆ ಒಂದು ಹೇಳಿಕೆ

Published On - 8:38 am, Mon, 13 December 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ