AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಜಮ್ಮು ಕಾಶ್ಮೀರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ, ಬೆಳಗ್ಗೆ ಎರಡು ಬಾರಿ ಕಂಪನದ ಅನುಭವವಾಗಿದೆ. 4.9 ಹಾಗೂ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಇದರ ಆಳವು 5 ಕಿ.ಮೀ ಎಂದು ಹೇಳಲಾಗುತ್ತಿದೆ.

Earthquake: ಜಮ್ಮು ಕಾಶ್ಮೀರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ
ಭೂಕಂಪ
ನಯನಾ ರಾಜೀವ್
|

Updated on:Aug 20, 2024 | 8:12 AM

Share

ಜಮ್ಮು ಕಾಶ್ಮೀರದಲ್ಲಿ ಇಂದು ಎರಡು ಬಾರಿ ಭೂಮಿ ಕಂಪಿಸಿದೆ. 4.9 ಹಾಗೂ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಇದರ ಆಳವು 5 ಕಿ.ಮೀ ಎಂದು ಹೇಳಲಾಗುತ್ತಿದೆ.

ಪ್ರಬಲ ಭೂಕಂಪದಿಂದಾಗಿ ಜನರಲ್ಲಿ ಭೀತಿ ಉಂಟಾಗಿದೆ, ಜನರು ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದರು. ಮುಂಜಾನೆ ಸಂಭವಿಸಿದ ಈ ಭೂಕಂಪದಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜುಲೈ 12 ರಂದು ಕೂಡ ಭೂಕಂಪ ಸಂಭವಿಸಿತ್ತು

ಇದಕ್ಕೂ ಮೊದಲು ಜುಲೈ 12 ರಂದು ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭೂಕಂಪನದ ಅನುಭವವಾಗಿತ್ತು. ನಂತರ ಕಾಶ್ಮೀರದ ಬಾರಾಮುಲ್ಲಾದ ಜನರು ಮಧ್ಯಾಹ್ನ 12.26 ರ ಸುಮಾರಿಗೆ ಕಂಪನವನ್ನು ಅನುಭವಿಸಿದರು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.1 ಎಂದು ಅಳೆಯಲಾಗಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ 10 ಕಿಲೋಮೀಟರ್ ಕೆಳಗೆ ಇತ್ತು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 6.45 ರ ಸುಮಾರಿಗೆ ಈ ಪ್ರದೇಶದಲ್ಲಿ ಭೂಕಂಪನದ ಅನುಭವವಾಯಿತು. ಭೂಕಂಪದ ಕೇಂದ್ರಬಿಂದು 5 ಕಿಲೋಮೀಟರ್ ಆಳದಲ್ಲಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಕಾರ್ಗಿಲ್ ಮತ್ತು ಲಡಾಖ್‌ನಲ್ಲಿ ಪ್ರಬಲ ಭೂಕಂಪನವು ಸಂಭವಿಸಿತ್ತು.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.2 ಎಂದು ಅಳೆಯಲಾಗಿತ್ತು. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾಗಿರಲಿಲ್ಲ. ರಾತ್ರಿ 9.35ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಈ ಹಿಂದೆ ಡಿಸೆಂಬರ್‌ನಲ್ಲಿಯೂ ಭೂಕಂಪ ಸಂಭವಿಸಿತ್ತು.

ಭೂಕಂಪದ ತೀವ್ರತೆಯನ್ನು ರಿಕ್ಟರ್​ ಮಾಪಕದಲ್ಲಿ ಅಳೆಯಲಾಗುತ್ತದೆ. ರಿಕ್ಟರ್ ಮಾಪಕದಲ್ಲಿ ಅದರ ಕೇಂದ್ರದಿಂದ ಅಂದರೆ 1ರಿಂದ 9ರವರೆಗೆ ಅಳೆಯಲಾಗುತ್ತದೆ. ಈ ಮಾಪಕವು ಭೂಕಂಪದ ಸಮಯದಲ್ಲಿ ಭೂಮಿಯೊಳಗಿಂದ ಬಿಡುಗಡೆಯಾಗುವ ಶಕ್ತಿಯ ಆಧಾರದ ಮೇಲೆ ತೀವ್ರತೆಯನ್ನು ಅಳೆಯುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:12 am, Tue, 20 August 24

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?