AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಜಮ್ಮು ಕಾಶ್ಮೀರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ, ಬೆಳಗ್ಗೆ ಎರಡು ಬಾರಿ ಕಂಪನದ ಅನುಭವವಾಗಿದೆ. 4.9 ಹಾಗೂ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಇದರ ಆಳವು 5 ಕಿ.ಮೀ ಎಂದು ಹೇಳಲಾಗುತ್ತಿದೆ.

Earthquake: ಜಮ್ಮು ಕಾಶ್ಮೀರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ
ಭೂಕಂಪ
ನಯನಾ ರಾಜೀವ್
|

Updated on:Aug 20, 2024 | 8:12 AM

Share

ಜಮ್ಮು ಕಾಶ್ಮೀರದಲ್ಲಿ ಇಂದು ಎರಡು ಬಾರಿ ಭೂಮಿ ಕಂಪಿಸಿದೆ. 4.9 ಹಾಗೂ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಇದರ ಆಳವು 5 ಕಿ.ಮೀ ಎಂದು ಹೇಳಲಾಗುತ್ತಿದೆ.

ಪ್ರಬಲ ಭೂಕಂಪದಿಂದಾಗಿ ಜನರಲ್ಲಿ ಭೀತಿ ಉಂಟಾಗಿದೆ, ಜನರು ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದರು. ಮುಂಜಾನೆ ಸಂಭವಿಸಿದ ಈ ಭೂಕಂಪದಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜುಲೈ 12 ರಂದು ಕೂಡ ಭೂಕಂಪ ಸಂಭವಿಸಿತ್ತು

ಇದಕ್ಕೂ ಮೊದಲು ಜುಲೈ 12 ರಂದು ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭೂಕಂಪನದ ಅನುಭವವಾಗಿತ್ತು. ನಂತರ ಕಾಶ್ಮೀರದ ಬಾರಾಮುಲ್ಲಾದ ಜನರು ಮಧ್ಯಾಹ್ನ 12.26 ರ ಸುಮಾರಿಗೆ ಕಂಪನವನ್ನು ಅನುಭವಿಸಿದರು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.1 ಎಂದು ಅಳೆಯಲಾಗಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ 10 ಕಿಲೋಮೀಟರ್ ಕೆಳಗೆ ಇತ್ತು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 6.45 ರ ಸುಮಾರಿಗೆ ಈ ಪ್ರದೇಶದಲ್ಲಿ ಭೂಕಂಪನದ ಅನುಭವವಾಯಿತು. ಭೂಕಂಪದ ಕೇಂದ್ರಬಿಂದು 5 ಕಿಲೋಮೀಟರ್ ಆಳದಲ್ಲಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಕಾರ್ಗಿಲ್ ಮತ್ತು ಲಡಾಖ್‌ನಲ್ಲಿ ಪ್ರಬಲ ಭೂಕಂಪನವು ಸಂಭವಿಸಿತ್ತು.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.2 ಎಂದು ಅಳೆಯಲಾಗಿತ್ತು. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾಗಿರಲಿಲ್ಲ. ರಾತ್ರಿ 9.35ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಈ ಹಿಂದೆ ಡಿಸೆಂಬರ್‌ನಲ್ಲಿಯೂ ಭೂಕಂಪ ಸಂಭವಿಸಿತ್ತು.

ಭೂಕಂಪದ ತೀವ್ರತೆಯನ್ನು ರಿಕ್ಟರ್​ ಮಾಪಕದಲ್ಲಿ ಅಳೆಯಲಾಗುತ್ತದೆ. ರಿಕ್ಟರ್ ಮಾಪಕದಲ್ಲಿ ಅದರ ಕೇಂದ್ರದಿಂದ ಅಂದರೆ 1ರಿಂದ 9ರವರೆಗೆ ಅಳೆಯಲಾಗುತ್ತದೆ. ಈ ಮಾಪಕವು ಭೂಕಂಪದ ಸಮಯದಲ್ಲಿ ಭೂಮಿಯೊಳಗಿಂದ ಬಿಡುಗಡೆಯಾಗುವ ಶಕ್ತಿಯ ಆಧಾರದ ಮೇಲೆ ತೀವ್ರತೆಯನ್ನು ಅಳೆಯುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:12 am, Tue, 20 August 24

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ