AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ 6.4 ತೀವ್ರತೆಯ ಭಾರೀ ಭೂಕಂಪನ, ಹಲವು ಕಟ್ಟಡಗಳು ಬಿರುಕು

ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆಯ ಭೂಕಂಪನವು ಸಂಭವಿಸಿದೆ. ಅಸ್ಸಾಂನ ಸೋನಿತ್ಪುರ ಭೂಕಂಪನದ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ. ಕಂಪನದ ಅನುಭವ ಆಗುತ್ತಿದ್ದಂತೆ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಅಸ್ಸಾಂನಲ್ಲಿ 6.4 ತೀವ್ರತೆಯ ಭಾರೀ ಭೂಕಂಪನ, ಹಲವು ಕಟ್ಟಡಗಳು ಬಿರುಕು
ಭಾರೀ ಭೂಕಂಪನ ಹಲವು ಕಟ್ಟಡಗಳು ಬಿರುಕು
ಆಯೇಷಾ ಬಾನು
|

Updated on:Apr 28, 2021 | 11:41 AM

Share

ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪನವು ಬುಧವಾರ ಬೆಳಿಗ್ಗೆ ಅಸ್ಸಾಂನ ಸೋನಿತ್ಪುರದಲ್ಲಿ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಂದು ಬೆಳಗ್ಗೆ 7ಗಂಟೆ 55 ನಿಮಿಷಕ್ಕೆ ಅಸ್ಸಾಂನ ಗುವಾಹಟಿ ಸೇರಿದಂತೆ ಈಶಾನ್ಯ ಭಾಗದಲ್ಲಿ ಭೂಕಂಪನವಾಗಿದೆ.

ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆಯ ಭೂಕಂಪನವು ಸಂಭವಿಸಿದೆ. ಅಸ್ಸಾಂನ ಸೋನಿತ್ಪುರ ಭೂಕಂಪನದ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ. ಕಂಪನದ ಅನುಭವ ಆಗುತ್ತಿದ್ದಂತೆ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಭೂಕಂಪನದ ತೀವ್ರತೆಗೆ ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ ಎಂದು ವರದಿಯಾಗಿದೆ.

“ಅಸ್ಸಾಂನಲ್ಲಿ ಭಾರೀ ಭೂಕಂಪನದ ಅನುಭವವಾಗಿದೆ. ವಿವರಗಳಿಗಾಗಿ ಕಾಯುತ್ತಿದ್ದೇನೆ ಎಂದು ಅಸ್ಸಾಂನ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಭೂಕಂಪನದ ಅನುಭವವಾದ ಕೂಡಲೇ ಟ್ವೀಟ್ ಮಾಡಿದ್ದಾರೆ.

ಘಟನೆ ಬಳಿಕ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ನಾಗರಿಕರನ್ನು ಜಾಗರೂಕರಾಗಿರಲು ತಿಳಿಸಿದ್ದಾರೆ. “ದೊಡ್ಡ ಭೂಕಂಪನವು ಅಸ್ಸಾಂಗೆ ಅಪ್ಪಳಿಸಿದೆ. ಎಲ್ಲರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಮತ್ತು ಎಲ್ಲರೂ ಜಾಗರೂಕರಾಗಿರಲು ನಾನು ವಿನಂತಿಸುತ್ತೇನೆ ” ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಆದ ಭೂಕಂಪನ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಲ್ಲಿ ಭೂಕಂಪದ ತೀವ್ರತೆ ಕಂಡುಬಂದಿದ್ದು. ಇದರಿಂದ ರಸ್ತೆಗಳು ಬಿರುಕು ಬಿಟ್ಟಿರುವುದನ್ನು ಕಾಣಬಹುದು. ವೀವಿಡಿಯೋವೊಂದರಲ್ಲಿ, ನೋಗಾನ್‌ನಲ್ಲಿ, ಸೋನಿತ್‌ಪುರಕ್ಕೆ ಸಮೀಪವಿರುವ ಒಂದು ಕಟ್ಟಡವು ಭೂಕಂಪನದ ತೀವ್ರತೆಗೆ ಅದರ ಪಕ್ಕದ ಕಟ್ಟಡದತ್ತ ವಾಲುತ್ತಿದೆ.

ಇದನ್ನೂ ಓದಿ: Earthquake: ದೆಹಲಿ, NCR ಸುತ್ತಮುತ್ತ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 6.1ರಷ್ಟು ತೀವ್ರತೆ ದಾಖಲು

Published On - 8:47 am, Wed, 28 April 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು