
ನವದೆಹಲಿ, ಏಪ್ರಿಲ್ 3: ಇಂದು ಸಂಜೆ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರಬಲ ಭೂಕಂಪನದ (Earthquake in Delhi) ಅನುಭವವಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀತಿಯನ್ನು ಉಂಟುಮಾಡಿದೆ. ದೆಹಲಿ-ಎನ್ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದರು.
ಇಂದು ಸಂಜೆ ದೆಹಲಿ-ಎನ್ಸಿಆರ್ನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದಾದ್ಯಂತ ಕಂಪನದ ಅನುಭವವಾಗಿದೆ. ಇದರ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿದೆ ಎಂದು ವರದಿಯಾಗಿದೆ.
#WATCH | Jammu & Kashmir: An earthquake was felt in Srinagar. Chandeliers and fans were seen moving. pic.twitter.com/iFx5OTZ7uB
— ANI (@ANI) April 3, 2026
ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ ಎನ್ನಲಾಗಿದೆ. ದೆಹಲಿ ಮತ್ತು ಪಕ್ಕದ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿಯೂ ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿಬರುತ್ತಿರುವ ದೃಶ್ಯ ಕಂಡುಬಂದಿತು. ಇದುವರೆಗೂ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
#WATCH | Jammu & Kashmir: An earthquake was felt in Poonch, fans were seen moving. Further details awaited. pic.twitter.com/PUcPuPm7vb
— ANI (@ANI) April 3, 2026
ಇದನ್ನೂ ಓದಿ: Indonesia Earthquake: ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪದ ನಂತರ ದೆಹಲಿ-ಎನ್ಸಿಆರ್ ಮತ್ತು ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿ 9.50ರ ಸುಮಾರಿಗೆ ಉಂಟಾದ ಭೂಕಂಪನವು ನೋಯ್ಡಾ, ಚಂಡೀಗಢ, ಪಂಜಾಬ್ನ ಲುಧಿಯಾನ, ಮತ್ತು ಜಮ್ಮು ಮತ್ತು ಕಾಶ್ಮೀರದ ಪೂಂಚ್, ಶ್ರೀನಗರ ಮತ್ತು ಉಧಂಪುರ ಸೇರಿದಂತೆ ಹಲವಾರು ನಗರಗಳಲ್ಲಿಯೂ ಕಂಡುಬಂದಿದೆ. ಈ ಕಂಪನವು ಕೆಲವೇ ಸೆಕೆಂಡುಗಳ ಕಾಲ ಉಂಟಾಯಿತು. ಆದರೆ ಜನರು ಭಯಭೀತರಾಗಿ ಸುರಕ್ಷತೆಗಾಗಿ ಹೊರಗೆ ಓಡಿಬಂದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:04 pm, Fri, 3 April 26