AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas ಯಾಸ್ ಚಂಡಮಾರುತದಿಂದಾಗಿ 25 ರೈಲು ರದ್ದುಗೊಳಿಸಿದ ಪೂರ್ವ ರೈಲ್ವೆ

Eastern railway: ತೀವ್ರ ಚಂಡಮಾರುತ ಯಾಸ್, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ನಡುವೆ ದೇಶದ ಪೂರ್ವ ಕರಾವಳಿಯನ್ನು ಅಪ್ಪಳಿಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಇದು ಮೇ 26 ರ ಸಂಜೆ ಒಡಿಶಾದ ಪರದೀಪ್ ಮತ್ತು ಪಶ್ಚಿಮ ಬಂಗಾಳದ ಸಾಗರ್ ದ್ವೀಪಗಳ ನಡುವೆ ಅಪ್ಪಳಿಸಲಿದೆ.

Cyclone Yaas ಯಾಸ್ ಚಂಡಮಾರುತದಿಂದಾಗಿ 25 ರೈಲು ರದ್ದುಗೊಳಿಸಿದ ಪೂರ್ವ ರೈಲ್ವೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: May 24, 2021 | 3:32 PM

Share

ದೆಹಲಿ: ಯಾಸ್ ಚಂಡಮಾರುತದ ಮುನ್ಸೂಚನೆಯಿಂದಾಗಿ ಪೂರ್ವ ರೈಲ್ವೆ ಮೇ 24 ರಿಂದ ಮೇ 29 ರವರೆಗೆ ದೇಶದ ಪೂರ್ವ ಕರಾವಳಿಯ ಸಮೀಪ ಚಲಿಸುವ 25 ರೈಲುಗಳನ್ನು ರದ್ದುಗೊಳಿಸಿದೆ. ರದ್ದಾದ ರೈಲುಗಳ ಪಟ್ಟಿಯಲ್ಲಿ ಗುವಾಹಟಿ-ಬೆಂಗಳೂರು ಕಂಟೋನ್ಮೆಂಟ್, ಮುಜಾಫರ್​ಪುರ್-ಯಶವಂತಪುರ, ಎರ್ನಾಕುಲಂ-ಪಾಟ್ನಾ ರೈಲು, ನ್ಯೂ ಟಿನ್ಸುಕಿಯಾ-ತಾಂಬರಂ , ಭಾಗಲ್ಪುರ್-ಯಶವಂತಪುರ ರೈಲು ಸೇರಿದೆ ಪೂರ್ವ ರೈಲ್ವೆ ಪೂರ್ಣ ಪಟ್ಟಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ತೀವ್ರ ಚಂಡಮಾರುತ ಯಾಸ್, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ನಡುವೆ ದೇಶದ ಪೂರ್ವ ಕರಾವಳಿಯನ್ನು ಅಪ್ಪಳಿಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಇದು ಮೇ 26 ರ ಸಂಜೆ ಒಡಿಶಾದ ಪರದೀಪ್ ಮತ್ತು ಪಶ್ಚಿಮ ಬಂಗಾಳದ ಸಾಗರ್ ದ್ವೀಪಗಳ ನಡುವೆ ಅಪ್ಪಳಿಸಲಿದೆ. ಹತ್ತಿರದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇದು ಮೇ 26 ರ ಸಂಜೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ತೀರಗಳನ್ನು ದಾಟಲಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಆ ಚಂಡಮಾರುತ ಗಂಟೆಗೆ ಸುಮಾರು 155-165 ಕಿ.ಮೀಯಿಂದ ಗಂಟೆಗೆ 185 ಕಿ.ಮೀವರೆಗೆ ವೇಗ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಐಎಮ್‌ಡಿಯ ಹವಾಮಾನ ಮಹಾನಿರ್ದೇಶಕ ಡಾ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

ಇದು ಬೃಹತ್ ಪ್ರಮಾಣದ ಮತ್ತು ಹಾನಿಕಾರಕವಾದ ಗಾಳಿಯ ವೇಗವಾಗಿದೆ. ಇದು ತೌಕ್ತೆ ಚಂಡಮಾರುತದ ಗಾಳಿಯ ವೇಗವನ್ನು ಹೋಲುತ್ತದೆ. ಕಳೆದ ವರ್ಷ ಭೂಕುಸಿತವನ್ನು ಉಂಟುಮಾಡಿದ ಆಂಫಾನ್ ಚಂಡಮಾರುತವೂ ಸಹ ಇದೇ ರೀತಿಯ ಗಾಳಿಯ ವೇಗವನ್ನು ಹೊಂದಿದೆ ಎಂದು ಡಾ ಮೊಹಾಪಾತ್ರ ಸಹ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಂಡಮಾರುತದಿಂದ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಏತನ್ಮಧ್ಯೆ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಸುಮಾರು 1,000 ಸಿಬ್ಬಂದಿಯನ್ನು ರಕ್ಷಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ನೌಕಾಪಡೆ ಮತ್ತು ವಾಯುಪಡೆಯು ಡಜನ್ ಗಟ್ಟಲೆ ವಿಮಾನಗಳನ್ನು ಸ್ಟ್ಯಾಂಡ್-ಬೈನಲ್ಲಿ ಇರಿಸಿದೆ.

ಇದನ್ನೂ ಓದಿ: Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

Cyclone Yaas: ಯಾಸ್ ಚಂಡಮಾರುತ ಎದುರಿಸಲು ಕೈಗೊಂಡ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!