AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas ಯಾಸ್ ಚಂಡಮಾರುತದಿಂದಾಗಿ 25 ರೈಲು ರದ್ದುಗೊಳಿಸಿದ ಪೂರ್ವ ರೈಲ್ವೆ

Eastern railway: ತೀವ್ರ ಚಂಡಮಾರುತ ಯಾಸ್, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ನಡುವೆ ದೇಶದ ಪೂರ್ವ ಕರಾವಳಿಯನ್ನು ಅಪ್ಪಳಿಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಇದು ಮೇ 26 ರ ಸಂಜೆ ಒಡಿಶಾದ ಪರದೀಪ್ ಮತ್ತು ಪಶ್ಚಿಮ ಬಂಗಾಳದ ಸಾಗರ್ ದ್ವೀಪಗಳ ನಡುವೆ ಅಪ್ಪಳಿಸಲಿದೆ.

Cyclone Yaas ಯಾಸ್ ಚಂಡಮಾರುತದಿಂದಾಗಿ 25 ರೈಲು ರದ್ದುಗೊಳಿಸಿದ ಪೂರ್ವ ರೈಲ್ವೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: May 24, 2021 | 3:32 PM

Share

ದೆಹಲಿ: ಯಾಸ್ ಚಂಡಮಾರುತದ ಮುನ್ಸೂಚನೆಯಿಂದಾಗಿ ಪೂರ್ವ ರೈಲ್ವೆ ಮೇ 24 ರಿಂದ ಮೇ 29 ರವರೆಗೆ ದೇಶದ ಪೂರ್ವ ಕರಾವಳಿಯ ಸಮೀಪ ಚಲಿಸುವ 25 ರೈಲುಗಳನ್ನು ರದ್ದುಗೊಳಿಸಿದೆ. ರದ್ದಾದ ರೈಲುಗಳ ಪಟ್ಟಿಯಲ್ಲಿ ಗುವಾಹಟಿ-ಬೆಂಗಳೂರು ಕಂಟೋನ್ಮೆಂಟ್, ಮುಜಾಫರ್​ಪುರ್-ಯಶವಂತಪುರ, ಎರ್ನಾಕುಲಂ-ಪಾಟ್ನಾ ರೈಲು, ನ್ಯೂ ಟಿನ್ಸುಕಿಯಾ-ತಾಂಬರಂ , ಭಾಗಲ್ಪುರ್-ಯಶವಂತಪುರ ರೈಲು ಸೇರಿದೆ ಪೂರ್ವ ರೈಲ್ವೆ ಪೂರ್ಣ ಪಟ್ಟಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ತೀವ್ರ ಚಂಡಮಾರುತ ಯಾಸ್, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ನಡುವೆ ದೇಶದ ಪೂರ್ವ ಕರಾವಳಿಯನ್ನು ಅಪ್ಪಳಿಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಇದು ಮೇ 26 ರ ಸಂಜೆ ಒಡಿಶಾದ ಪರದೀಪ್ ಮತ್ತು ಪಶ್ಚಿಮ ಬಂಗಾಳದ ಸಾಗರ್ ದ್ವೀಪಗಳ ನಡುವೆ ಅಪ್ಪಳಿಸಲಿದೆ. ಹತ್ತಿರದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇದು ಮೇ 26 ರ ಸಂಜೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ತೀರಗಳನ್ನು ದಾಟಲಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಆ ಚಂಡಮಾರುತ ಗಂಟೆಗೆ ಸುಮಾರು 155-165 ಕಿ.ಮೀಯಿಂದ ಗಂಟೆಗೆ 185 ಕಿ.ಮೀವರೆಗೆ ವೇಗ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಐಎಮ್‌ಡಿಯ ಹವಾಮಾನ ಮಹಾನಿರ್ದೇಶಕ ಡಾ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

ಇದು ಬೃಹತ್ ಪ್ರಮಾಣದ ಮತ್ತು ಹಾನಿಕಾರಕವಾದ ಗಾಳಿಯ ವೇಗವಾಗಿದೆ. ಇದು ತೌಕ್ತೆ ಚಂಡಮಾರುತದ ಗಾಳಿಯ ವೇಗವನ್ನು ಹೋಲುತ್ತದೆ. ಕಳೆದ ವರ್ಷ ಭೂಕುಸಿತವನ್ನು ಉಂಟುಮಾಡಿದ ಆಂಫಾನ್ ಚಂಡಮಾರುತವೂ ಸಹ ಇದೇ ರೀತಿಯ ಗಾಳಿಯ ವೇಗವನ್ನು ಹೊಂದಿದೆ ಎಂದು ಡಾ ಮೊಹಾಪಾತ್ರ ಸಹ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಂಡಮಾರುತದಿಂದ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಏತನ್ಮಧ್ಯೆ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಸುಮಾರು 1,000 ಸಿಬ್ಬಂದಿಯನ್ನು ರಕ್ಷಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ನೌಕಾಪಡೆ ಮತ್ತು ವಾಯುಪಡೆಯು ಡಜನ್ ಗಟ್ಟಲೆ ವಿಮಾನಗಳನ್ನು ಸ್ಟ್ಯಾಂಡ್-ಬೈನಲ್ಲಿ ಇರಿಸಿದೆ.

ಇದನ್ನೂ ಓದಿ: Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

Cyclone Yaas: ಯಾಸ್ ಚಂಡಮಾರುತ ಎದುರಿಸಲು ಕೈಗೊಂಡ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?