AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋಗಳು ಮೊಬೈಲ್​​ನಲ್ಲಿ ಸುಲಭಕ್ಕೆ ಸಿಗುವುದೇ ಅತ್ಯಾಚಾರ ಹೆಚ್ಚಲು ಕಾರಣ: ಗುಜರಾತ್​ ಗೃಹ ಸಚಿವ

ಎಲ್ಲಾದರೂ ಅತ್ಯಾಚಾರ ನಡೆದರೆ ಸಾಕು, ಅಲ್ಲಿನ ಕಾನೂನು ವ್ಯವಸ್ಥೆಯನ್ನು, ಪೊಲೀಸ್​ ಸಿಬ್ಬಂದಿಯನ್ನು ದೂಷಿಸುವುದನ್ನು ಪರಿಪಾಠ ಮಾಡಿಕೊಂಡುಬಿಟ್ಟಿದ್ದೇವೆ. ಆದರೆ ಇಂಥ ಘಟನೆ ನಡೆದಾಗ ನಾವು ಕೇವಲ ಪೊಲೀಸರನ್ನು ದೂಷಿಸುವುದು ಸರಿಯಲ್ಲ ಎಂದೂ ಸಚಿವರು ಹೇಳಿದ್ದಾರೆ.

ಅಶ್ಲೀಲ ವಿಡಿಯೋಗಳು ಮೊಬೈಲ್​​ನಲ್ಲಿ ಸುಲಭಕ್ಕೆ ಸಿಗುವುದೇ ಅತ್ಯಾಚಾರ ಹೆಚ್ಚಲು ಕಾರಣ: ಗುಜರಾತ್​ ಗೃಹ ಸಚಿವ
ಗುಜರಾತ್ ಗೃಹ ಸಚಿವ
Follow us
TV9 Web
| Updated By: Lakshmi Hegde

Updated on: Apr 02, 2022 | 4:52 PM

ಪ್ರತಿದಿನ ಒಂದಲ್ಲ ಒಂದು ಪ್ರದೇಶದಿಂದ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಅತ್ಯಂತ ಭೀಕರ, ಹೇಯ ಎನ್ನಿಸುವ, ಕನಿಕರ ಹುಟ್ಟಿಸುವ, ಕ್ರೌರ್ಯ ಹೀಗೂ ಇರುತ್ತದೆಯಾ ಎಂಬ ಭಾವ ತರುವ ರೇಪ್​ ಕೇಸ್​ಗಳು ವರದಿಯಾಗುತ್ತಲೇ ಇರುತ್ತವೆ. ಎಷ್ಟೇ ಕಠಿಣ ಕಾನೂನು ತಂದರೂ ಕಾಮುಕರು ಅದನ್ನೆಲ್ಲ ಮೀರಿ ಅಪರಾಧವೆಸಗುತ್ತಲೇ ಇದ್ದಾರೆ. ಹೀಗೆ ಅತ್ಯಾಚಾರ ಹೆಚ್ಚಾಗಲು ಕಾರಣಗಳನ್ನು ಏಕಮುಖವಾಗಿ ವಿಶ್ಲೇಷಿಸಲು ಸಾಧ್ಯವಿಲ್ಲ. ಅಷ್ಟಕ್ಕೂ ಕಾಮುಕರ ವಿಕೃತ ಕಾಮಕ್ಕೆ ಮುಖವೂ ಇಲ್ಲ, ಮನುಷ್ಯತ್ವವೂ ಇಲ್ಲ. 

ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ಗುಜರಾತ್​ ಗೃಹ ಇಲಾಖೆ ಸಚಿವ ಹರ್ಷ ಸಂಘ್ವಿ ಮಾತನಾಡಿದ್ದಾರೆ. ಈಗೀಗ ಅಶ್ಲೀಲ ಚಿತ್ರಗಳು, ಪೋರ್ನ್​ ವಿಡಿಯೋಗಳೆಲ್ಲ ಮೊಬೈಲ್​​ನಲ್ಲಿ ಅತ್ಯಂತ ಸುಲಭವಾಗಿ ಸಿಗುತ್ತವೆ. ಯಾರು ಬೇಕಾದರೂ ಅದನ್ನು ನೋಡುವಷ್ಟು ಸರಳವಾಗಿದೆ. ಹೀಗಾಗಿಯೇ ದೇಶದಲ್ಲಿ ರೇಪ್​ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತದಲ್ಲಿ ವರದಿಯಾಗುತ್ತಿರುವ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳು, ಸಂತ್ರಸ್ತ ಯುವತಿಯ ಸಂಬಂಧಿಕರೋ, ಕುಟುಂಬದ ಸದಸ್ಯರೋ ಅಥವಾ ನೆರೆಹೊರೆಯವರೇ ಆಗಿರುತ್ತಾರೆ ಎಂದೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಲ್ಲಾದರೂ ಅತ್ಯಾಚಾರ ನಡೆದರೆ ಸಾಕು, ಅಲ್ಲಿನ ಕಾನೂನು ವ್ಯವಸ್ಥೆಯನ್ನು, ಪೊಲೀಸ್​ ಸಿಬ್ಬಂದಿಯನ್ನು ದೂಷಿಸುವುದನ್ನು ಪರಿಪಾಠ ಮಾಡಿಕೊಂಡುಬಿಟ್ಟಿದ್ದೇವೆ. ಆದರೆ ಇಂಥ ಘಟನೆ ನಡೆದಾಗ ನಾವು ಕೇವಲ ಪೊಲೀಸರನ್ನು ದೂಷಿಸುವುದು ಸರಿಯಲ್ಲ. ಇಡೀ ಸಮಾಜವೇ ಹೊಣೆಯಾಗುತ್ತದೆ. ಒಂದೊಮ್ಮೆ ಅಪ್ಪ ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡಿದರೆ, ಅದು ದೊಡ್ಡ ಮಟ್ಟದ ಹೇಯಕೃತ್ಯ. ಅದಕ್ಕೆ ಕಾರಣವೂ ಮೊಬೈಲ್​ ಫೋನ್​. ಈ ಫೋನ್​ನಿಂದ ಕ್ರೈಂಗಳ ಪ್ರಮಾಣವೂ ಹೆಚ್ಚುತ್ತಿದೆ ಎಂಬುದನ್ನು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಇದ್ದುದರಲ್ಲಿ ದೇಶದಲ್ಲಿಯೇ, ಗುಜರಾತ್ ಅತ್ಯಂತ ಸುರಕ್ಷಿತ ರಾಜ್ಯ. ಇಲ್ಲಿ ಅತ್ಯಾಚಾರ ಪ್ರಕರಣಗಳು ಕಡಿಮೆ ಎಂದು ಸಚಿವರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: K Annamalai: ಮಾಜಿ ಐಪಿಎಸ್, ತಮಿಳುನಾಡು ಬಿಜೆಪಿ ನಾಯಕ ಕೆ ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ, ಅವರಿಗಿದ್ದ ಭೀತಿ ಏನು?

ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ