AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ಪಷ್ಟವಾಗಿ ನಿರಾಕರಿಸಿದೆ. ಇಂತಹ ವರದಿಗಳು ಅವೈಜ್ಞಾನಿಕ ಮತ್ತು ಆಧಾರರಹಿತವಾಗಿದ್ದು, ಯಾರು ನಂಬಬಾರದು ಎಂದು ಹೇಳಿದೆ. ಆ ಮೂಲಕ ಎಲ್ಲಾ ಗೊಂದಲಗಳಿಗೆ ಪ್ರಾಧಿಕಾರ ತೆರೆ ಎಳೆದಿದೆ.

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Dec 21, 2025 | 10:50 AM

Share

ದೆಹಲಿ, ಡಿಸೆಂಬರ್​ 21: ಮೊಟ್ಟೆ (Egg) ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಸದ್ಯ ದೇಶದಲ್ಲಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು, ದಾರಿತಪ್ಪಿಸುವ ಮೂಲಕ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಉಂಟು ಮಾಡುತ್ತಿದ್ದು, ಅಂತಹ ವರದಿಗಳನ್ನು ನಂಬದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ.

ಇದನ್ನೂ ಓದಿ: ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? ಮೊಟ್ಟೆ ರಹಸ್ಯ ಬಿಚ್ಚಿಟ್ಟ ತಜ್ಞ ವೈದ್ಯರು, ಎಲ್ಲಾ ಗೊಂದಲಗಳಿಗೆ ತೆರೆ!

ಎಗ್ಗೋಜ್​ ನ್ಯೂಟ್ರಿಷನ್ ಕಂಪನಿಯ ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶ ಇದೆ ಅಂತಾ ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಇದು ಸಾರ್ವಜನಿಕರಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಆಹಾರ ಸುರಕ್ಷತೆ ಮತ್ತು ಮಾನದಂಡ ನಿಯಮ 2011ರ ಅಡಿಯಲ್ಲಿ ಕೋಳಿ ಮತ್ತು ಮೊಟ್ಟೆಗಳ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಫ್ಯೂರಾನ್‌ಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಾಗಾಗಿ ಮೊಟ್ಟೆಗಳಲ್ಲಿ ಕ್ಯಾನ್ಸರ್ ಅಂಶ ಇರುವುದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ಆಗಿದೆ.

ಇದನ್ನೂ ಓದಿ: ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಸೋಶಿಯಲ್​​ ಮೀಡಿಯಾಗಳಲ್ಲೀಗ ಇದೇ ಚರ್ಚೆ!

ಮೊಟ್ಟೆಗಳು ಅಸುರಕ್ಷಿತವೆಂಬುವುದು ಒಂದೆರಡು ಪ್ರಾಯೋಗಿಕ ಸಂಶೋಧನೆಗಳನ್ನು ವೈಜ್ಞಾನಿಕವಾಗಿ ಸರಿಯಲ್ಲವೆಂದು ಸಂಸ್ಥೆ ಹೇಳಿದ್ದು, ಆಹಾರ ಸುರಕ್ಷತಾ ನಿಯಮಗಳಿಗೆ ಅನುಸಾರವಾಗಿ ಮೊಟ್ಟೆಗಳನ್ನು ಉತ್ಪಾದಿಸಿ ಸೇವಿಸಿದಾಗ ಅವು ಸಮತೋಲಿತ ಆಹಾರದ ಸುರಕ್ಷಿತ, ಪೌಷ್ಟಿಕ ಮತ್ತು ಮೌಲ್ಯಯುತ ಅಂಶವಾಗಿ ಉಳಿಯುತ್ತವೆ ಎಂದು FSSAI ಪುನರುಚ್ಚರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:47 am, Sun, 21 December 25

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್