AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu-Kashmir Election Result 2024: ಜಮ್ಮು-ಕಾಶ್ಮೀರದ ಬಸೋಲಿಯಲ್ಲಿ ಬಿಜೆಪಿಗೆ ಆರಂಭಿಕ ಗೆಲುವು

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಬಿಜೆಪಿ ಮೊದಲ ಜಯಗಳಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ದರ್ಶನ್‌ಕುಮಾರ್‌ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ನ ಚೌಧರಿ ಲಾಲ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಇನ್ನು ಉಧಂಪುರದಲ್ಲಿ ರಣಬೀರ್​ ಸಿಂಗ್ ಗೆಲುವು ಸಾಧಿಸಿದ್ದಾರೆ.

Jammu-Kashmir Election Result 2024: ಜಮ್ಮು-ಕಾಶ್ಮೀರದ ಬಸೋಲಿಯಲ್ಲಿ ಬಿಜೆಪಿಗೆ ಆರಂಭಿಕ ಗೆಲುವು
ಬಿಜೆಪಿImage Credit source: Prokerala
ನಯನಾ ರಾಜೀವ್
|

Updated on: Oct 08, 2024 | 1:00 PM

Share

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಬಿಜೆಪಿ ಮೊದಲ ಜಯಗಳಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ದರ್ಶನ್‌ಕುಮಾರ್‌ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ನ ಚೌಧರಿ ಲಾಲ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಇನ್ನು ಉಧಂಪುರದಲ್ಲಿ ರಣಬೀರ್​ ಸಿಂಗ್ ಗೆಲುವು ಸಾಧಿಸಿದ್ದಾರೆ.

ಆರ್ಟಿಕಲ್ 370 ರದ್ದಾದ ನಂತರ ಇಲ್ಲಿ ಮೊದಲ ಬಾರಿಗೆ ಚುನಾವಣೆಗಳು ನಡೆದಿವೆ, ಅಂದರೆ ಸುಮಾರು 10 ವರ್ಷಗಳ ನಂತರ ಇಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ.ಮೂರು ಸ್ಥಾನಗಳ ಫಲಿತಾಂಶಗಳು ಬಂದಿದ್ದು, ಅದರಲ್ಲಿ ಎನ್‌ಸಿ ಒಂದು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದೆ.

ಇಂಡಿಯಾ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಜಮ್ಮುವಿನ ಸ್ಥಾನಗಳ ಆಧಾರದ ಮೇಲೆ ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಬ್ದುಲ್ಲಾ ಕುಟುಂಬದ ನ್ಯಾಷನಲ್ ಕಾನ್ಫರೆನ್ಸ್ ತನ್ನದೇ ಆದ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ಕಳೆದ ಬಾರಿ ಬಿಜೆಪಿ ಜತೆಗೂಡಿ ಸರ್ಕಾರ ರಚಿಸಿದ್ದ ಪಿಡಿಪಿ ಸ್ಥಿತಿ ಹದಗೆಟ್ಟಂತಿದೆ.

ಮತ್ತಷ್ಟು ಓದಿ: Assembly Election Results 2024: ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ, ಮತ ಎಣಿಕೆ ಶುರು

ಆಗಸ್ಟ್ 5, 2019 ರಂದು, ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ತೆಗೆದುಹಾಕಿತು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತು. ಕಳೆದ ಚುನಾವಣೆಯಲ್ಲಿ ಪಿಡಿಪಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

ಆದರೆ ಬಿಜೆಪಿ 25 ಸ್ಥಾನ ಪಡೆದಿತ್ತು. ಫಾರೂಕ್ ಅಬ್ದುಲ್ಲಾ ನೇತೃತ್ವದ ಎಸ್‌ಸಿ 1 ಸ್ಥಾನ, ಕಾಂಗ್ರೆಸ್ 12 ಸ್ಥಾನಗಳನ್ನು ಪಡೆದಿವೆ. ಇದಲ್ಲದೇ ಪೀಪಲ್ಸ್ ಕಾನ್ಫರೆನ್ಸ್ ಎರಡು ಸ್ಥಾನಗಳನ್ನು ಗೆದ್ದಿತ್ತು. ಮೂವರು ಪಕ್ಷೇತರರು ವಿಧಾನಸಭೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದರು.

ಭಾರತೀಯ ಜನತಾ ಪಕ್ಷದ ರಣವೀರ್ ಸಿಂಗ್ ಪಠಾನಿಯಾ ಅವರು ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಪೂರ್ವ ವಿಧಾನಸಭೆಯಿಂದ 2 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಅವರು ಸ್ವತಂತ್ರ ಅಭ್ಯರ್ಥಿ ಪವನ್ ಖಜುರಿಯಾ ಅವರನ್ನು ಸೋಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ