AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ ‘ಬಿಲ್ಲು ಬಾಣ’ ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ 'ಬಿಲ್ಲು ಬಾಣ' ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ
Follow us
ರಮೇಶ್ ಬಿ. ಜವಳಗೇರಾ
|

Updated on:Feb 17, 2023 | 8:27 PM

ನವದೆಹಲಿ: ಶಿವಸೇನಾ ಪಕ್ಷದ ಚಿಹ್ನೆಗಾಗಿ(shivsena symbol,) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಬಣಗಳ ನಡುವೆ ಪೈಪೋಟಿ ನಡೆದಿದ್ದು, ಇದೀಗ ಕೇಂದ್ರ ಚುನಾವಣೆ ಆಯೋಗ(election commission) ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆಯನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಿ ಆದೇಶಿಸಿದೆ. ಇದರಿಂದ ಉದ್ಧವ್ ಠಾಕ್ರೆಗೆ (Uddhav Thackeray) ತೀವ್ರ ಮುಖಭಂಗವಾಗಿದೆ.

ಬಳಿಕ ಉದ್ಧವ್ ಠಾಕ್ರೆ ಹಾಗೂ ಏನಕಾಥ್ ಶಿಂಧೆ ಬಣಗಳ ನಡುವೆ ಶಿವಸೇನಾ ಚಿಹ್ನೆಗಾಗಿ ನಡೆದ ಹಗ್ಗಾಜಗ್ಗಾಟದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವಿಚಾರಣೆ ನಡೆಸಿ ನಡೆಸಿತ್ತು. ಎರಡು ಬಣದ ವಾದ ಆಲಿಸಿದ್ದ ಕೇಂದ್ರ ಚುನಾವಣಾ ಆಯೋಗ, ಅಂತಿಮವಾಗಿ ಇಂದು(ಫೆ.17) ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆಯನ್ನು ಏಕನಾಥ್ ಶಿಂಧೆಗೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಶಿಂಧೆ ಬಣವೇ ರಿಯಲ್ ಶಿವಸೇನೆ ಎಂದಿದೆ.

ಕೋರ್ಟ್ ಮೊರೆ ಹೋಗಲು ತೀರ್ಮಾನ

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಪಕ್ಷದ ಚಿಹ್ನೆ ವಿವಾದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಆದೇಶ ನೀಡಿದೆ ಚುನಾವಣಾ ಆಯೋಗದ ಆದೇಶವನ್ನು ‘ಸುಪ್ರೀಂ ಕೋರ್ಟ್​’ನಲ್ಲಿ ಪ್ರಶ್ನಿಸುತ್ತೇವೆ ಎಂದು ಮಾಜಿ ಸಿಎಂ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಏಕನಾಥ್ ಶಿಂಧೆಗೆ ಚಿಹ್ನೆ ಒಲಿದ ಬಗ್ಗೆ ಉದ್ಧವ್ ಬಣದ ನಾಯಕ ಆನಂದ್ ದುಬೆ ಪ್ರತಿಕ್ರಿಯಿಸಿ, ಚುನಾವಣಾ ಆಯೋಗದ ಆದೇಶದ ಬಗ್ಗೆ ನಮಗೆ ಅನುಮಾನವಿತ್ತು. ನಾವು ಚುನಾವಣಾ ಆಯೋಗವನ್ನು ನಂಬುವುದಿಲ್ಲ. ಇದೇ ವಿಚಾರದ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ಆತುರದ ನಿರ್ಧಾರ ಮಾಡಿದೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡಿದೆ. ನಾವು ಆಯೋಗ ಕ್ರಮವನ್ನು ಖಂಡಿಸುತ್ತೇವೆ ಎಂದಿದ್ದಾರೆ.

ಈ ಹಿಂದೆ ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಎರಡು ಬಣಗಳು ಶಿವಸೇನೆ ಚಿಹ್ನೆ ಬಳಸಬಾರದು ಎಂದು ಚುನಾವಣಾ ಆಯೋಗ ಹೇಳಿತ್ತು. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಅಂದಿನ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ ಸರ್ಕಾರವನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರು ಠಾಕ್ರೆ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದರು. ಬಳಿಕ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿಕೊಂಡು ಸರ್ಕಾರ ರಚಿಸಿದ್ದರು. ಬಳಿಕ ಚಿಹ್ನೆಗಾಗಿ ಎರಡು ಬಣಗಳ ನಡುವೆ ಗುದ್ದಾಟ ಶುರುವಾಗಿತ್ತು.

Published On - 8:24 pm, Fri, 17 February 23