AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ವರ್ಗಾವಣೆ: ಗುಜರಾತ್ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡು ಚುನಾವಣೆ ಆಯೋಗ

ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆ ನಿಯೋಜನೆ ಸಂಬಂಧ ಗುಜರಾತ್ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಕೆಂಡಾಮಂಡಲವಾಗಿದೆ.

ಅಧಿಕಾರಿಗಳ ವರ್ಗಾವಣೆ: ಗುಜರಾತ್ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡು ಚುನಾವಣೆ ಆಯೋಗ
Chief Election Commissioner Rajiv Kumar
TV9 Web
| Edited By: |

Updated on: Oct 22, 2022 | 6:06 PM

Share

ನವದೆಹಲಿ: ಮುಂದಿನ ವಿಧಾನಸಭೆ ಚುನಾವಣೆಗೂ ಮುನ್ನ ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆ ನಿಯೋಜನೆಯ ಕುರಿತ ವರದಿಯನ್ನು ಸಲ್ಲಿಸಲು ಗುಜರಾತ್ ಸರ್ಕಾರ ವಿಫಲವಾಗಿದೆ. ಇದರಿಂದ ಚುನಾವಣೆ ಆಯೋಗ (Election Commission) ಗರಂ ಆಗಿದ್ದು, ಈ ಬಗ್ಗೆ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿಯಿಂದ ವಿವರಣೆ ಕೇಳಿದೆ.

ಗುಜರಾತ್ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಪತ್ರ ಬರೆದಿರುವ ಚುನಾವಣಾ ಆಯೋಗ, ಕೆಲವು ಶ್ರೇಣಿಯ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಬಗ್ಗೆ ಅನುಸರಣೆ ವರದಿಗಳನ್ನು ಕಳುಹಿಸಲು ವಿಫಲರಾಗಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದೆ. ನಿಗದಿತ ಅವಧಿ ಮುಗಿದ ನಂತರವೂ ಸಹ ಅನುಪಾಲನ ವರದಿ ಕಳುಹಿಸದಿರುವ ಕುರಿತು ವಿವರಣೆ ಕೇಳಿದೆ. ಅಲ್ಲದೇ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತ ಅನುಪಾಲನಾ ವರದಿಯನ್ನು 30.09.2022 ರೊಳಗೆ ಆಯೋಗಕ್ಕೆ ಒದಗಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.

ಗುಜರಾತ್ ಚುನಾವಣಾ ದಿನಾಂಕ ಘೋಷಣೆ ಮಾಡಿಲ್ಲ, ಈ ಬಗ್ಗೆ ಚುನಾವಣಾ ಆಯೋಗ ಹೇಳಿದ್ದೇನು?

ಹಿಮಾಚಲ ಪ್ರದೇಶಕ್ಕೆ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಗುಜರಾತ್ ಚುನಾವಣೆಯ ದಿನಾಂಕಗಳು ಇನ್ನೂ ಘೋಷಣೆಯಾಗಬೇಕಿದೆ. ತವರು ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ಒಂದೇ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಯೋಗವು ಎರಡು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ವಿಧಾನಸಭೆಗೆ ಚುನಾವಣೆ ನಡೆಯುವ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ಗೆ ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆಗೆ ಸಂಬಂಧಿಸಿದಂತೆ ಆಯೋಗ ಎರಡು ಸರ್ಕಾರಗಳಿಗೆ ಸೂಚನೆ ನೀಡಿ ಪತ್ರ ಬರೆದಿತ್ತು. ಪಾರದರ್ಶಕ ಮತ್ತು ನ್ಯಾಯಸಮ್ಮತವಾದ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು ಇಂತಹ ನಿರ್ದೇಶನಗಳನ್ನು ನೀಡುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಇಂತಹ ನಿರ್ದೇಶನಗಳನ್ನು ಆಯೋಗ ನೀಡಲಿದೆ. ಆದ್ರೆ, ಗುಜರಾತ್ ಸರ್ಕಾರ ಆಯೋಗದ ಸೂಚನೆ ಪಾಲನೆ ಮಾಡುವಲ್ಲಿ ವಿಫಲವಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ