AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವಕ್ಕೆ ಆಧಾರ್ ಕಾರ್ಡ್​ ಪುರಾವೆಯೇ? ಚುನಾವಣಾ ಆಯೋಗದ ಸ್ಪಷ್ಟನೆ ಏನು?

ಇಂದಿನಿಂದ ರಾಷ್ಟ್ರವ್ಯಾಪಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗುತ್ತಿದೆ. ಭಾರತದಲ್ಲಿ ಆಧಾರ್ ಕಾರ್ಡ್ ಎಂದರೆ ಪ್ರತಿಯೊಬ್ಬರಿಗೂ ತಮ್ಮ ಗುರುತಿನ ಚೀಟಿಯಾಗಿದೆ. ಸರ್ಕಾರಿ ಕೆಲಸಗಳಿಗೆ ಆಧಾರ್ ಕಾರ್ಡ್‌ಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ, ಕೆಲಸಗಳು ತಡವಾಗುತ್ತದೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಚುನಾವಣಾ ಆಯೋಗವು ಆಧಾರ್ ಕಾರ್ಡ್‌ನ ಕಡ್ಡಾಯವನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಪೌರತ್ವಕ್ಕೆ ಆಧಾರ್ ಕಾರ್ಡ್​ ಪುರಾವೆಯೇ? ಚುನಾವಣಾ ಆಯೋಗದ ಸ್ಪಷ್ಟನೆ ಏನು?
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್Image Credit source: PTI
ನಯನಾ ರಾಜೀವ್
|

Updated on: Oct 28, 2025 | 11:24 AM

Share

ನವದೆಹಲಿ, ಅಕ್ಟೋಬರ್ 28: ಭಾರತದಲ್ಲಿ ಆಧಾರ್ ಕಾರ್ಡ್(Aadhaar Card) ಎಂದರೆ ಪ್ರತಿಯೊಬ್ಬರಿಗೂ ತಮ್ಮ ಗುರುತಿನ ಚೀಟಿಯಾಗಿದೆ. ಸರ್ಕಾರಿ ಕೆಲಸಗಳಿಗೆ ಆಧಾರ್ ಕಾರ್ಡ್‌ಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ, ಕೆಲಸಗಳು ತಡವಾಗುತ್ತವೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಚುನಾವಣಾ ಆಯೋಗವು ಆಧಾರ್ ಕಾರ್ಡ್‌ನ ಕಡ್ಡಾಯವನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಆಧಾರ್ ಕಾರ್ಡ್​ ಜನ್ಮ ದಿನಾಂಕ ಅಥವಾ ನಿವಾಸದ ಪುರಾವೆಯಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತೊಮ್ಮೆ ಹೇಳಿದ್ದಾರೆ. ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇದಕ್ಕೆ ಸಂಬಂಧಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಆಧಾರ್ ಕಾರ್ಡ್​ ಪೌರತ್ವದ ಪುರಾವೆಯಲ್ಲ. ಆದರೆ ಎಸ್‌ಐಆರ್‌ನ 2 ನೇ ಹಂತದ ಸಮಯದಲ್ಲಿ ನಾಗರಿಕರು ಅದನ್ನು ಗುರುತಿನ ಪುರಾವೆಯಾಗಿ ಬಳಸಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Video: ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೊಡಿ ಎಂದ ಅಜ್ಜಿ, ಮುಗ್ಧತೆಗೆ ಸಾಕ್ಷಿಯಾಯ್ತು ಈ ದೃಶ್ಯ

ಆಧಾರ್‌ಗೆ ಸಂಬಂಧಿಸಿದಂತೆ, ಅದರ ಬಳಕೆಯು ಆಧಾರ್ ಕಾಯ್ದೆಗೆ ಅನುಗುಣವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಇದರರ್ಥ ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಮಾತ್ರ ಸ್ವೀಕರಿಸಲಾಗುತ್ತದೆ, ಜನನ, ನಿವಾಸ ಅಥವಾ ಪೌರತ್ವದ ಪುರಾವೆಯಾಗಿ ಅಲ್ಲ. ಇದರರ್ಥ ಪಟ್ಟಿಯಲ್ಲಿ ಸೇರ್ಪಡೆಗಾಗಿ ಆಧಾರ್ ಅನ್ನು ಪರಿಗಣಿಸುವುದು ಭಾರತದ ಚುನಾವಣಾ ಆಯೋಗದ ಸ್ವಂತ ವಿವೇಚನೆಗೆ ಬಿಟ್ಟದ್ದು.

ಈ ಉದ್ದೇಶಕ್ಕಾಗಿ ಆಧಾರ್ ಕಾರ್ಡ್ ಅನ್ನು ಅಧಿಕಾರಿಗಳು 12 ನೇ ದಾಖಲೆಯಾಗಿ ಪರಿಗಣಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ಆಧಾರ್ ಕಾರ್ಡ್‌ನ ದೃಢೀಕರಣ ಮತ್ತು ನೈಜತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಅರ್ಹತೆ ಇರುತ್ತದೆ.

ಮಂಗಳವಾರ ಅಂದರೆ ಅಕ್ಟೋಬರ್ 28ರಿಂದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಎಸ್​ಐಆರ್​ ಪ್ರಕ್ರಿಯೆಯನ್ನು ನಡೆಸಲಿದ್ದು, ಇದು ಫೆಬ್ರವರಿ 7, 2026 ರಂದು ಪೂರ್ಣಗೊಳ್ಳಲಿದೆ ಆಗ ಈ ಜನ್ಮ ದಿನಾಂಕ, ರಾಜ್ಯಗಳ ಅಂತಿಮ ಮತದಾರರ ಪಟ್ಟಿ ಪ್ರಕಟವಾಗುತ್ತದೆ.

ಪಾಸ್‌ಪೋರ್ಟ್, ಮೆಟ್ರಿಕ್ಯುಲೇಷನ್ ಪ್ರಮಾಣಪತ್ರದಂತಹ ದಾಖಲೆಗಳ ಆಧಾರದ ಮೇಲೆ ತಯಾರಿಸಲಾದ ಆಧಾರ್ ಕಾರ್ಡ್, ಭಾರತದಲ್ಲಿ ಪೌರತ್ವವನ್ನು ಸಾಬೀತುಪಡಿಸಲು ಯೋಗ್ಯವಾದ ದಾಖಲೆಯಾಗಿ ಪರಿಗಣಿಸಲ್ಪಡುವುದಿಲ್ಲ. ಆಧಾರ್ ಕಾರ್ಡ್‌ನಲ್ಲಿ ಫಿಂಗರ್‌ಪ್ರಿಂಟ್, ರೆಟಿನಾ ಸ್ಕ್ಯಾನಿಂಗ್‌ನಂತಹ ಜೈವಿಕ ಮಾಹಿತಿಯ ಜೊತೆಗೆ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಆಧಾರ್ ಕಾರ್ಡ್ ಭಾರತದ ಪೌರತ್ವದ ಗುರುತಾಗಿ ಪರಿಗಣಿಸಲ್ಪಡುವುದಿಲ್ಲ. ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಮತದಾರರ ಪಟ್ಟಿಯ ವಿಶೇಷ ತೀವ್ರಗೊಳಿಸಿದ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಆಧಾರ್ ಕಾರ್ಡ್‌ಗೆ ಆದ್ಯತೆ ನೀಡಲಾಗುತ್ತಿಲ್ಲ. ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಮತದಾರ ಗುರುತಿನ ಚೀಟಿಯಂತಹ ಜನಪ್ರಿಯ ದಾಖಲೆಗಳನ್ನು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಬಳಸಲಾಗುತ್ತದೆಯಾದರೂ, ಇವುಗಳನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ.

ವಿರೋಧ ಪಕ್ಷಗಳ ಆಕ್ಷೇಪ ಈ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತಿವೆ. ಆದರೆ, ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್‌ಗಳನ್ನು ಸೇರ್ಪಡೆಗೊಳಿಸುವಂತೆ ಸಲಹೆ ನೀಡಿದೆ.

ಭಾರತ ಸರ್ಕಾರವು ದೀರ್ಘಕಾಲದಿಂದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ಒದಗಿಸುತ್ತಿದೆ. ಈಗ ಬಹುತೇಕ ಎಲ್ಲಾ ನಾಗರಿಕರ ಬಳಿ ಆಧಾರ್ ಕಾರ್ಡ್ ಇದೆ. ಆಧಾರ್ ಕಾರ್ಡ್ ಪಡೆಯಲು ಗುರುತಿನ ಚೀಟಿ, ವಿಳಾಸದ ಪುರಾವೆ ಮತ್ತು ಜನ್ಮ ದಿನಾಂಕದ ಪ್ರಮಾಣಪತ್ರ ಅಗತ್ಯವಿದೆ.

ಇದರ ಜೊತೆಗೆ, ಪಾಸ್‌ಪೋರ್ಟ್, ರೇಷನ್ ಕಾರ್ಡ್, ಪಿಡಿಎಸ್ ಫೋಟೋ ಕಾರ್ಡ್, ಮತದಾರ ಗುರುತಿನ ಚೀಟಿ, ಚಾಲನಾ ಪರವಾನಗಿ ಇತ್ಯಾದಿಗಳನ್ನು ಆಧಾರ್ ಕಾರ್ಡ್‌ಗೆ ಮಾನ್ಯ ದಾಖಲೆಗಳಾಗಿ ಪರಿಗಣಿಸಲಾಗುತ್ತದೆ. ಜನ್ಮ ದಿನಾಂಕವನ್ನು ಸಾಬೀತುಪಡಿಸಲು ಜನ್ಮ ಪ್ರಮಾಣಪತ್ರ ಅಥವಾ 10ನೇ ತರಗತಿಯ ಅಂಕಪಟ್ಟಿ ಬಳಸಬಹುದು. ಶಾಲೆಯ ತೊರೆಯುವ ಪ್ರಮಾಣಪತ್ರವನ್ನೂ ಸಹ ಬಳಸಬಹುದು.

ಎಸ್​ಐಆರ್ ಹಂತ 2 ಅನ್ನು ನಡೆಸುವ ರಾಜ್ಯಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಛತ್ತೀಸ್‌ಗಢ ಗೋವಾ ಗುಜರಾತ್ ಕೇರಳ ಲಕ್ಷದ್ವೀಪ ಮಧ್ಯಪ್ರದೇಶ ಪುದುಚೇರಿ ರಾಜಸ್ಥಾನ ತಮಿಳುನಾಡು ಉತ್ತರ ಪ್ರದೇಶ ಪಶ್ಚಿಮ ಬಂಗಾಳ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!