AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಏಕೆ?: ಮಹಾರಾಷ್ಟ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಪ್ರಶ್ನೆ

ಮುಂಬೈನಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಪ್ರಸ್ತುತ ಪೋಸ್ಟಿಂಗ್ ಅಥವಾ ತವರು ಜಿಲ್ಲೆಗಳಲ್ಲಿ ಮೂರಕ್ಕಿಂತ ಹೆಚ್ಚು ವರ್ಷ ಕಾಲ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಸ್ಥಳಾಂತರಿಸಲು ಜುಲೈ 31 ರಂದು ಹೊರಡಿಸಿದ ಇಸಿಐ ಆದೇಶದ ಹೊರತಾಗಿಯೂ ನಗರದಲ್ಲಿ 100 ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಇನ್ನೂ ಪ್ರಮುಖ ಹುದ್ದೆಗಳನ್ನು ಏಕೆ ನಿರ್ವಹಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

100 ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಏಕೆ?: ಮಹಾರಾಷ್ಟ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಪ್ರಶ್ನೆ
ರಾಜೀವ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on: Sep 27, 2024 | 8:26 PM

Share

ಮುಂಬೈ ಸೆಪ್ಟೆಂಬರ್ 27: ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಮುಖ ಅಧಿಕಾರಿಗಳ ವರ್ಗಾವಣೆ ಕುರಿತು ಭಾರತ ಚುನಾವಣಾ ಆಯೋಗದ (ECI) ನಿರ್ದೇಶನಗಳನ್ನು ಪಾಲಿಸಲು ಮಹಾರಾಷ್ಟ್ರ ರಾಜ್ಯ ಆಡಳಿತ ವಿಫಲವಾಗಿರುವ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ (CEC) ರಾಜೀವ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ, ಕುಮಾರ್ ಅವರು ಪ್ರಸ್ತುತ ಪೋಸ್ಟಿಂಗ್ ಅಥವಾ ತವರು ಜಿಲ್ಲೆಗಳಲ್ಲಿ ಮೂರಕ್ಕಿಂತ ಹೆಚ್ಚು ವರ್ಷ ಕಾಲ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಸ್ಥಳಾಂತರಿಸಲು ಜುಲೈ 31 ರಂದು ಹೊರಡಿಸಿದ ಇಸಿಐ ಆದೇಶದ ಹೊರತಾಗಿಯೂ ನಗರದಲ್ಲಿ 100 ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಇನ್ನೂ ಪ್ರಮುಖ ಹುದ್ದೆಗಳನ್ನು ಏಕೆ ನಿರ್ವಹಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ವರ್ಗಾವಣೆ ಆದೇಶವನ್ನು ಜಾರಿಗೊಳಿಸಲು ವಿಳಂಬ ಮಾಡಿದ್ದಕ್ಕಾಗಿ ಕುಮಾರ್ ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ (ಡಿಜಿಪಿ) ವಿವರಣೆಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ.

“ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಅವರಿಂದ ನಿಗದಿತ ದಿನಾಂಕದವರೆಗೆ ಯಾವುದೇ ವರದಿ ಬಂದಿಲ್ಲ. 22.08.2024, 11.09.2024 ಮತ್ತು 25.09.2024 ರಂದು ಆಯೋಗದ ಸಮಸಂಖ್ಯೆಯ ಪತ್ರದ ಪ್ರಕಾರ ಜ್ಞಾಪನೆಗಳನ್ನು ನೀಡಲಾಗಿದೆ, ಈ ಮೂಲಕ ವರದಿಗಳನ್ನು ತುರ್ತಾಗಿ ಒದಗಿಸುವಂತೆ ನಿರ್ದೇಶಿಸಲಾಗಿದೆ, ”ಎಂದು ಇಸಿಐ ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಹೇಳಿದೆ.

“ವಿಷಯದಲ್ಲಿ ಜ್ಞಾಪನೆಗಳ ಹೊರತಾಗಿಯೂ ನಿಗದಿತ ಸಮಯ ಮಿತಿಯ ನಂತರವೂ ಅನುಸರಣೆ ವರದಿಗಳನ್ನು ಏಕೆ ಒದಗಿಸಲಾಗಿಲ್ಲ ಎಂಬುದಕ್ಕೆ ಸಂದರ್ಭಗಳನ್ನು ವಿವರಿಸಲು ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ನಿರ್ದೇಶಿಸಿದೆ” ಎಂದು ಪತ್ರದಲ್ಲಿದೆ

ಅಬಕಾರಿ ಆಯುಕ್ತರಿಗೆ ಸಿಇಸಿ ವಾಗ್ದಂಡನೆ

ಅಬಕಾರಿ ಆಯುಕ್ತರಿಗೆ ಛೀಮಾರಿ ಹಾಕಿದ ಕುಮಾರ್, ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ನೆರೆಯ ರಾಜ್ಯಗಳಿಂದ ಅಕ್ರಮ ಮದ್ಯದ ಹರಿವನ್ನು ಒಣಗಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆಯಿರುವ ಚುನಾವಣೆಗೆ ಮುನ್ನ ಅಕ್ರಮ ಮದ್ಯ ಸಾಗಣೆ ಮತ್ತು ವಿತರಣೆಯ ಮೇಲೆ ಕಠಿಣ ನಿಯಂತ್ರಣದ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಚುನಾವಣಾ ಅವಧಿಯಲ್ಲಿ ಅಕ್ರಮ ನಗದು ಅಥವಾ ಇತರ ಪ್ರಚೋದನೆಗಳನ್ನು ಸಾಗಿಸಲು ವಾಹನಗಳು, ವಿಶೇಷವಾಗಿ ಪೊಲೀಸ್ ವ್ಯಾನ್‌ಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ದುರ್ಬಳಕೆ ಮಾಡದಂತೆ ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಏಕನಾಥ್ ಶಿಂಧೆಗೆ ಸಂಕಷ್ಟ?; ತಮ್ಮದೇ ಸರ್ಕಾರದ ಬಗ್ಗೆ ಅಸಮಾಧಾನ ಹೊರಹಾಕಿದ ಡಿಸಿಎಂ

ಆಯೋಗವು ಬ್ಯಾಂಕ್‌ಗಳಿಗೆ ನಿರ್ದೇಶನಗಳನ್ನು ನೀಡಿದ್ದು ಸೂರ್ಯಾಸ್ತದ ನಂತರ ನಗದು ಸಾಗಣೆಯನ್ನು ನಿಷೇಧಿಸಿದೆ. ಅದೇ ವೇಳೆ ಅಂತರ-ಗಡಿ ಮಾದಕವಸ್ತು ಕಳ್ಳಸಾಗಣೆಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಸೂಚನೆ ನೀಡಿತು. ಮುಂಬರುವ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಕುಮಾರ್ ನೇತೃತ್ವದ ಇಸಿಐ ನಿಯೋಗವು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಎಸ್‌ಎಸ್ ಸಂಧು ಅವರೊಂದಿಗೆ ಮುಂಬೈನಲ್ಲಿದೆ. 288 ಕ್ಷೇತ್ರಗಳಲ್ಲಿ ನಡೆಯಲಿರುವ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಕ್ಕೂಟ ಮತ್ತು ಮಹಾ ಯುತಿ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ನಿರೀಕ್ಷೆಯಿದೆ.

ಚುನಾವಣಾ ದಿನಾಂಕವನ್ನು ಇಸಿಐ ಇನ್ನೂ ಪ್ರಕಟಿಸಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ