AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhabanipur bypoll ಕೊವಿಡ್ ನಿಯಮ ಉಲ್ಲಂಘನೆ: ಭವಾನಿಪುರ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್​​ಗೆ ಚುನಾವಣಾ ಆಯೋಗ ನೋಟಿಸ್

Priyanka Tibrewal: ಬಿಜೆಪಿಯ ಯುವ ಘಟಕದ ನಾಯಕ ಮತ್ತು ವಕೀಲರಾಗಿರುವ ಟಿಬರೆವಾಲ್ ಸೆಪ್ಟೆಂಬರ್ 30 ರಂದು ಭವಾನಿಪುರ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿದ್ದಾರೆ.

Bhabanipur bypoll ಕೊವಿಡ್ ನಿಯಮ ಉಲ್ಲಂಘನೆ: ಭವಾನಿಪುರ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್​​ಗೆ ಚುನಾವಣಾ ಆಯೋಗ ನೋಟಿಸ್
ಪ್ರಿಯಾಂಕಾ ಟಿಬರೆವಾಲ್
TV9 Web
| Edited By: |

Updated on:Sep 15, 2021 | 4:33 PM

Share

ದೆಹಲಿ: ಮುಂಬರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ (Bhabanipur bypoll) ನಾಮಪತ್ರ ಸಲ್ಲಿಸುವಾಗ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ (Priyanka Tibrewal) ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಚುನಾವಣಾ ಆಯೋಗ (Election Commission of India) ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ ಭವಾನಿಪುರ ಕ್ಷೇತ್ರದ ಚುನಾವಣಾಧಿಕಾರಿ ಬುಧವಾರ ಸಂಜೆ 5 ಗಂಟೆಯೊಳಗೆ ಟಿಬರೆವಾಲ್​​ನಿಂದ ಪ್ರತಿಕ್ರಿಯೆ ಕೇಳಿದ್ದಾರೆ. ಆಕೆಯ ಮುಂದಿನ ರ್ಯಾಲಿಗಳಿಗೆ ಏಕೆ ಅನುಮತಿ ನಿರಾಕರಿಸಬಾರದು ಎಂದು ನೋಟಿಸ್​​ನಲ್ಲಿ ಕೇಳಲಾಗಿದೆ. ಬಿಜೆಪಿಯ ಯುವ ಘಟಕದ ನಾಯಕ ಮತ್ತು ವಕೀಲರಾಗಿರುವ ಟಿಬರೆವಾಲ್ ಸೆಪ್ಟೆಂಬರ್ 30 ರಂದು ಭವಾನಿಪುರ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ದಕ್ಷಿಣ ಕೊಲ್ಕತ್ತಾದ ಸರ್ವೇ ಕಟ್ಟಡದಿಂದ ಟಿಬರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಪ್ರತಿಪಕ್ಷದ ನಾಯಕ ಮತ್ತು ನಂದಿಗ್ರಾಮ ಶಾಸಕ ಸುವೇಂದು ಅಧಿಕಾರಿ, ಸಂಸದ ಅರ್ಜುನ್ ಸಿಂಗ್, ಪಕ್ಷದ ಹಿರಿಯ ನಾಯಕ ದಿನೇಶ್ ತ್ರಿವೇದಿ ಮತ್ತು ನಟ ರುದ್ರನೀಲ್ ಘೋಷ್ ಇತರರು ಇದ್ದರು.

ಚುನಾವಣಾ ಆಯೋಗದ ನೋಟಿಸ್ ಮಾದರಿ ನೀತಿ ಸಂಹಿತೆ ಮತ್ತು ಕೊವಿಡ್ -19 ಪ್ರೋಟೋಕಾಲ್‌ಗಳ ಉಲ್ಲಂಘನೆಯನ್ನು ಉಲ್ಲೇಖಿಸಿದೆ.

ಮಂಗಳವಾರ ಮಮತಾ ಬ್ಯಾನರ್ಜಿ ನಾಮಪತ್ರದಲ್ಲಿ ಕ್ರಿಮಿನಲ್ ದಾಖಲೆಗಳ ವಿವರಗಳ ಕೊರತೆಯನ್ನು ಉಲ್ಲೇಖಿಸಿ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.

ಟಿಬರೆವಾಲ್ ನ ಮುಖ್ಯ ಚುನಾವಣಾ ಏಜೆಂಟ್ ಸಜಲ್ ಘೋಷ್ ಅವರು ಚುನಾವಣಾ ಸಮಿತಿಗೆ ಪತ್ರ ಬರೆದಿದ್ದಾರೆ. “ಆಕೆಯ ಚುನಾವಣಾ ಅಫಿಡವಿಟ್‌ನಲ್ಲಿ ಆಕೆಯ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಅಸ್ಸಾಂನಲ್ಲಿ ಆಕೆಯ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಮತ್ತು ಆಕೆ ಅವುಗಳನ್ನು ತನ್ನ ಅಫಿಡವಿಟ್ ನಲ್ಲಿ ಬಹಿರಂಗಪಡಿಸಿಲ್ಲ. ಆದ್ದರಿಂದ ನಾನು ಮಮತಾ ಬ್ಯಾನರ್ಜಿ ಸಲ್ಲಿಸಿದ ನಾಮನಿರ್ದೇಶನ/ಘೋಷಣೆಯನ್ನು ಆಕ್ಷೇಪಿಸಲು ಮನವಿ ಮಾಡುತ್ತೇನೆ. ನಾಮಪತ್ರವನ್ನು ಅಸಿಂಧು ಎಂದು ಘೋಷಿಸಲು ಮತ್ತು ಆಕೆಯ ಉಮೇದುವಾರಿಕೆಯನ್ನು ರದ್ದುಗೊಳಿಸುವಂತೆ ನಾನು ಚುನಾವಣಾ ಸಮಿತಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಸೆಪ್ಟೆಂಬರ್ 30 ರಂದು ಸಂಸರ್‌ಗಂಜ್ ಮತ್ತು ಜಂಗೀಪುರದಲ್ಲಿ ಎರಡು ಮತದಾನ ನಡೆಯಲಿದೆ. ಈ ಉಪಚುನಾವಣೆಗಳ ಎಣಿಕೆ ಅಕ್ಟೋಬರ್ 3 ರಂದು ನಡೆಯಲಿದ್ದು, ಮಮತಾ ತನ್ನ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ನವೆಂಬರ್ 5 ರೊಳಗೆ ಆಯ್ಕೆಯಾಗಬೇಕಿದೆ.

ಇದನ್ನೂ ಓದಿ: Bhabanipur By polls ‘ಇದು ಅನ್ಯಾಯದ ವಿರುದ್ಧ ಹೋರಾಟ’: ಭವಾನಿಪುರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್

(ECI serves notice to BJP Bhabanipur candidate Priyanka Tibrewal over violation of Covid protocols)

Published On - 4:32 pm, Wed, 15 September 21

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು