AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ
ಅನಿಲ್​ ದೇಶ್​ಮುಖ್​
TV9 Web
| Edited By: |

Updated on: Jun 26, 2021 | 11:31 AM

Share

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​​ರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ, ಇ.ಡಿ. ಶುಕ್ರವಾರ ಅನಿಲ್​ ದೇಶಮುಖ್​​ ಖಾಸಗಿ ಸಹಾಯಕ ಕುಂದನ್​ ಶಿಂಧೆ ಮತ್ತು ವೈಯಕ್ತಿಕ ಕಾರ್ಯದರ್ಶಿ ಸಂಜೀವ ಪಾಲಂದೆ ಅವರನ್ನು ಬಂಧಿಸಿದೆ. ಇವರಿಬ್ಬರನ್ನೂ ಬಂಧಿಸುವುದಕ್ಕೂ ಮೊದಲು, ಸುಮಾರು 9 ಸುತ್ತುಗಳ ವಿಚಾರಣೆ ನಡೆಸಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇಬ್ಬರನ್ನೂ ಅರೆಸ್ಟ್ ಮಾಡಲಾಗಿದೆ. ಇವರಿಬ್ಬರನ್ನು ಇಂದು ವಿಶೇಷ ಕೋರ್ಟ್​ಗೆ ಹಾಜರುಪಡಿಸಲಿದೆ.

ಶುಕ್ರವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗ್ಪುರ, ಮುಂಬೈನ ವರ್ಲಿ ಮತ್ತು ಮಲ್ಬಾರ್​ನಲ್ಲಿರುವ ದೇಶಮುಖ್​ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ಅದೇ ಸಮಯದಲ್ಲಿ ಶಿಂಧೆ ಮತ್ತು ಪಾಲಂದೆ ನಿವಾಸದ ಮೇಲೆ ಕೂಡ ರೇಡ್​ ಮಾಡಿದ್ದರು. ಇಡಿ ಅಧಿಕಾರಿಗಳು ರೇಡ್​ ಮಾಡುವ ಸಂದರ್ಭದಲ್ಲಿ ಅನಿಲ್ ದೇಶಮುಖ್​ ಮತ್ತು ಅವರ ಒಬ್ಬ ಪುತ್ರ ವರ್ಲಿಯಲ್ಲಿರುವ ನಿವಾಸದಲ್ಲಿ ಇದ್ದರು. ದಾಳಿ ಮುಗಿಯುತ್ತಿದ್ದಂತೆ ಅನಿಲ್​ ದೇಶಮುಖ್​ ಅವರ ಖಾಸಗಿ ಸಹಾಯಕ ಮತ್ತು ವೈಯಕ್ತಿಕ ಕಾರ್ಯದರ್ಶಿ ಇಬ್ಬರನ್ನೂ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಕರೆದುಕೊಂಡು ಹೋಗಲಾಗಿತ್ತು.

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ. ಆ ಕಂಪನಿಗಳು ಅನಿಲ್​ ದೇಶಮುಖ್​ ಅವರ ಹತ್ತಿರದ ಸಂಬಂಧಿಗಳದ್ದೇ ಎಂದು ಹೇಳಲು ಪುರಾವೆಗಳೂ ಇವೆ. ಸದ್ಯ ಅನಿಲ್​ ದೇಶಮುಖ್​ರನ್ನು ಬಂಧಿಸಲು ಅಗತ್ಯವಿರುವಷ್ಟು ಸಾಕ್ಷಿ ಇ.ಡಿ. ಬಳಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ