AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ
ಅನಿಲ್​ ದೇಶ್​ಮುಖ್​
TV9 Web
| Edited By: |

Updated on: Jun 26, 2021 | 11:31 AM

Share

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​​ರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ, ಇ.ಡಿ. ಶುಕ್ರವಾರ ಅನಿಲ್​ ದೇಶಮುಖ್​​ ಖಾಸಗಿ ಸಹಾಯಕ ಕುಂದನ್​ ಶಿಂಧೆ ಮತ್ತು ವೈಯಕ್ತಿಕ ಕಾರ್ಯದರ್ಶಿ ಸಂಜೀವ ಪಾಲಂದೆ ಅವರನ್ನು ಬಂಧಿಸಿದೆ. ಇವರಿಬ್ಬರನ್ನೂ ಬಂಧಿಸುವುದಕ್ಕೂ ಮೊದಲು, ಸುಮಾರು 9 ಸುತ್ತುಗಳ ವಿಚಾರಣೆ ನಡೆಸಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇಬ್ಬರನ್ನೂ ಅರೆಸ್ಟ್ ಮಾಡಲಾಗಿದೆ. ಇವರಿಬ್ಬರನ್ನು ಇಂದು ವಿಶೇಷ ಕೋರ್ಟ್​ಗೆ ಹಾಜರುಪಡಿಸಲಿದೆ.

ಶುಕ್ರವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗ್ಪುರ, ಮುಂಬೈನ ವರ್ಲಿ ಮತ್ತು ಮಲ್ಬಾರ್​ನಲ್ಲಿರುವ ದೇಶಮುಖ್​ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ಅದೇ ಸಮಯದಲ್ಲಿ ಶಿಂಧೆ ಮತ್ತು ಪಾಲಂದೆ ನಿವಾಸದ ಮೇಲೆ ಕೂಡ ರೇಡ್​ ಮಾಡಿದ್ದರು. ಇಡಿ ಅಧಿಕಾರಿಗಳು ರೇಡ್​ ಮಾಡುವ ಸಂದರ್ಭದಲ್ಲಿ ಅನಿಲ್ ದೇಶಮುಖ್​ ಮತ್ತು ಅವರ ಒಬ್ಬ ಪುತ್ರ ವರ್ಲಿಯಲ್ಲಿರುವ ನಿವಾಸದಲ್ಲಿ ಇದ್ದರು. ದಾಳಿ ಮುಗಿಯುತ್ತಿದ್ದಂತೆ ಅನಿಲ್​ ದೇಶಮುಖ್​ ಅವರ ಖಾಸಗಿ ಸಹಾಯಕ ಮತ್ತು ವೈಯಕ್ತಿಕ ಕಾರ್ಯದರ್ಶಿ ಇಬ್ಬರನ್ನೂ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಕರೆದುಕೊಂಡು ಹೋಗಲಾಗಿತ್ತು.

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ. ಆ ಕಂಪನಿಗಳು ಅನಿಲ್​ ದೇಶಮುಖ್​ ಅವರ ಹತ್ತಿರದ ಸಂಬಂಧಿಗಳದ್ದೇ ಎಂದು ಹೇಳಲು ಪುರಾವೆಗಳೂ ಇವೆ. ಸದ್ಯ ಅನಿಲ್​ ದೇಶಮುಖ್​ರನ್ನು ಬಂಧಿಸಲು ಅಗತ್ಯವಿರುವಷ್ಟು ಸಾಕ್ಷಿ ಇ.ಡಿ. ಬಳಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ