AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ
ಅನಿಲ್​ ದೇಶ್​ಮುಖ್​
TV9 Web
| Edited By: |

Updated on: Jun 26, 2021 | 11:31 AM

Share

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​​ರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ, ಇ.ಡಿ. ಶುಕ್ರವಾರ ಅನಿಲ್​ ದೇಶಮುಖ್​​ ಖಾಸಗಿ ಸಹಾಯಕ ಕುಂದನ್​ ಶಿಂಧೆ ಮತ್ತು ವೈಯಕ್ತಿಕ ಕಾರ್ಯದರ್ಶಿ ಸಂಜೀವ ಪಾಲಂದೆ ಅವರನ್ನು ಬಂಧಿಸಿದೆ. ಇವರಿಬ್ಬರನ್ನೂ ಬಂಧಿಸುವುದಕ್ಕೂ ಮೊದಲು, ಸುಮಾರು 9 ಸುತ್ತುಗಳ ವಿಚಾರಣೆ ನಡೆಸಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇಬ್ಬರನ್ನೂ ಅರೆಸ್ಟ್ ಮಾಡಲಾಗಿದೆ. ಇವರಿಬ್ಬರನ್ನು ಇಂದು ವಿಶೇಷ ಕೋರ್ಟ್​ಗೆ ಹಾಜರುಪಡಿಸಲಿದೆ.

ಶುಕ್ರವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗ್ಪುರ, ಮುಂಬೈನ ವರ್ಲಿ ಮತ್ತು ಮಲ್ಬಾರ್​ನಲ್ಲಿರುವ ದೇಶಮುಖ್​ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ಅದೇ ಸಮಯದಲ್ಲಿ ಶಿಂಧೆ ಮತ್ತು ಪಾಲಂದೆ ನಿವಾಸದ ಮೇಲೆ ಕೂಡ ರೇಡ್​ ಮಾಡಿದ್ದರು. ಇಡಿ ಅಧಿಕಾರಿಗಳು ರೇಡ್​ ಮಾಡುವ ಸಂದರ್ಭದಲ್ಲಿ ಅನಿಲ್ ದೇಶಮುಖ್​ ಮತ್ತು ಅವರ ಒಬ್ಬ ಪುತ್ರ ವರ್ಲಿಯಲ್ಲಿರುವ ನಿವಾಸದಲ್ಲಿ ಇದ್ದರು. ದಾಳಿ ಮುಗಿಯುತ್ತಿದ್ದಂತೆ ಅನಿಲ್​ ದೇಶಮುಖ್​ ಅವರ ಖಾಸಗಿ ಸಹಾಯಕ ಮತ್ತು ವೈಯಕ್ತಿಕ ಕಾರ್ಯದರ್ಶಿ ಇಬ್ಬರನ್ನೂ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಕರೆದುಕೊಂಡು ಹೋಗಲಾಗಿತ್ತು.

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ. ಆ ಕಂಪನಿಗಳು ಅನಿಲ್​ ದೇಶಮುಖ್​ ಅವರ ಹತ್ತಿರದ ಸಂಬಂಧಿಗಳದ್ದೇ ಎಂದು ಹೇಳಲು ಪುರಾವೆಗಳೂ ಇವೆ. ಸದ್ಯ ಅನಿಲ್​ ದೇಶಮುಖ್​ರನ್ನು ಬಂಧಿಸಲು ಅಗತ್ಯವಿರುವಷ್ಟು ಸಾಕ್ಷಿ ಇ.ಡಿ. ಬಳಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!