AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​ಗೆ ಇ.ಡಿ.ಯಿಂದ ಸಮನ್ಸ್​; ಆಪ್ತರಿಬ್ಬರ ಬಂಧನ
ಅನಿಲ್​ ದೇಶ್​ಮುಖ್​
TV9 Web
| Edited By: |

Updated on: Jun 26, 2021 | 11:31 AM

Share

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್​​ರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ, ಇ.ಡಿ. ಶುಕ್ರವಾರ ಅನಿಲ್​ ದೇಶಮುಖ್​​ ಖಾಸಗಿ ಸಹಾಯಕ ಕುಂದನ್​ ಶಿಂಧೆ ಮತ್ತು ವೈಯಕ್ತಿಕ ಕಾರ್ಯದರ್ಶಿ ಸಂಜೀವ ಪಾಲಂದೆ ಅವರನ್ನು ಬಂಧಿಸಿದೆ. ಇವರಿಬ್ಬರನ್ನೂ ಬಂಧಿಸುವುದಕ್ಕೂ ಮೊದಲು, ಸುಮಾರು 9 ಸುತ್ತುಗಳ ವಿಚಾರಣೆ ನಡೆಸಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇಬ್ಬರನ್ನೂ ಅರೆಸ್ಟ್ ಮಾಡಲಾಗಿದೆ. ಇವರಿಬ್ಬರನ್ನು ಇಂದು ವಿಶೇಷ ಕೋರ್ಟ್​ಗೆ ಹಾಜರುಪಡಿಸಲಿದೆ.

ಶುಕ್ರವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗ್ಪುರ, ಮುಂಬೈನ ವರ್ಲಿ ಮತ್ತು ಮಲ್ಬಾರ್​ನಲ್ಲಿರುವ ದೇಶಮುಖ್​ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ಅದೇ ಸಮಯದಲ್ಲಿ ಶಿಂಧೆ ಮತ್ತು ಪಾಲಂದೆ ನಿವಾಸದ ಮೇಲೆ ಕೂಡ ರೇಡ್​ ಮಾಡಿದ್ದರು. ಇಡಿ ಅಧಿಕಾರಿಗಳು ರೇಡ್​ ಮಾಡುವ ಸಂದರ್ಭದಲ್ಲಿ ಅನಿಲ್ ದೇಶಮುಖ್​ ಮತ್ತು ಅವರ ಒಬ್ಬ ಪುತ್ರ ವರ್ಲಿಯಲ್ಲಿರುವ ನಿವಾಸದಲ್ಲಿ ಇದ್ದರು. ದಾಳಿ ಮುಗಿಯುತ್ತಿದ್ದಂತೆ ಅನಿಲ್​ ದೇಶಮುಖ್​ ಅವರ ಖಾಸಗಿ ಸಹಾಯಕ ಮತ್ತು ವೈಯಕ್ತಿಕ ಕಾರ್ಯದರ್ಶಿ ಇಬ್ಬರನ್ನೂ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಕರೆದುಕೊಂಡು ಹೋಗಲಾಗಿತ್ತು.

ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಕೆಲವೇ ತಿಂಗಳುಗಳಲ್ಲಿ ಸುಮಾರು 12 ಬಾರ್​ ಮಾಲೀಕರಿಂದ 4 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು. ಆ ಹಣ ನಂತರ ಬೇರೆ ಪ್ರದೇಶಗಳಲ್ಲಿರುವ (ಮಹಾರಾಷ್ಟ್ರದಲ್ಲಿ ಇಲ್ಲದ) ಕೆಲವು ಶೆಲ್​ ಕಂಪನಿಗಳ ಮೂಲಕ ಅನಿಲ್​ ದೇಶಮುಖ್​ ಕೈಸೇರಿದೆ ಎಂದು ಇ.ಡಿ.ಮೂಲಗಳು ತಿಳಿಸಿವೆ. ಆ ಕಂಪನಿಗಳು ಅನಿಲ್​ ದೇಶಮುಖ್​ ಅವರ ಹತ್ತಿರದ ಸಂಬಂಧಿಗಳದ್ದೇ ಎಂದು ಹೇಳಲು ಪುರಾವೆಗಳೂ ಇವೆ. ಸದ್ಯ ಅನಿಲ್​ ದೇಶಮುಖ್​ರನ್ನು ಬಂಧಿಸಲು ಅಗತ್ಯವಿರುವಷ್ಟು ಸಾಕ್ಷಿ ಇ.ಡಿ. ಬಳಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​