Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಕೆನರಾ ಬ್ಯಾಂಕ್​​ನ 538 ಕೋಟಿ ರೂ. ವಂಚನೆ ಪ್ರಕರಣ ಸಮಬಂಧ ಜಾರಿ ನಿರ್ದೇಶನಾಲಯವು (ಇಡಿ) ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿದೆ. ಶನಿವಾರ ಸತತ ಏಳು ಗಂಟೆಗಳ ಕಾಲ ಮುಂಬೈನಲ್ಲಿ ವಿಚಾರಣೆ ನಡೆಸಿದ ನಂತರ ನರೇಶ್ ಗೋಯಲ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ
ಜೆಟ್ ಏರ್​ವೇಸ್ ಸಂಸ್ಥಾಪಕ ನರೇಶ್ ಗೋಯಲ್
Follow us
Rakesh Nayak Manchi
|

Updated on:Sep 02, 2023 | 6:46 AM

ಮುಂಬೈ, ಸೆ.2: ಕೆನರಾ ಬ್ಯಾಂಕ್​​ನ 538 ಕೋಟಿ ರೂ. ವಂಚನೆ ಪ್ರಕರಣ ಸಮಬಂಧ ಜಾರಿ ನಿರ್ದೇಶನಾಲಯವು (Enforcement Directorate) ಜೆಟ್ ಏರ್‌ವೇಸ್ (Jet Airways) ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿದೆ. ಪಿಎಂಎಲ್​ಎ ಕಾಯ್ದೆಯಡಿ ನರೇಶ್ ಗೋಯಲ್ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು, ಶನಿವಾರ ಸತತ ಏಳು ಗಂಟೆಗಳ ಕಾಲ ಮುಂಬೈನಲ್ಲಿ ವಿಚಾರಣೆ ನಡೆಸಿದ ನಂತರ ಬಂಧಿಸಿದ್ದಾರೆ.

ಸದ್ಯ, 74 ವರ್ಷದ ನರೇಶ್ ಗೋಯಲ್ ಅವರನ್ನು ಇ.ಡಿ. ಅಧಿಕಾರಿಗಳು ಪಿಎಂಎಲ್​ಎ ವಿಶೇಷ ಕೋರ್ಟ್​​ಗೆ ಇಂದು (ಸೆಪ್ಟೆಂಬರ್ 2) ಹಾಜರುಪಡಿಸಿ ತಮ್ಮ ವಶಕ್ಕೆ ನೀಡುವಂತೆ ಕೋರಲಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

ಕೆನರಾ ಬ್ಯಾಂಕ್​ನಿಂದ ಪಡೆದ ಸಾಲವನ್ನು ಸಂಪೂರ್ಣವಾಗಿ ಪವಾತಿಸದ ಜೆಟ್ ಏರ್​ವೇಸ್ ಸಂಸ್ಥಾಪಕ ಗೋಯಲ್ ವಿರುದ್ಧದ ಸಿಬಿಐ ಮೇ 3 ರಂದು ವಂಚನೆ ಪ್ರಕರಣ ದಾಖಲಿಸಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮತ್ತು ದೆಹಲಿಯಲ್ಲಿ ಗೋಯಲ್ ಅವರಿಗೆ ಸೇರಿದ ಎಂಟು ಸ್ಥಳಗಳ ಮೇಲೆ ಜುಲೈನಲ್ಲಿ ದಾಳಿ ನಡೆಸಿತ್ತು.

ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್ 2005 ರಿಂದ ಕೆನರಾ ಬ್ಯಾಂಕ್‌ನೊಂದಿಗೆ ವ್ಯವಹರಿಸುತ್ತಿದೆ ಮತ್ತು ಕಂಪನಿಗೆ ಎಲ್ಲಾ ಮಾನ್ಯತೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟದ ವ್ಯವಸ್ಥೆಯಲ್ಲಿದೆ.

ಕೆನರಾ ಬ್ಯಾಂಕ್​ನಿಂದ ಜೆಟ್ ಏರ್​ವೇಸ್ ಸಂಸ್ಥೆಯು 848 ಕೋಟಿ ರೂ. ಸಾಲ ಪಡೆದಿತ್ತು. ಈ ಸಾಲದ ಮೊತ್ತದ ಪೈಕಿ 538 ಕೋಟಿ ರೂ.ಗಳನ್ನು ಮರುಪಾವತಿಸದೆ ಬಾಕಿ ಉಳಿಸಲಾಗಿತ್ತು. ಈ ಪ್ರಕರಣವನ್ನು 2011ರ ಜುಲೈ 29 ರಂದು ವಂಚನೆ ಪ್ರಕರಣವೆಂದು ಘೋಷಿಸಿ ಪ್ರಕರಣ ದಾಖಲಿಸಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sat, 2 September 23

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್