AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.
ಇ.ಡಿ.
TV9 Web
| Edited By: |

Updated on: Jan 04, 2022 | 8:31 AM

Share

ಗುಜರಾತ್​ ಮೂಲದ ಕಂಪನಿ ಮತ್ತು ಅದರ ಕಾರ್ಯವಾಹಕ ಅಧಿಕಾರಿಗಳ ಸುಮಾರು 26.25 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED-Enforcement Directorate) ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​​ಗೆ ವಂಚನೆ ಮಾಡಿದ ಪ್ರಕರಣದಲ್ಲಿ ಇ.ಡಿ. ಆಸ್ತಿ ಜಪ್ತಿ ಮಾಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.  ಹೀಗೆ ಮುಟ್ಟುಗೋಲು ಹಾಕಲಾದ ಆಸ್ತಿಯಲ್ಲಿ, ಭೂಮಿ, ವಸತಿ ಮತ್ತು ವಾಣಿಜ್ಯ ಉಪಯೋಗಿ ಆಸ್ತಿಗಳಿವೆ. ಅಂದಹಾಗೇ, ಇದೀಗ ಬ್ಯಾಂಕ್​ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಕಂಪನಿ ಗುಜರಾತ್​​ನ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು ಅದರ ಪೂರ್ವದ ನಿರ್ದೇಶಕರು, ಪ್ರವರ್ತಕರು ಮತ್ತವರ ಕುಟುಂಬದ ಸದಸ್ಯರು. 

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ. ವಂಚನೆ, ಕ್ರಮಿನಲ್​ ಪಿತೂರಿ, ಭ್ರಷ್ಟಾಚಾರ ತಡೆ ಕಾಯ್ದೆಯ ಉಲ್ಲಂಘನೆ ಪ್ರಕರಣಗಳನ್ನು ಕಂಪನಿ ಮತ್ತು ಅದರ ಆಯ್ದ ಸಿಬ್ಬಂದಿ ವಿರುದ್ಧ ದಾಖಲು ಮಾಡಲಾಗಿದೆ. ಈ ಡೈಮಂಡ್​ ಪವರ್​, ಒಟ್ಟಾರೆ 19 ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಅವಧಿ ಸಾಲಗಳು, ಬಾಹ್ಯ ವಾಣಿಜ್ಯ ಸಾಲಗಳು ಮತ್ತು ಪರಿವರ್ತಿಸಲು ಸಾಧ್ಯವಾಗದ ಸಾಲಗಳನ್ನು ಪಡೆದುಕೊಂಡಿದೆ. ಹಾಗೇ, ಒಟ್ಟು 19 ಬ್ಯಾಂಕ್​ಗಳಿಗೆ 2,654.40 ಕೋಟಿ ರೂಪಾಯಿ ವಂಚಿಸಿದೆ ಎಂದು ಹೇಳಿರುವ ಇ.ಡಿ., ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ಕೋರ್ಟ್​ವೊಂದರಲ್ಲಿ ಚಾರ್ಜ್​ಶೀಟ್ ಕೂಡ ಸಲ್ಲಿಸಿದೆ.

ಇದನ್ನೂ ಓದಿ: Radhe Shyam: ಓಟಿಟಿ ರಿಲೀಸ್ ಮಾಡುವಂತೆ ‘ರಾಧೆ ಶ್ಯಾಮ್’ಗೆ ಬರೋಬ್ಬರಿ 350 ಕೋಟಿ ಆಫರ್; ಚಿತ್ರತಂಡದ ಪ್ಲಾನ್ ಏನು?

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು