AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.
ಇ.ಡಿ.
TV9 Web
| Updated By: Lakshmi Hegde|

Updated on: Jan 04, 2022 | 8:31 AM

Share

ಗುಜರಾತ್​ ಮೂಲದ ಕಂಪನಿ ಮತ್ತು ಅದರ ಕಾರ್ಯವಾಹಕ ಅಧಿಕಾರಿಗಳ ಸುಮಾರು 26.25 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED-Enforcement Directorate) ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​​ಗೆ ವಂಚನೆ ಮಾಡಿದ ಪ್ರಕರಣದಲ್ಲಿ ಇ.ಡಿ. ಆಸ್ತಿ ಜಪ್ತಿ ಮಾಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.  ಹೀಗೆ ಮುಟ್ಟುಗೋಲು ಹಾಕಲಾದ ಆಸ್ತಿಯಲ್ಲಿ, ಭೂಮಿ, ವಸತಿ ಮತ್ತು ವಾಣಿಜ್ಯ ಉಪಯೋಗಿ ಆಸ್ತಿಗಳಿವೆ. ಅಂದಹಾಗೇ, ಇದೀಗ ಬ್ಯಾಂಕ್​ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಕಂಪನಿ ಗುಜರಾತ್​​ನ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು ಅದರ ಪೂರ್ವದ ನಿರ್ದೇಶಕರು, ಪ್ರವರ್ತಕರು ಮತ್ತವರ ಕುಟುಂಬದ ಸದಸ್ಯರು. 

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ. ವಂಚನೆ, ಕ್ರಮಿನಲ್​ ಪಿತೂರಿ, ಭ್ರಷ್ಟಾಚಾರ ತಡೆ ಕಾಯ್ದೆಯ ಉಲ್ಲಂಘನೆ ಪ್ರಕರಣಗಳನ್ನು ಕಂಪನಿ ಮತ್ತು ಅದರ ಆಯ್ದ ಸಿಬ್ಬಂದಿ ವಿರುದ್ಧ ದಾಖಲು ಮಾಡಲಾಗಿದೆ. ಈ ಡೈಮಂಡ್​ ಪವರ್​, ಒಟ್ಟಾರೆ 19 ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಅವಧಿ ಸಾಲಗಳು, ಬಾಹ್ಯ ವಾಣಿಜ್ಯ ಸಾಲಗಳು ಮತ್ತು ಪರಿವರ್ತಿಸಲು ಸಾಧ್ಯವಾಗದ ಸಾಲಗಳನ್ನು ಪಡೆದುಕೊಂಡಿದೆ. ಹಾಗೇ, ಒಟ್ಟು 19 ಬ್ಯಾಂಕ್​ಗಳಿಗೆ 2,654.40 ಕೋಟಿ ರೂಪಾಯಿ ವಂಚಿಸಿದೆ ಎಂದು ಹೇಳಿರುವ ಇ.ಡಿ., ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ಕೋರ್ಟ್​ವೊಂದರಲ್ಲಿ ಚಾರ್ಜ್​ಶೀಟ್ ಕೂಡ ಸಲ್ಲಿಸಿದೆ.

ಇದನ್ನೂ ಓದಿ: Radhe Shyam: ಓಟಿಟಿ ರಿಲೀಸ್ ಮಾಡುವಂತೆ ‘ರಾಧೆ ಶ್ಯಾಮ್’ಗೆ ಬರೋಬ್ಬರಿ 350 ಕೋಟಿ ಆಫರ್; ಚಿತ್ರತಂಡದ ಪ್ಲಾನ್ ಏನು?

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ