AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ.

9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.
ಇ.ಡಿ.
TV9 Web
| Edited By: |

Updated on: Jan 04, 2022 | 8:31 AM

Share

ಗುಜರಾತ್​ ಮೂಲದ ಕಂಪನಿ ಮತ್ತು ಅದರ ಕಾರ್ಯವಾಹಕ ಅಧಿಕಾರಿಗಳ ಸುಮಾರು 26.25 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED-Enforcement Directorate) ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​​ಗೆ ವಂಚನೆ ಮಾಡಿದ ಪ್ರಕರಣದಲ್ಲಿ ಇ.ಡಿ. ಆಸ್ತಿ ಜಪ್ತಿ ಮಾಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.  ಹೀಗೆ ಮುಟ್ಟುಗೋಲು ಹಾಕಲಾದ ಆಸ್ತಿಯಲ್ಲಿ, ಭೂಮಿ, ವಸತಿ ಮತ್ತು ವಾಣಿಜ್ಯ ಉಪಯೋಗಿ ಆಸ್ತಿಗಳಿವೆ. ಅಂದಹಾಗೇ, ಇದೀಗ ಬ್ಯಾಂಕ್​ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಕಂಪನಿ ಗುಜರಾತ್​​ನ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು ಅದರ ಪೂರ್ವದ ನಿರ್ದೇಶಕರು, ಪ್ರವರ್ತಕರು ಮತ್ತವರ ಕುಟುಂಬದ ಸದಸ್ಯರು. 

2018ರಲ್ಲಿ ಈ ಸಂಸ್ಥೆ ಮತ್ತು ಅದರ ಸಂಬಂಧಿತ ಶಾಖೆಗಳು, ಘಟಕಗಳಿಗೆ ಸೇರಿದ 1122.72 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿತ್ತು.  ಗುಜರಾತ್​​ ಮೂಲದ ಈ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಕೂಡ ಈಗಾಗಲೇ ಹಣ ಅಕ್ರಮ ವರ್ಗಾವಣೆ ಆರೋಪದಡಿ ಕೇಸ್ ದಾಖಲು ಮಾಡಿದೆ. ವಂಚನೆ, ಕ್ರಮಿನಲ್​ ಪಿತೂರಿ, ಭ್ರಷ್ಟಾಚಾರ ತಡೆ ಕಾಯ್ದೆಯ ಉಲ್ಲಂಘನೆ ಪ್ರಕರಣಗಳನ್ನು ಕಂಪನಿ ಮತ್ತು ಅದರ ಆಯ್ದ ಸಿಬ್ಬಂದಿ ವಿರುದ್ಧ ದಾಖಲು ಮಾಡಲಾಗಿದೆ. ಈ ಡೈಮಂಡ್​ ಪವರ್​, ಒಟ್ಟಾರೆ 19 ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಅವಧಿ ಸಾಲಗಳು, ಬಾಹ್ಯ ವಾಣಿಜ್ಯ ಸಾಲಗಳು ಮತ್ತು ಪರಿವರ್ತಿಸಲು ಸಾಧ್ಯವಾಗದ ಸಾಲಗಳನ್ನು ಪಡೆದುಕೊಂಡಿದೆ. ಹಾಗೇ, ಒಟ್ಟು 19 ಬ್ಯಾಂಕ್​ಗಳಿಗೆ 2,654.40 ಕೋಟಿ ರೂಪಾಯಿ ವಂಚಿಸಿದೆ ಎಂದು ಹೇಳಿರುವ ಇ.ಡಿ., ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ಕೋರ್ಟ್​ವೊಂದರಲ್ಲಿ ಚಾರ್ಜ್​ಶೀಟ್ ಕೂಡ ಸಲ್ಲಿಸಿದೆ.

ಇದನ್ನೂ ಓದಿ: Radhe Shyam: ಓಟಿಟಿ ರಿಲೀಸ್ ಮಾಡುವಂತೆ ‘ರಾಧೆ ಶ್ಯಾಮ್’ಗೆ ಬರೋಬ್ಬರಿ 350 ಕೋಟಿ ಆಫರ್; ಚಿತ್ರತಂಡದ ಪ್ಲಾನ್ ಏನು?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್