AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಸಂಸದ ಎ.ರಾಜಾಗೆ ಸೇರಿದ 55 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಜಪ್ತಿ ಮಾಡಿದ ಇಡಿ

ಡಿಎಂಕೆ ಸಂಸದ ಎ.ರಾಜಾಗೆ ಸೇರಿದ 55 ಕೋಟಿ ರೂ. ಮೌಲ್ಯದ 45 ಎಕರೆ ಬೇನಾಮಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಡಿಎಂಕೆ ಸಂಸದ ಎ.ರಾಜಾಗೆ ಸೇರಿದ 55 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಜಪ್ತಿ ಮಾಡಿದ ಇಡಿ
ಡಿಎಂಕೆ ಸಂಸದ ಎ.ರಾಜಾ
TV9 Web
| Edited By: |

Updated on:Dec 22, 2022 | 9:55 PM

Share

ಕೊಯಮತ್ತೂರು: ಡಿಎಂಕೆ ಸಂಸದ ಎ ರಾಜಾ (A Raja) ಅವರಿಗೆ ಸೇರಿದ 55 ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ತಮಿಳುನಾಡಿನ ಕೊಯಮತ್ತೂರು (Coimbatore) ಜಿಲ್ಲೆಯಲ್ಲಿರುವ 55 ಕೋಟಿ ರೂಪಾಯಿ ಮೌಲ್ಯದ 45 ಎಕರೆ ಭೂಮಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತಿಳಿಸಿದೆ.

ಇದನ್ನೂ ಓದಿ: ನೀವು ಹಿಂದೂ ಆಗಿ ಇರುವವರೆಗೂ ನೀವು ಶೂದ್ರರಾಗಿಯೇ ಇರುತ್ತೀರಿ: ತಮಿಳುನಾಡು ಸಂಸದ ಎ ರಾಜಾ

2004ರಿಂದ 2007 ರ ವರೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ ಕಂಪನಿಗೆ ಪರಿಸರ ಅನುಮತಿ ನೀಡಲು ರಾಜಾ ಅವರೊಂದಿಗೆ ಸಂಬಂಧ ಹೊಂದಿರುವ ಕಂಪನಿ ಈ ಭೂಮಿ ಖರೀದಿಸಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಈ ಭೂಮಿ ರಾಜಾ ಅವರ ಬೇನಾಮಿ ಕಂಪನಿ ಹೆಸರಿನಲ್ಲಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. 59 ವರ್ಷದ ರಾಜಾ ಪ್ರಸ್ತುತ ನೀಲಗಿರಿ ಲೋಕಸಭಾ ಕ್ಷೇತ್ರದಿಂದ ಡಿಎಂಕೆ ಸಂಸದರಾಗಿದ್ದಾರೆ.

ಚಾರ್ಜ್​ಶೀಟ್​ ಸಿಬಿಐ ಆರೋಪಿಸಿದ್ದೇನು?

ಯುಪಿಎ ಸರ್ಕಾರದಲ್ಲಿ ಕೇಂದ್ರ ಪರಿಸರ ಸಚಿವರಾಗಿದ್ದ ಅವಧಿಯಲ್ಲಿ ರಾಜಾ ಅವರು 5.55 ಕೋಟಿ ರೂ. ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಈ ಹಿಂದೆ ಸಿಬಿಐ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ. ಅಲ್ಲದೇ ರಾಜಾ ಅವರ ನಿಕಟವರ್ತಿ ಸಿ ಕೃಷ್ಣಮೂರ್ತಿ ಅವರು ಜನವರಿ 2007 ರಲ್ಲಿ ಕೋವೈ ಶೆಲ್ಟರ್ಸ್ ಪ್ರಮೋಟರ್ಸ್ ಎಂಬ ಕಂಪನಿಯನ್ನು ಸ್ಥಾಪಿಸಿದ್ದರು. ಆ ವರ್ಷ ಫೆಬ್ರವರಿಯಲ್ಲಿ ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ ಕಂಪನಿಯಿಂದ ಕಾಂಚೀಪುರಂನಲ್ಲಿ ಕಮಿಷನ್ ಆಗಿ 55 ಕೋಟಿ ರೂ. ಭೂಮಿ ಖರೀದಿಸಿದ್ದರು ಎಂದು ಆರೋಪಿಸಲಾಗಿದೆ.

Published On - 9:55 pm, Thu, 22 December 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ