AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amnesty International: ಅಮ್ನೆಸ್ಟಿ ಇಂಟರ್​ನ್ಯಾಷನಲ್​ನ 7.66 ಕೋಟಿ ರೂ. ಮೌಲ್ಯದ ಚರಾಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

2018ರಲ್ಲಿ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರವೇಟ್ ಲಿಮಿಟೆಡ್​ (Amnesty International) ನ ಬೆಂಗಳೂರು ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ., ಕಂಪನಿಯ ಬ್ಯಾಂಕ್​ ಅಕೌಂಟ್​ಗಳಲ್ಲಿದ್ದ ಸುಮಾರು 52 ಕೋಟಿ ರೂ.ಠೇವಣಿಯ ಮೇಲೆ ನಿರ್ಬಂಧ ಹೇರಿತ್ತು.

Amnesty International: ಅಮ್ನೆಸ್ಟಿ ಇಂಟರ್​ನ್ಯಾಷನಲ್​ನ 7.66 ಕೋಟಿ ರೂ. ಮೌಲ್ಯದ ಚರಾಸ್ತಿ ಮುಟ್ಟುಗೋಲು ಹಾಕಿದ ಇ.ಡಿ.
ಅಮ್ನೆಸ್ಟಿ ಇಂಟರ್​​ನ್ಯಾಷನಲ್ ಇಂಡಿಯಾ (ಸಂಗ್ರಹ ಚಿತ್ರ)
Lakshmi Hegde
|

Updated on:Feb 17, 2021 | 12:12 PM

Share

ದೆಹಲಿ: ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರೈವೇಟ್​ ಲಿಮಿಟೆಡ್ (Amnesty International India Pvt Ltd) ಮತ್ತು ಇತರರಿ​ಗೆ ಸೇರಿದ 17.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಉಲ್ಲಂಘನೆ ಆರೋಪ ಹೊತ್ತಿರುವ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರೈವೇಟ್​ ಲಿಮಿಟೆಡ್​ನ ಬೆಂಗಳೂರು ಹಾಗೂ ದೆಹಲಿಯ ಕಚೇರಿ ಮೇಲೆ 2019ರ ನವೆಂಬರ್​ನಲ್ಲಿ ಸಿಬಿಐ ದಾಳಿ ನಡೆಸಿತ್ತು. ಅದಕ್ಕೂ ಒಂದು ವರ್ಷ ಮೊದಲೇ ಅಂದರೆ 2018ರಲ್ಲೇ ಇ.ಡಿ.ಅಮ್ನೆಸ್ಟಿ ಇಂಡಿಯಾದ ಬೆಂಗಳೂರು ಕಚೇರಿಯಲ್ಲಿ ಪರಿಶೀಲನೆ ನಡೆಸಿತ್ತು.

ಅಂತಾರಾಷ್ಟ್ರೀಯ ಮಟ್ಟದ ಮಾನವ ಹಕ್ಕು ಸಂಸ್ಥೆಯಾಗಿರುವ ಇಂಗ್ಲೆಂಡ್ ಮೂಲದ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಪ್ರೈವೇಟ್​ ಲಿಮಿಟೆಡ್​ ಭಾರತದಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದೆ. ಈ ಕಾಯ್ದೆಯನ್ನೂ ಮೀರಿ ವಿದೇಶಗಳಿಂದ ಹಣ ಪಡೆದಿದ್ದರಿಂದ ಸಿಬಿಐ, ಇ.ಡಿ.ದಾಳಿ ನಡೆಸಿವೆ. ಹಾಗೇ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಮ್ನೆಸ್ಟಿ ಇಂಟರ್​ನ್ಯಾಷನಲ್ ಸಂಸ್ಥೆಗೆ ಭಾರತದಲ್ಲಿ ಕಾರ್ಯ ಮುಂದುವರಿಸಲು ಕೇಂದ್ರ ಗೃಹ ಇಲಾಖೆ ಅನುಮತಿ ನೀಡಿರಲಿಲ್ಲ. ಅಷ್ಟೇ ಅಲ್ಲ, ಅಮ್ನೆಸ್ಟಿ ಇಂಡಿಯಾದ ಬ್ಯಾಂಕ್​ ಖಾತೆಗಳನ್ನು ಮುಟ್ಟುಹೋಲು ಹಾಕಿತ್ತು. ಇದರಿಂದಾಗಿ ಕಳೆದ ವರ್ಷ ಸೆಪ್ಟೆಂಬರ್​ನಲ್ಲೇ ಅಮ್ನೆಸ್ಟಿ ಇಂಟರ್​ನ್ಯಾಷನಲ್ ಭಾರತದಲ್ಲಿ ಕಾರ್ಯಸ್ಥಗಿತಗೊಳಿಸಿದೆ. ಇದರೊಂದಿಗೆ ಕೇಂದ್ರದ ನಡೆಯನ್ನು ತೀವ್ರವಾಗಿ ವಿರೋಧಿಸಿತ್ತು. ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗಿದೆ, ದುರುದ್ದೇಶದಿಂದ ನಮ್ಮ ಕಂಪನಿ ವಿರುದ್ಧ ಕೇಂದ್ರ ಸೇಡು ತೀರಿಸಿಕೊಂಡಿದೆ ಎಂದೂ ಆರೋಪ ಮಾಡಿತ್ತು.

ಇದನ್ನೂ ಓದಿ: Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ತೆರವು; ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ

2018ರಲ್ಲಿ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರವೇಟ್ ಲಿಮಿಟೆಡ್​ನ ಬೆಂಗಳೂರು ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ., ಕಂಪನಿಯ ಬ್ಯಾಂಕ್​ ಅಕೌಂಟ್​ಗಳಲ್ಲಿದ್ದ ಸುಮಾರು 52 ಕೋಟಿ ರೂ.ಠೇವಣಿಯ ಮೇಲೆ ನಿರ್ಬಂಧ ಹೇರಿತ್ತು. ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾದ ಮುಖ್ಯಸ್ಥರು, ತಾವು ಯುಕೆಯಲ್ಲಿರುವ ಪ್ರಧಾನ ಕಚೇರಿಯಿಂದ ರಫ್ತು ಸೇವೆಗಾಗಿ ಹಣ ಪಡೆಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದರೂ, ಅದಕ್ಕೆ ಯಾವುದೇ ದಾಖಲೆಗಳೇ ಇಲ್ಲ ಎಂದೂ ಇ.ಡಿ.ಮೂಲಗಳು ತಿಳಿಸಿವೆ.

Published On - 12:08 pm, Wed, 17 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?