AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amnesty International: ಅಮ್ನೆಸ್ಟಿ ಇಂಟರ್​ನ್ಯಾಷನಲ್​ನ 7.66 ಕೋಟಿ ರೂ. ಮೌಲ್ಯದ ಚರಾಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

2018ರಲ್ಲಿ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರವೇಟ್ ಲಿಮಿಟೆಡ್​ (Amnesty International) ನ ಬೆಂಗಳೂರು ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ., ಕಂಪನಿಯ ಬ್ಯಾಂಕ್​ ಅಕೌಂಟ್​ಗಳಲ್ಲಿದ್ದ ಸುಮಾರು 52 ಕೋಟಿ ರೂ.ಠೇವಣಿಯ ಮೇಲೆ ನಿರ್ಬಂಧ ಹೇರಿತ್ತು.

Amnesty International: ಅಮ್ನೆಸ್ಟಿ ಇಂಟರ್​ನ್ಯಾಷನಲ್​ನ 7.66 ಕೋಟಿ ರೂ. ಮೌಲ್ಯದ ಚರಾಸ್ತಿ ಮುಟ್ಟುಗೋಲು ಹಾಕಿದ ಇ.ಡಿ.
ಅಮ್ನೆಸ್ಟಿ ಇಂಟರ್​​ನ್ಯಾಷನಲ್ ಇಂಡಿಯಾ (ಸಂಗ್ರಹ ಚಿತ್ರ)
Lakshmi Hegde
|

Updated on:Feb 17, 2021 | 12:12 PM

Share

ದೆಹಲಿ: ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರೈವೇಟ್​ ಲಿಮಿಟೆಡ್ (Amnesty International India Pvt Ltd) ಮತ್ತು ಇತರರಿ​ಗೆ ಸೇರಿದ 17.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಉಲ್ಲಂಘನೆ ಆರೋಪ ಹೊತ್ತಿರುವ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರೈವೇಟ್​ ಲಿಮಿಟೆಡ್​ನ ಬೆಂಗಳೂರು ಹಾಗೂ ದೆಹಲಿಯ ಕಚೇರಿ ಮೇಲೆ 2019ರ ನವೆಂಬರ್​ನಲ್ಲಿ ಸಿಬಿಐ ದಾಳಿ ನಡೆಸಿತ್ತು. ಅದಕ್ಕೂ ಒಂದು ವರ್ಷ ಮೊದಲೇ ಅಂದರೆ 2018ರಲ್ಲೇ ಇ.ಡಿ.ಅಮ್ನೆಸ್ಟಿ ಇಂಡಿಯಾದ ಬೆಂಗಳೂರು ಕಚೇರಿಯಲ್ಲಿ ಪರಿಶೀಲನೆ ನಡೆಸಿತ್ತು.

ಅಂತಾರಾಷ್ಟ್ರೀಯ ಮಟ್ಟದ ಮಾನವ ಹಕ್ಕು ಸಂಸ್ಥೆಯಾಗಿರುವ ಇಂಗ್ಲೆಂಡ್ ಮೂಲದ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಪ್ರೈವೇಟ್​ ಲಿಮಿಟೆಡ್​ ಭಾರತದಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದೆ. ಈ ಕಾಯ್ದೆಯನ್ನೂ ಮೀರಿ ವಿದೇಶಗಳಿಂದ ಹಣ ಪಡೆದಿದ್ದರಿಂದ ಸಿಬಿಐ, ಇ.ಡಿ.ದಾಳಿ ನಡೆಸಿವೆ. ಹಾಗೇ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಮ್ನೆಸ್ಟಿ ಇಂಟರ್​ನ್ಯಾಷನಲ್ ಸಂಸ್ಥೆಗೆ ಭಾರತದಲ್ಲಿ ಕಾರ್ಯ ಮುಂದುವರಿಸಲು ಕೇಂದ್ರ ಗೃಹ ಇಲಾಖೆ ಅನುಮತಿ ನೀಡಿರಲಿಲ್ಲ. ಅಷ್ಟೇ ಅಲ್ಲ, ಅಮ್ನೆಸ್ಟಿ ಇಂಡಿಯಾದ ಬ್ಯಾಂಕ್​ ಖಾತೆಗಳನ್ನು ಮುಟ್ಟುಹೋಲು ಹಾಕಿತ್ತು. ಇದರಿಂದಾಗಿ ಕಳೆದ ವರ್ಷ ಸೆಪ್ಟೆಂಬರ್​ನಲ್ಲೇ ಅಮ್ನೆಸ್ಟಿ ಇಂಟರ್​ನ್ಯಾಷನಲ್ ಭಾರತದಲ್ಲಿ ಕಾರ್ಯಸ್ಥಗಿತಗೊಳಿಸಿದೆ. ಇದರೊಂದಿಗೆ ಕೇಂದ್ರದ ನಡೆಯನ್ನು ತೀವ್ರವಾಗಿ ವಿರೋಧಿಸಿತ್ತು. ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗಿದೆ, ದುರುದ್ದೇಶದಿಂದ ನಮ್ಮ ಕಂಪನಿ ವಿರುದ್ಧ ಕೇಂದ್ರ ಸೇಡು ತೀರಿಸಿಕೊಂಡಿದೆ ಎಂದೂ ಆರೋಪ ಮಾಡಿತ್ತು.

ಇದನ್ನೂ ಓದಿ: Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ತೆರವು; ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ

2018ರಲ್ಲಿ ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾ ಪ್ರವೇಟ್ ಲಿಮಿಟೆಡ್​ನ ಬೆಂಗಳೂರು ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ., ಕಂಪನಿಯ ಬ್ಯಾಂಕ್​ ಅಕೌಂಟ್​ಗಳಲ್ಲಿದ್ದ ಸುಮಾರು 52 ಕೋಟಿ ರೂ.ಠೇವಣಿಯ ಮೇಲೆ ನಿರ್ಬಂಧ ಹೇರಿತ್ತು. ಅಮ್ನೆಸ್ಟಿ ಇಂಟರ್​ನ್ಯಾಷನಲ್​ ಇಂಡಿಯಾದ ಮುಖ್ಯಸ್ಥರು, ತಾವು ಯುಕೆಯಲ್ಲಿರುವ ಪ್ರಧಾನ ಕಚೇರಿಯಿಂದ ರಫ್ತು ಸೇವೆಗಾಗಿ ಹಣ ಪಡೆಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದರೂ, ಅದಕ್ಕೆ ಯಾವುದೇ ದಾಖಲೆಗಳೇ ಇಲ್ಲ ಎಂದೂ ಇ.ಡಿ.ಮೂಲಗಳು ತಿಳಿಸಿವೆ.

Published On - 12:08 pm, Wed, 17 February 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?