AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಆಪ್ತರ ಮನೆಯಲ್ಲಿ  ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ
ವಿ ಸೆಂಥಿಲ್ ಬಾಲಾಜಿ
ಅಕ್ಷಯ್​ ಪಲ್ಲಮಜಲು​​
|

Updated on:Jun 13, 2023 | 11:22 AM

Share

ಚೆನ್ನೈ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಮತ್ತು ಅವರ ಆಪ್ತರ ಮನೆಯಲ್ಲಿ  ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಆಪ್ತರ ಮನೆಗಳಲ್ಲಿ ಇಡಿ ಹುಡುಕಾಟ ಆರಂಭಿಸಿದೆ. ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿಗೆ ಸಂಬಂಧಿಸಿದ ಮನೆಗಳ ಮೇಲೆ ದಾಳಿ ನಡೆಸಿದ್ದರು. ಪಿಟಿಐ ಪ್ರಕಾರ, ಅಧಿಕಾರಿಗಳು, ಅಕ್ರಮ ಹಣ ವರ್ಗಾವಣೆ ಭಾಗವಾಗಿ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧದ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸೆಂಥಿಲ್ ಬಾಲಾಜಿ, ಜಾರಿ ನಿರ್ದೇಶನಾಲಯ ನಡೆಸುತ್ತಿರುವ ಶೋಧದ ಉದ್ದೇಶವೇನೆಂದು ನನಗೆ ತಿಳಿದಿಲ್ಲ, ಆ ಬಗ್ಗೆ ನಾವು ಕಾದು ನೋಡಬೇಕಾಗಿದೆ, ಆದರೆ ಈ ಬಗ್ಗೆ ನನಗೆ ಯಾವುದೇ ಪೂರ್ವ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯಕ್ಕೆ ಅಥವಾ ಆದಾಯ ತೆರಿಗೆ ಇಲಾಖೆಯಾಗೆ ಸಂಪೂರ್ಣ ಸಹಕಾರ ನೀಡಲು ನಾನು ಸಿದ್ಧನಿದ್ದೇನೆ. ಅಲ್ಲದೆ ಅವರಿಗೆ ಬೇಕಿದ್ದರೆ ವಿವರಣೆಗೆ ಬರಲು ಸಿದ್ಧನಿದ್ದೇನೆ ಎಂದು ಸೆಂಥಿಲ್ ಬಾಲಾಜಿ ಹೇಳಿದ್ದಾರೆ.

ಇದನ್ನೂ ಓದಿ: NIA Raids: ದಾಳಿಗಾಗಿ ಮೂರು ತಿಂಗಳಿನಿಂದ ತನಿಖೆ ನಡೆಸಿದ್ದ ಎನ್​ಐಎ, ಹೀಗಿದೆ ಬಂಧಿತರ ವೃತ್ತಾಂತ

ಮೇ 26 ರಂದು ತಮಿಳುನಾಡಿನಾದ್ಯಂತ ಸಚಿವ ಸೆಂಥಿಲ್ ಬಾಲಾಜಿ ಅವರ ಸಂಬಂಧಿಕರಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ಸಚಿವರ ಸಹೋದರನ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.

ಸೆಂಥಿಲ್ ಬಾಲಾಜಿ ಕರೂರಿನ ಡಿಎಂಕೆಯ ಹಿರಿಯ ನಾಯಕ. ಕ್ಷೇತ್ರದಲ್ಲಿ ಭಾರೀ ಪೈಪೋಟಿ ನಡೆಸಿರುವ ಅವರು ಮಾಜಿ ಸಾರಿಗೆ ಸಚಿವ ವಿಜಯಭಾಸ್ಕರ್ ವಿರುದ್ಧ ಗೆದಿದ್ದರು. ಸೆಂಥಿಲ್ ಬಾಲಾಜಿ ಆರಂಭದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಇದ್ದರು, ನಂತರ ಅವರು ಆ ಪಕ್ಷವನ್ನು ತೊರೆದು ಡಿಎಂಕೆಗೆ ಹೋಗಿದ್ದಾರೆ. ನಂತರ ಡಿಎಂಕೆ ಸಂಪುಟದಲ್ಲಿ ಇಂಧನ ಸಚಿವರಾಗಿ ನೇಮಕಗೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Tue, 13 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ