AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಸೇರಿ 6 ಮಂದಿ ವಿರುದ್ಧ ಚಾರ್ಜ್​ಶೀಟ್

ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಭೂಪೇಶ್ ಬಘೇಲ್‌ಗೆ ಒಟ್ಟು 508 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಲಾಯ ತನಿಖೆ ವೇಳೆ ಗೊತ್ತಾಗಿತ್ತು. ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಭೂಪೇಶ್ ಬಘೇಲ್‌ಗೆ ಹಣವನ್ನು ಕಳುಹಿಸಲಾಗಿದೆ ಎಂದು ಚಾರ್ಜ್‌ಶೀಟ್​​ನಲ್ಲಿ ಪ್ರತಿಪಾದಿಸಲಾಗಿದೆ.

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಸೇರಿ 6 ಮಂದಿ ವಿರುದ್ಧ ಚಾರ್ಜ್​ಶೀಟ್
ಭೂಪೇಶ್ ಬಘೇಲ್
ಗಣಪತಿ ಶರ್ಮಾ
|

Updated on: Jan 06, 2024 | 10:17 AM

Share

ನವದೆಹಲಿ, ಜನವರಿ 6: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ (Mahadev Betting App Case) ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯವು (ED) ಛತ್ತೀಸ್​​​ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಅವರ ಹೆಸರನ್ನು ಒಳಗೊಂಡಂತೆ 6 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇತರ ಐವರು ಆರೋಪಿಗಳನ್ನು ಚಾರ್ಜ್​​​ಶೀಟ್​​ನಲ್ಲಿ ಉಲ್ಲೇಖಿಸಲಾಗಿದ್ದು, ವಿವಾದಾತ್ಮಕ ಬೆಟ್ಟಿಂಗ್ ಆ್ಯಪ್ ಹಗರಣದ ಮೇಲೆ ಬೆಳಕು ಚೆಲ್ಲಿದೆ.

ದೋಷಾರೋಪಪಟ್ಟಿಯಲ್ಲಿ ಬಘೇಲ್ ಜತೆಗೆ ಶುಭಂ ಸೋನಿ, ಅಮಿತ್ ಕುಮಾರ್ ಅಗರ್ವಾಲ್, ರೋಹಿತ್ ಗುಲಾಟಿ, ಭೀಮ್ ಸಿಂಗ್ ಮತ್ತು ಅಸೀಮ್ ದಾಸ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ಕೊರಿಯರ್ ಆಗಿ ಕೆಲಸ ಮಾಡುತ್ತಿದ್ದ ಅಸೀಮ್ ದಾಸ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿದ್ದು, ಅವರ ನಿವೇಶನದಿಂದ ಸುಮಾರು 5.39 ಕೋಟಿ ರೂ. ವಶಪಡಿಸಿಕೊಂಡಿರುವ ಬಗ್ಗೆ ಚಾರ್ಜ್‌ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ವಶಪಡಿಸಿಕೊಂಡ ಹಣವನ್ನು ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್‌ಗೆ ಕಳುಹಿಸಲಾಗಿದೆ ಎಂದು ಅಸೀಮ್ ದಾಸ್ ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಈ ವಹಿವಾಟು ನಡೆದಿದೆ ಎನ್ನಲಾಗಿದೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಭೂಪೇಶ್ ಬಘೇಲ್‌ಗೆ ಒಟ್ಟು 508 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಲಾಯ ತನಿಖೆ ವೇಳೆ ಗೊತ್ತಾಗಿತ್ತು. ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಭೂಪೇಶ್ ಬಘೇಲ್‌ಗೆ ಹಣವನ್ನು ಕಳುಹಿಸಲಾಗಿದೆ ಎಂದು ಚಾರ್ಜ್‌ಶೀಟ್​​ನಲ್ಲಿ ಪ್ರತಿಪಾದಿಸಲಾಗಿದೆ.

ಇದನ್ನೂ ಓದಿ: ಬೆಟ್ಟಿಂಗ್ ಆ್ಯಪ್​ ಪ್ರವರ್ತಕರಿಂದ 508 ಕೋಟಿ ಪಡೆದ ಭೂಪೇಶ್ ಬಘೇಲ್​: ಇ.ಡಿ

ಏನಿದು ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣ?

ಮಹದೇವ್ ಆನ್‌ಲೈನ್ ಆ್ಯಪ್ ಪ್ರವರ್ತಕರು 5,000 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ. ಆ್ಯಪ್ ಸ್ಕಿಲ್ ಗೇಮ್‌ಗಳ ಹೆಸರಿನಲ್ಲಿ ಭಾರತದಲ್ಲಿ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ನಡೆಸುತ್ತಿದೆ. ಆ್ಯಪ್ ಕಂಪನಿಯು ವೆಬ್‌ಸೈಟ್‌ಗಳಲ್ಲಿ ಸಂಪರ್ಕ ಸಂಖ್ಯೆಯ ಜಾಹೀರಾತು ನೀಡಿ, ಹಣ ಠೇವಣಿ ಮಾಡಲು laser247.com ನಂತಹ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವಂತೆ ಬಳಕೆದಾರರಿಗೆ ಸೂಚಿಸುತ್ತದೆ. ಈ ಆ್ಯಪ್​ನ ಪ್ರವರ್ತಕರು ಛತ್ತೀಸ್​ಗಢ ಮಾಜಿ ಸಿಎಂಗೆ ಹಣ ಕಳುಹಿಸಿಕೊಟ್ಟಿರುವುದನ್ನು ಜಾರಿ ನಿರ್ದೇಶನಾಲಯ ಬಯಲಿಗೆಳೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!