AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Jan 04, 2021 | 2:27 PM

Share

ಹೈದರಾಬಾದ್​: ತುರ್ತು ಸಾಲ ನೀಡುವ ಹೆಸರಿನಲ್ಲಿ ಗ್ರಾಹಕರ ಜೇಬಿಗೆ ಕನ್ನ ಹಾಕುವುದಲ್ಲದೇ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದ ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಜಾರಿ ನಿರ್ದೇಶನಾಲಯ ಕಾನೂನಾತ್ಮಕವಾಗಿ ದೂರು ದಾಖಲಿಸಿಕೊಂಡಿದೆ. ತೆಲಂಗಾಣ ಪೊಲೀಸರು ಮತ್ತು ಸೈಬರ್​ ವಿಭಾಗದವರು ಇದುವರೆಗೆ ಗುರುತಿಸಿದ್ದ ಆ್ಯಪ್​ಗಳ ವಿರುದ್ಧ ಮತ್ತು ಅದನ್ನು ನಿರ್ವಹಿಸುತ್ತಿದ್ದ ಚೀನಾ ಮೂಲದ ವ್ಯಕ್ತಿಗಳು ಹಾಗೂ ಅದಕ್ಕೆ ಸಹಕಾರ ನೀಡುತ್ತಿದ್ದವರ ಮೇಲೆ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾನೂನಿನಡಿ ದೂರು ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು, ಕಾನೂನಿನ ಕಣ್ತಪ್ಪಿಸಿ ಅಕ್ರಮವಾಗಿ ಸಾಲ ನೀಡುತ್ತಿದ್ದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಹೈದರಾಬಾದ್​ ಪೊಲೀಸರು ದಾಖಲಿಸಿರುವ 27 ಎಫ್​ಐಆರ್​ಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ. ಹೈದರಾಬಾದ್​ ಪೊಲೀಸರು ವಶಕ್ಕೆ ಪಡೆದಿರುವ 16 ಜನರನ್ನು ವಿಚಾರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಾಲಕ್ಕಾಗಿ ಲೋನ್ ಆ್ಯಪ್​ಗಳ ಮೊರೆ ಹೋಗುವ ಮುನ್ನ ಎಚ್ಚರ! ಇದರ ಹಿಂದಿದೆ ದೊಡ್ಡ ಜಾಲ

Published On - 2:26 pm, Mon, 4 January 21

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್