AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ.

ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಕೊನೆಗೂ ತನಿಖೆಗೆ ಇಳಿದ ಜಾರಿ ನಿರ್ದೇಶನಾಲಯ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Jan 04, 2021 | 2:27 PM

Share

ಹೈದರಾಬಾದ್​: ತುರ್ತು ಸಾಲ ನೀಡುವ ಹೆಸರಿನಲ್ಲಿ ಗ್ರಾಹಕರ ಜೇಬಿಗೆ ಕನ್ನ ಹಾಕುವುದಲ್ಲದೇ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದ ಇನ್​ಸ್ಟಂಟ್​ ಲೋನ್​ ಆ್ಯಪ್​ಗಳ ವಿರುದ್ಧ ಜಾರಿ ನಿರ್ದೇಶನಾಲಯ ಕಾನೂನಾತ್ಮಕವಾಗಿ ದೂರು ದಾಖಲಿಸಿಕೊಂಡಿದೆ. ತೆಲಂಗಾಣ ಪೊಲೀಸರು ಮತ್ತು ಸೈಬರ್​ ವಿಭಾಗದವರು ಇದುವರೆಗೆ ಗುರುತಿಸಿದ್ದ ಆ್ಯಪ್​ಗಳ ವಿರುದ್ಧ ಮತ್ತು ಅದನ್ನು ನಿರ್ವಹಿಸುತ್ತಿದ್ದ ಚೀನಾ ಮೂಲದ ವ್ಯಕ್ತಿಗಳು ಹಾಗೂ ಅದಕ್ಕೆ ಸಹಕಾರ ನೀಡುತ್ತಿದ್ದವರ ಮೇಲೆ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾನೂನಿನಡಿ ದೂರು ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು, ಕಾನೂನಿನ ಕಣ್ತಪ್ಪಿಸಿ ಅಕ್ರಮವಾಗಿ ಸಾಲ ನೀಡುತ್ತಿದ್ದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಹೈದರಾಬಾದ್​ ಪೊಲೀಸರು ದಾಖಲಿಸಿರುವ 27 ಎಫ್​ಐಆರ್​ಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇನ್​ಸ್ಟಂಟ್​ ಸಾಲ ನೀಡುತ್ತಿರುವ ಆ್ಯಪ್​ಗಳಿಗೆ ಸಂಬಂಧಿಸಿ ಹೈದರಾಬಾದ್​, ಗುರುಗ್ರಾಮ, ಬೆಂಗಳೂರು ಸೇರಿದಂತೆ ಹಲವೆಡೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿದ್ದ ಚೀನಾ ಮೂಲದ ಕೆಲವರನ್ನು ಬಂಧಿಸಲಾಗಿದೆ. ಹೈದರಾಬಾದ್​ ಪೊಲೀಸರು ವಶಕ್ಕೆ ಪಡೆದಿರುವ 16 ಜನರನ್ನು ವಿಚಾರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಾಲಕ್ಕಾಗಿ ಲೋನ್ ಆ್ಯಪ್​ಗಳ ಮೊರೆ ಹೋಗುವ ಮುನ್ನ ಎಚ್ಚರ! ಇದರ ಹಿಂದಿದೆ ದೊಡ್ಡ ಜಾಲ

Published On - 2:26 pm, Mon, 4 January 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ