AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sheikh Shahjahan Arrest: ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧಿಸಿದ ಇಡಿ

ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೂ ಕಬಳಿಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಟಿಎಂಸಿ ಮಾಜಿ ನಾಯಕ ಶೇಖ್ ಷಹಜಹಾನ್​ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಇಡಿ ಅಧಿಕಾರಿಗಳ ತಂಡವು ಜೈಲಿನೊಳಗೆ ವಿಚಾರಣೆ ನಡೆಸಿ ಬಂಧಿಸಿದೆ.

Sheikh Shahjahan Arrest: ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧಿಸಿದ ಇಡಿ
ಟಿಎಂಸಿ ಮಾಜಿ ನಾಯಕ ಶೇಖ್ ಷಹಜಹಾನ್ ಬಂಧಿಸಿದ ಇಡಿ
Rakesh Nayak Manchi
Rakesh Nayak Manchi|

Updated on:Mar 30, 2024 | 9:34 PM

Share

ಕೋಲ್ಕತ್ತಾ, ಮಾ.30: ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೂ ಕಬಳಿಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಟಿಎಂಸಿ (TMC) ಮಾಜಿ ನಾಯಕ ಶೇಖ್ ಷಹಜಹಾನ್ (Sheikh Shahjahan)​ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ನ್ಯಾಯಾಲಯದಿಂದ ಅನುಮತಿ ಪಡೆದು ಷಹಜಹಾನ್​ ಅವರನ್ನು ವಶಕ್ಕೆ ಪಡೆದು ನಾಲ್ಕು ಗಂಟೆ ತೀವ್ರ ವಿಚಾರಣೆ ನಡೆಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದ್ದು, ಸೋಮವಾರ ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಲೈಂಗಿಕ ಕಿರುಕುಳ ನೀಡಿ ಭೂಕಬಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶೇಖ್ ಷಹಜಹಾನ್ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರು ಬೃಹತ್ ಪ್ರತಿಭಟನೆ ನಡೆಸಿದ್ದರು. ಹಿಂಸಾತ್ಮಕ ಪ್ರತಿಭಟನೆಯ ನಂತರ 55 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಷಹಜಹಾನ್​ ಅವರನ್ನು ಫೆಬ್ರವರಿ 29 ರಂದು ಬಂಧಿಸಲಾಗಿತ್ತು.

ಇದನ್ನೂ ಓದಿ: ಸಂದೇಶಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರ ನೋವನ್ನು ತಂದೆಯಂತೆ ತಾಳ್ಮೆಯಿಂದ ಆಲಿಸಿದ ಮೋದಿ

ಇದಕ್ಕೂ ಮೊದಲು ಜನವರಿ 5 ರಂದು, ಪಡಿತರ ಹಗರಣದಲ್ಲಿ ಷಹಜಹಾನ್​ ಅವರನ್ನು ಬಂಧಿಸಲು ಅವರ ನಿವಾಸಕ್ಕೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳ ತಂಡದ ಮೇಲೆ ಗುಂಪು ದಾಳಿ ನಡೆದಿತ್ತು. ನಂತರ ಷಹಜಹಾನ್ ಪರಾರಿಯಾಗಿದ್ದರು. ಕೇಂದ್ರೀಯ ಸಂಸ್ಥೆಯ ಅಧಿಕಾರಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಶೇಖ್ ಷಹಜಹಾನ್ ಪ್ರಸ್ತುತ ಜೈಲಿನಲ್ಲಿದ್ದಾರೆ. ಮಾರ್ಚ್ 6 ರಂದು ದಾಳಿ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿತ್ತು.

ಶೇಖ್ ಷಹಜಹಾನ್ 6 ವರ್ಷ ಅಮಾನತು

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವರ ಭೂಮಿಯನ್ನು ಕಬಳಿಸಿದ ಸಂದೇಶ್​​ಖಾಲಿ ಪ್ರಕರಣದ ಪ್ರಮುಖ ಆರೋಪಿ ಶೇಖ್ ಷಹಜಹಾನ್ ಅವರನ್ನು 6 ವರ್ಷ ಪಕ್ಷದಿಂದ ಅಮಾನತುಗೊಳಿಸಿ ತೃಣಮೂಲ ಕಾಂಗ್ರೆಸ್ (TMC) ಆದೇಶಿಸಿದೆ. ಪಶ್ಚಿಮ ಬಂಗಾಳ ಪೊಲೀಸರು ಷಹಜಹಾನ್ ಅವರನ್ನು ಬಂಧಿಸಿದ ನಂತರ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಹುಡುಗಿ ಸುಂದರಿಯಾಗಿದ್ದರೆ ರಾತ್ರೋರಾತ್ರಿ ಕಿಡ್ನಾಪ್ ಮಾಡುತ್ತಾರೆ; ಸಂದೇಶಖಾಲಿಯ ಭೀಕರ ಅನುಭವ ಬಿಚ್ಚಿಟ್ಟ ಮಹಿಳೆ

ಹುಡುಗಿ ಸುಂದರಿಯಾಗಿದ್ದರೆ ರಾತ್ರೋರಾತ್ರಿ ಕಿಡ್ನಾಪ್

ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಅಲ್ಲಿನ ಮಹಿಳೆಯರು ರೊಚ್ಚಿಗೆದ್ದಿದ್ದರು. ಮನೆಯಲ್ಲಿ ಹುಡುಗಿ ಚೆನ್ನಾಗಿದ್ದರೆ ಆಕೆಯನ್ನು ಎತ್ತಿಕೊಂಡು ಹೋಗುತ್ತಾರೆ ಮಹಿಳೆಯೊಬ್ಬರು ಮಾಧ್ಯಮವೊಂದರ ಮುಂದೆ ಅಳಲು ತೋಡಿಕೊಂಡಿದ್ದರು. ಅಲ್ಲದೆ, ಇಲ್ಲಿ ಬೆದರಿಕೆ ಹಾಕಿ ಮತದಾನ ಮಾಡಲಾಗುತ್ತದೆ. ನಾನು ಚುನಾವಣೆಯಲ್ಲಿ ನಿಲ್ಲಬೇಕಾದರೆ ಬೆದರಿಕೆಯೊಡ್ಡಿದರು. ಶಾಹಜಹಾನ್-ಶಿಬು ಹಾಜ್ರಾ-ಉತ್ತಮ್ ಸರ್ದಾರ್ ಇದರ ಹಿಂದೆ ಇರುವ ವ್ಯಕ್ತಿಗಳು. ನಾನು ಸುಮಾರು 13 ವರ್ಷಗಳಿಂದ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಈಗ ಅವರನ್ನು ಬಂಧಿಸಿರುವುದರಿಂದ ಇಡೀ ಗ್ರಾಮ ಸ್ವಲ್ಪ ಮಟ್ಟಿಗೆ ಶಾಂತಿಯುತವಾಗಿದೆ ಎಂದು ಟಿವಿ 9 ಬೆಂಗಾಲ್​ಗೆ ಆರತಿ ಪಾತ್ರಾ ಹೇಳಿದ್ದರು.

ಮಹಿಳೆಯರ ನೋವು ಆಲಿಸಿದ್ದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂದೇಶಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ್ದರು. ಬಳಿಕ ಬರಾಸತ್‌ನಲ್ಲಿ ರ್ಯಾಲಿಯಲ್ಲಿ ಸಂದೇಶಖಾಲಿ ಕುರಿತು ಮಮತಾ ಬ್ಯಾನರ್ಜಿ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 pm, Sat, 30 March 24

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!