AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಕಳುಹಿಸಿದ್ದು ಲವ್ ಲೆಟರ್, ಡೆತ್ ವಾರೆಂಟ್ ಅಲ್ಲ: ಸಂಜಯ್ ರಾವುತ್

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧ ದಾಖಲಾಗಿರುವ ಅಕ್ರಮ ಪ್ರಕರಣದಲ್ಲಿ ಇಡಿ ಮಂಗಳವಾರ ಪರಬ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇಡಿ ಕಳುಹಿಸಿದ್ದು ಲವ್ ಲೆಟರ್, ಡೆತ್ ವಾರೆಂಟ್ ಅಲ್ಲ: ಸಂಜಯ್ ರಾವುತ್
ಸಂಜಯ್ ರಾವುತ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 30, 2021 | 2:50 PM

Share

ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ನೋಟಿಸ್ “ಡೆತ್ ವಾರಂಟ್” ಅಲ್ಲ, ರಾಜಕೀಯ ಕಾರ್ಯಕರ್ತರಿಗೆ ನೀಡಿರುವ”ಲವ್ ಲೆಟರ್” ಎಂದು ಹೇಳಿದ್ದಾರೆ. ಅನಿಲ್ ಪರಬ್​​ಗೆ ಇಡಿ ನೋಟಿಸ್ ನೀಡಿರುವ ಬಗ್ಗೆ ರಾವುತ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ. “ಬಲವಾದ ಮತ್ತು ಅಜೇಯವಾದ ಮಹಾ ವಿಕಾಸ ಅಘಾಡಿ (MVA) ಯ ಗೋಡೆಯನ್ನು ಒಡೆಯುವ ವಿಫಲ ಪ್ರಯತ್ನಗಳ ನಂತರ ಇಂತಹ ಪ್ರೇಮ ಪತ್ರಗಳು ಹೆಚ್ಚಾಗಿದೆ ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಪರಬ್ ಅವರನ್ನು ಬಿಜೆಪಿ ನಾಯಕರು ಗುರಿಯಾಗಿಸಿಕೊಂಡಿದ್ದಾರೆ ಎಂದು ರಾವುತ್ ಹೇಳಿದ್ದಾರೆ. ಅವರು ನೋಟಿಸ್‌ಗೆ ಪ್ರತಿಕ್ರಿಯಿಸುತ್ತಾರೆ ಮತ್ತು ಇಡಿಗೆ ಸಹಕರಿಸುತ್ತಾರೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧ ದಾಖಲಾಗಿರುವ ಅಕ್ರಮ ಪ್ರಕರಣದಲ್ಲಿ ಇಡಿ ಮಂಗಳವಾರ ಪರಬ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

“ಒಬ್ಬ ಬಿಜೆಪಿ ವ್ಯಕ್ತಿ ಇಡಿಯಲ್ಲಿ ಡೆಸ್ಕ್ ಆಫೀಸರ್ ಆಗಿರಬಹುದು ಅಥವಾ ಇಡಿ ಅಧಿಕಾರಿ ಬಿಜೆಪಿಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ರಾವುತ್ ಹೇಳಿದರು.

ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಶಿವಸೇನೆ ಮಹಾರಾಷ್ಟ್ರದಲ್ಲಿ ಎನ್​​ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಂಡಿದೆ. ಕೊವಿಡ್ -19 ನಿರ್ಬಂಧಗಳಿಂದಾಗಿ ಮಹಾರಾಷ್ಟ್ರದಲ್ಲಿ ದೇವಾಲಯಗಳನ್ನು ಪುನಃ ತೆರೆಯಲು ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಶಿವಸೇನೆ ಮಹಾರಾಷ್ಟ್ರದಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಂಡಿದೆ.

ಕೊವಿಡ್ -19 ನಿರ್ಬಂಧಗಳಿಂದಾಗಿ ಮಹಾರಾಷ್ಟ್ರದಲ್ಲಿ ದೇವಾಲಯಗಳನ್ನು ಪುನಃ ತೆರೆಯಲು ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. “ಮಹಾರಾಷ್ಟ್ರ ಸರ್ಕಾರವು ಕೇಂದ್ರದ ನಿರ್ದೇಶನಗಳನ್ನು ಅನುಸರಿಸುತ್ತಿದೆ, ಇದು ಮುಂಬರುವ ಹಬ್ಬಗಳು ಮತ್ತು ಕೊರೊನಾವೈರಸ್ ಸೋಂಕು ಹರಡುವ ಭಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ರಾಜ್ಯಗಳನ್ನು ಕೇಳಿದೆ. ಕೇಂದ್ರ ಸರ್ಕಾರವು ‘ಹಿಂದುತ್ವವಾದಿ’ (ಹಿಂದೂ ಪರ) ಎಂದು ನಾವು ನಂಬುತ್ತೇವೆ ಎಂದು ಅವರು ಹೇಳಿದರು. ಹರ್ಯಾಣ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಪ್ರಶ್ನಿಸಿದ ರಾವುತ್, ರೈತರು ಚೆಲ್ಲಿದ ರಕ್ತಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

ಹರ್ಯಾಣದ ಸ್ಥಳೀಯ ಎಸ್‌ಡಿಎಂ ಪ್ರತಿಭಟನಾ ನಿರತ ರೈತರ ತಲೆ ಒಡೆಯುವವರೆಗೂ ಲಾಠಿಚಾರ್ಜ್ ಮಾಡಲು ಪೊಲೀಸರಿಗೆ ಆದೇಶ ನೀಡಿತು ಎಂದು ಹೇಳಿದ್ದಾರೆ.

ಕರ್ನಾಲ್‌ನಲ್ಲಿ ರೈತರ ಪ್ರತಿಭಟನೆಯ ಸಮಯದಲ್ಲಿ ಕರ್ತವ್ಯದ ಮ್ಯಾಜಿಸ್ಟ್ರೇಟ್ ಆಗಿ ನಿಯೋಜನೆಗೊಂಡ ಅಧಿಕಾರಿ, ರೈತರ ತಲೆಗೆ ಒಡೆಯಲು ಪೊಲೀಸರಸ್ಸಿ ಕೇಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ವೈರಲ್ ಆಗಿದ್ದು, ವಿವಿಧ ರಾಜಕೀಯ ಪಕ್ಷಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧನ್ಖರ್ ಮತ್ತು ಭಾರತೀಯ ಜನತಾ ಪಕ್ಷದ ಸಭೆಯನ್ನು ವಿರೋಧಿಸಿ ಕರ್ನಾಲ್ ಕಡೆಗೆ ಹೋಗುವಾಗ ಹರ್ಯಾಣದ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ರೈತರ ಗುಂಪಿನ ಮೇಲೆ ಪೊಲೀಸರು ಲಾಠಿ  ಪ್ರಹಾರ ಮಾಡಿದ್ದು ಇದರಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ:  ಶಾಲೆ ಯಾವಾಗ ಆರಂಭ ಮಾಡುತ್ತೀರಾ? ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ಗೆ ಬಾಲಕನ ಪ್ರಶ್ನೆ; ವಿಡಿಯೋ ವೈರಲ್

ಇದನ್ನೂ ಓದಿ:  ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ

(ED is not a death warrant but a love letter for political workers says Shiv Sena MP Sanjay Raut)

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ