AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ವಿದೇಶಕ್ಕೆ ಹಣ ವರ್ಗಾವಣೆ; ಶಿಯೋಮಿ ಇಂಡಿಯಾದ ಇಬ್ಬರು ಉನ್ನತ ಅಧಿಕಾರಿಗಳು, 3 ಬ್ಯಾಂಕ್​ಗಳಿಗೆ ಇ.ಡಿ ನೋಟಿಸ್

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​ನ ಇಬ್ಬರು ಕಾರ್ಯನಿರ್ವಾಹಕರು, ಸಿಟಿ ಬ್ಯಾಂಕ್, ಹೆಚ್​​ಎಸ್​​ಬಿಸಿ ಬ್ಯಾಂಕ್ ಮತ್ತು ಡಾಯ್ಚ ಬ್ಯಾಂಕ್ ಎಜಿಗೆ ಶೋಕಾಸ್ ನೋಟಿಸ್ ನೀಡಿದೆ.

ಅಕ್ರಮವಾಗಿ ವಿದೇಶಕ್ಕೆ ಹಣ ವರ್ಗಾವಣೆ; ಶಿಯೋಮಿ ಇಂಡಿಯಾದ ಇಬ್ಬರು ಉನ್ನತ ಅಧಿಕಾರಿಗಳು, 3 ಬ್ಯಾಂಕ್​ಗಳಿಗೆ ಇ.ಡಿ ನೋಟಿಸ್
ಶಿಯೋಮಿ
Ganapathi Sharma
|

Updated on: Jun 09, 2023 | 10:24 PM

Share

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ 5,551 ಕೋಟಿ ರೂ. ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ (Xiaomi Technology India) ಮುಖ್ಯ ಹಣಕಾಸು ಅಧಿಕಾರಿ (CFO) ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್‌ಗಳಿಗೆ ಜಾರಿ ನಿರ್ದೇಶನಾಲಯ (ED) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ಅಧಿಕಾರಿಗಳ ಉಲ್ಲೇಖಿಸಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ವರದಿಯ ಪ್ರಕಾರ, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​ನ ಇಬ್ಬರು ಕಾರ್ಯನಿರ್ವಾಹಕರು, ಸಿಟಿ ಬ್ಯಾಂಕ್, ಹೆಚ್​​ಎಸ್​​ಬಿಸಿ ಬ್ಯಾಂಕ್ ಮತ್ತು ಡಾಯ್ಚ ಬ್ಯಾಂಕ್ ಎಜಿಗೆ ಶೋಕಾಸ್ ನೋಟಿಸ್ ನೀಡಿದೆ.

ಫೆಮಾದ ಸೆಕ್ಷನ್ 37ಎ ಅಡಿಯಲ್ಲಿ ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರವು ಈ ವಶಪಡಿಸಿಕೊಳ್ಳುವ ಆದೇಶವನ್ನು ದೃಢಪಡಿಸಿದೆ. 5,551.27 ಕೋಟಿ ರೂಪಾಯಿಗೆ ಸಮಾನವಾದ ವಿದೇಶಿ ವಿನಿಮಯವನ್ನು ಶಿಯೋಮಿ ಇಂಡಿಯಾವು ಅನಧಿಕೃತ ರೀತಿಯಲ್ಲಿ ಮಾಡಿದೆ. ಹೀಗಾಗಿ 1999 ರ ಫೆಮಾ ಕಾಯ್ದೆಯ ಸೆಕ್ಷನ್ 4 ಮತ್ತು 37 ಎ ನಿಬಂಧನೆಗಳ ಪ್ರಕಾರ ದಂಡ ವಸೂಲಿ ಮಾಡಬಹುದಾಗಿದೆ ಎಂದು ವರದಿ ಹೇಳಿದೆ.

ಸಾಮಾನ್ಯವಾಗಿ ಫೆಮಾ ತನಿಖೆ ಪೂರ್ಣಗೊಂಡ ನಂತರ ಶೋಕಾಸ್ ನೋಟಿಸ್ ನೀಡಲಾಗುತ್ತದೆ ಮತ್ತು ಅದು ಮುಗಿದ ನಂತರ ಶಿಯೋಮಿ ಅಪರಾಧದ ಮೂರು ಪಟ್ಟು ದಂಡವನ್ನು ಪಾವತಿಸಬೇಕಾಗಬಹುದು ಎಂದು ‘ಪಿಟಿಐ’ ವರದಿ ಉಲ್ಲೇಖಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ