AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ವಿದೇಶಕ್ಕೆ ಹಣ ವರ್ಗಾವಣೆ; ಶಿಯೋಮಿ ಇಂಡಿಯಾದ ಇಬ್ಬರು ಉನ್ನತ ಅಧಿಕಾರಿಗಳು, 3 ಬ್ಯಾಂಕ್​ಗಳಿಗೆ ಇ.ಡಿ ನೋಟಿಸ್

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​ನ ಇಬ್ಬರು ಕಾರ್ಯನಿರ್ವಾಹಕರು, ಸಿಟಿ ಬ್ಯಾಂಕ್, ಹೆಚ್​​ಎಸ್​​ಬಿಸಿ ಬ್ಯಾಂಕ್ ಮತ್ತು ಡಾಯ್ಚ ಬ್ಯಾಂಕ್ ಎಜಿಗೆ ಶೋಕಾಸ್ ನೋಟಿಸ್ ನೀಡಿದೆ.

ಅಕ್ರಮವಾಗಿ ವಿದೇಶಕ್ಕೆ ಹಣ ವರ್ಗಾವಣೆ; ಶಿಯೋಮಿ ಇಂಡಿಯಾದ ಇಬ್ಬರು ಉನ್ನತ ಅಧಿಕಾರಿಗಳು, 3 ಬ್ಯಾಂಕ್​ಗಳಿಗೆ ಇ.ಡಿ ನೋಟಿಸ್
ಶಿಯೋಮಿ
ಗಣಪತಿ ಶರ್ಮಾ
|

Updated on: Jun 09, 2023 | 10:24 PM

Share

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ 5,551 ಕೋಟಿ ರೂ. ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ (Xiaomi Technology India) ಮುಖ್ಯ ಹಣಕಾಸು ಅಧಿಕಾರಿ (CFO) ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್‌ಗಳಿಗೆ ಜಾರಿ ನಿರ್ದೇಶನಾಲಯ (ED) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ಅಧಿಕಾರಿಗಳ ಉಲ್ಲೇಖಿಸಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ವರದಿಯ ಪ್ರಕಾರ, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​ನ ಇಬ್ಬರು ಕಾರ್ಯನಿರ್ವಾಹಕರು, ಸಿಟಿ ಬ್ಯಾಂಕ್, ಹೆಚ್​​ಎಸ್​​ಬಿಸಿ ಬ್ಯಾಂಕ್ ಮತ್ತು ಡಾಯ್ಚ ಬ್ಯಾಂಕ್ ಎಜಿಗೆ ಶೋಕಾಸ್ ನೋಟಿಸ್ ನೀಡಿದೆ.

ಫೆಮಾದ ಸೆಕ್ಷನ್ 37ಎ ಅಡಿಯಲ್ಲಿ ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರವು ಈ ವಶಪಡಿಸಿಕೊಳ್ಳುವ ಆದೇಶವನ್ನು ದೃಢಪಡಿಸಿದೆ. 5,551.27 ಕೋಟಿ ರೂಪಾಯಿಗೆ ಸಮಾನವಾದ ವಿದೇಶಿ ವಿನಿಮಯವನ್ನು ಶಿಯೋಮಿ ಇಂಡಿಯಾವು ಅನಧಿಕೃತ ರೀತಿಯಲ್ಲಿ ಮಾಡಿದೆ. ಹೀಗಾಗಿ 1999 ರ ಫೆಮಾ ಕಾಯ್ದೆಯ ಸೆಕ್ಷನ್ 4 ಮತ್ತು 37 ಎ ನಿಬಂಧನೆಗಳ ಪ್ರಕಾರ ದಂಡ ವಸೂಲಿ ಮಾಡಬಹುದಾಗಿದೆ ಎಂದು ವರದಿ ಹೇಳಿದೆ.

ಸಾಮಾನ್ಯವಾಗಿ ಫೆಮಾ ತನಿಖೆ ಪೂರ್ಣಗೊಂಡ ನಂತರ ಶೋಕಾಸ್ ನೋಟಿಸ್ ನೀಡಲಾಗುತ್ತದೆ ಮತ್ತು ಅದು ಮುಗಿದ ನಂತರ ಶಿಯೋಮಿ ಅಪರಾಧದ ಮೂರು ಪಟ್ಟು ದಂಡವನ್ನು ಪಾವತಿಸಬೇಕಾಗಬಹುದು ಎಂದು ‘ಪಿಟಿಐ’ ವರದಿ ಉಲ್ಲೇಖಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ