AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ವಿದೇಶಕ್ಕೆ ಹಣ ವರ್ಗಾವಣೆ; ಶಿಯೋಮಿ ಇಂಡಿಯಾದ ಇಬ್ಬರು ಉನ್ನತ ಅಧಿಕಾರಿಗಳು, 3 ಬ್ಯಾಂಕ್​ಗಳಿಗೆ ಇ.ಡಿ ನೋಟಿಸ್

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​ನ ಇಬ್ಬರು ಕಾರ್ಯನಿರ್ವಾಹಕರು, ಸಿಟಿ ಬ್ಯಾಂಕ್, ಹೆಚ್​​ಎಸ್​​ಬಿಸಿ ಬ್ಯಾಂಕ್ ಮತ್ತು ಡಾಯ್ಚ ಬ್ಯಾಂಕ್ ಎಜಿಗೆ ಶೋಕಾಸ್ ನೋಟಿಸ್ ನೀಡಿದೆ.

ಅಕ್ರಮವಾಗಿ ವಿದೇಶಕ್ಕೆ ಹಣ ವರ್ಗಾವಣೆ; ಶಿಯೋಮಿ ಇಂಡಿಯಾದ ಇಬ್ಬರು ಉನ್ನತ ಅಧಿಕಾರಿಗಳು, 3 ಬ್ಯಾಂಕ್​ಗಳಿಗೆ ಇ.ಡಿ ನೋಟಿಸ್
ಶಿಯೋಮಿ
ಗಣಪತಿ ಶರ್ಮಾ
|

Updated on: Jun 09, 2023 | 10:24 PM

Share

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ 5,551 ಕೋಟಿ ರೂ. ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ (Xiaomi Technology India) ಮುಖ್ಯ ಹಣಕಾಸು ಅಧಿಕಾರಿ (CFO) ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್‌ಗಳಿಗೆ ಜಾರಿ ನಿರ್ದೇಶನಾಲಯ (ED) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ಅಧಿಕಾರಿಗಳ ಉಲ್ಲೇಖಿಸಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ವರದಿಯ ಪ್ರಕಾರ, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​ನ ಇಬ್ಬರು ಕಾರ್ಯನಿರ್ವಾಹಕರು, ಸಿಟಿ ಬ್ಯಾಂಕ್, ಹೆಚ್​​ಎಸ್​​ಬಿಸಿ ಬ್ಯಾಂಕ್ ಮತ್ತು ಡಾಯ್ಚ ಬ್ಯಾಂಕ್ ಎಜಿಗೆ ಶೋಕಾಸ್ ನೋಟಿಸ್ ನೀಡಿದೆ.

ಫೆಮಾದ ಸೆಕ್ಷನ್ 37ಎ ಅಡಿಯಲ್ಲಿ ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರವು ಈ ವಶಪಡಿಸಿಕೊಳ್ಳುವ ಆದೇಶವನ್ನು ದೃಢಪಡಿಸಿದೆ. 5,551.27 ಕೋಟಿ ರೂಪಾಯಿಗೆ ಸಮಾನವಾದ ವಿದೇಶಿ ವಿನಿಮಯವನ್ನು ಶಿಯೋಮಿ ಇಂಡಿಯಾವು ಅನಧಿಕೃತ ರೀತಿಯಲ್ಲಿ ಮಾಡಿದೆ. ಹೀಗಾಗಿ 1999 ರ ಫೆಮಾ ಕಾಯ್ದೆಯ ಸೆಕ್ಷನ್ 4 ಮತ್ತು 37 ಎ ನಿಬಂಧನೆಗಳ ಪ್ರಕಾರ ದಂಡ ವಸೂಲಿ ಮಾಡಬಹುದಾಗಿದೆ ಎಂದು ವರದಿ ಹೇಳಿದೆ.

ಸಾಮಾನ್ಯವಾಗಿ ಫೆಮಾ ತನಿಖೆ ಪೂರ್ಣಗೊಂಡ ನಂತರ ಶೋಕಾಸ್ ನೋಟಿಸ್ ನೀಡಲಾಗುತ್ತದೆ ಮತ್ತು ಅದು ಮುಗಿದ ನಂತರ ಶಿಯೋಮಿ ಅಪರಾಧದ ಮೂರು ಪಟ್ಟು ದಂಡವನ್ನು ಪಾವತಿಸಬೇಕಾಗಬಹುದು ಎಂದು ‘ಪಿಟಿಐ’ ವರದಿ ಉಲ್ಲೇಖಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ