AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ. ಸದ್ಯ 42 ವರ್ಷದ ಚಾರ್ಲಿ […]

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ
KUSHAL V
| Edited By: |

Updated on: Aug 18, 2020 | 4:14 PM

Share

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ.

ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ.

ಸದ್ಯ 42 ವರ್ಷದ ಚಾರ್ಲಿ ಪೆಂಗ್​ನನ್ನು ಐಟಿ ಇಲಾಖೆಯು ದೇಶದೊಳಗೆ ಹವಾಲಾ ಜಾಲದ ಮೂಲಕ ಕೋಟ್ಯಂತರ ರೂಪಾಯಿ ಮೊತ್ತವನ್ನ ದೇಶದೊಳಕ್ಕೆ ತರಲು ವ್ಯವಸ್ಥೆ ಮಾಡಿದ್ದನಂತೆ. ಈತನ ಕೃತ್ಯದಲ್ಲಿ ಕೆಲವು ಖಾಸಗಿ ಬ್ಯಾಂಕ್​ಗಳ ಸಿಬ್ಬಂದಿ ಸಹ ಶಾಮೀಲಾಗಿದ್ದಾರಂತೆ.

ಯಾರು ಈ ಚಾರ್ಲಿ ಪೆಂಗ್​ ? ಚೀನಾ ದೇಶದ ಪ್ರಜೆಯಾದ ಚಾರ್ಲಿ ಪೆಂಗ್​ ಮೂಲ ಹೆಸರು ಲೂ ಸಾಂಗ್​. ಈ ಆಸಾಮಿ ಭಾರತಕ್ಕೆ ಬಂದ ಕೂಡಲೇ ತನ್ನ ಹೆಸರು ಬದಲಿಸುವುದರ ಜೊತೆಗೆ ಇಲ್ಲಿನ ಮಹಿಳೆಯೊಟ್ಟಿಗೆ ಮದುವೆ ಸಹ ಆಗಿದ್ದಾನೆ. ಅಚ್ಚರಿಯೆಂದರೆ, ಈ ಆಸಾಮಿ ಪಾಸ್​ಪೋರ್ಟ್​ ಆಧಾರ್​ ಕಾರ್ಡ್​ ಮತ್ತು ಪ್ಯಾನ್​ ಕಾರ್ಡ್​ ಸಹ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ನಕಲಿ ಪಾಸ್​ಪೋರ್ಟ್​ ಹೊಂದಿದ್ದ ಆರೋಪದಡಿ 2018ರಲ್ಲಿ ಈತನನ್ನು ಬಂಧಿಸಲಾಗಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರವಿಲ್ಲದೆ ಬಿಡುಗಡೆ ಮಾಡಬೇಕಾಗಿತ್ತು. ಪ್ರತಿ ಬಾರಿ ತನ್ನ ನಿವಾಸ ಬದಲಾಯಿಸುತ್ತಿದ್ದ ಪೆಂಗ್​ ಈವರೆಗೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾಗಿದ್ದ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ