AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ. ಸದ್ಯ 42 ವರ್ಷದ ಚಾರ್ಲಿ […]

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 18, 2020 | 4:14 PM

Share

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ.

ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ.

ಸದ್ಯ 42 ವರ್ಷದ ಚಾರ್ಲಿ ಪೆಂಗ್​ನನ್ನು ಐಟಿ ಇಲಾಖೆಯು ದೇಶದೊಳಗೆ ಹವಾಲಾ ಜಾಲದ ಮೂಲಕ ಕೋಟ್ಯಂತರ ರೂಪಾಯಿ ಮೊತ್ತವನ್ನ ದೇಶದೊಳಕ್ಕೆ ತರಲು ವ್ಯವಸ್ಥೆ ಮಾಡಿದ್ದನಂತೆ. ಈತನ ಕೃತ್ಯದಲ್ಲಿ ಕೆಲವು ಖಾಸಗಿ ಬ್ಯಾಂಕ್​ಗಳ ಸಿಬ್ಬಂದಿ ಸಹ ಶಾಮೀಲಾಗಿದ್ದಾರಂತೆ.

ಯಾರು ಈ ಚಾರ್ಲಿ ಪೆಂಗ್​ ? ಚೀನಾ ದೇಶದ ಪ್ರಜೆಯಾದ ಚಾರ್ಲಿ ಪೆಂಗ್​ ಮೂಲ ಹೆಸರು ಲೂ ಸಾಂಗ್​. ಈ ಆಸಾಮಿ ಭಾರತಕ್ಕೆ ಬಂದ ಕೂಡಲೇ ತನ್ನ ಹೆಸರು ಬದಲಿಸುವುದರ ಜೊತೆಗೆ ಇಲ್ಲಿನ ಮಹಿಳೆಯೊಟ್ಟಿಗೆ ಮದುವೆ ಸಹ ಆಗಿದ್ದಾನೆ. ಅಚ್ಚರಿಯೆಂದರೆ, ಈ ಆಸಾಮಿ ಪಾಸ್​ಪೋರ್ಟ್​ ಆಧಾರ್​ ಕಾರ್ಡ್​ ಮತ್ತು ಪ್ಯಾನ್​ ಕಾರ್ಡ್​ ಸಹ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ನಕಲಿ ಪಾಸ್​ಪೋರ್ಟ್​ ಹೊಂದಿದ್ದ ಆರೋಪದಡಿ 2018ರಲ್ಲಿ ಈತನನ್ನು ಬಂಧಿಸಲಾಗಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರವಿಲ್ಲದೆ ಬಿಡುಗಡೆ ಮಾಡಬೇಕಾಗಿತ್ತು. ಪ್ರತಿ ಬಾರಿ ತನ್ನ ನಿವಾಸ ಬದಲಾಯಿಸುತ್ತಿದ್ದ ಪೆಂಗ್​ ಈವರೆಗೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾಗಿದ್ದ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ