AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ. ಸದ್ಯ 42 ವರ್ಷದ ಚಾರ್ಲಿ […]

ಭಾರತದಲ್ಲಿ ಹವಾಲಾ ದಂಧೆ ನಡೆಸ್ತಿದ್ದ ಚೀನಾ ಮೂಲದವನಿಗೆ ED ಗುನ್ನಾ
KUSHAL V
| Edited By: |

Updated on: Aug 18, 2020 | 4:14 PM

Share

ದೆಹಲಿ: ದೇಶದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹವಾಲಾ ದಂಧೆ ನಡೆಸುತ್ತಿದ್ದ ಬಂಧಿತ ಚೀನಾ ಸಂಜಾತನಿಗೆ ಇದೀಗ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್​ ನೀಡಿದೆ.

ಕಳೆದ ಕೆಲವು ದಿನಗಳ ಹಿಂದೆ ಚೀನಾ ಮೂಲದ ಚಾರ್ಲಿ ಪೆಂಗ್​ ಮೇಲೆ ಐಟಿ ಇಲಾಖೆ ಹಾಗೂ ದೆಹಲಿ ಪೊಲೀಸರು ಹವಾಲಾ ದಂಧೆ ನಡೆಸುತ್ತಿರುವ ಆರೋಪದಡಿ ದಾಳಿ ನಡೆಸಿ ಪೆಂಗ್​ನನ್ನು ಬಂಧಿಸಿದ್ದರು. ಇದೀಗ, ಎರಡೂ ಇಲಾಖೆಯಿಂದ ಮಾಹಿತಿ ಪಡೆದ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಕೇಸ್​ ದಾಖಲಿಸಿಕೊಂಡಿದೆ.

ಸದ್ಯ 42 ವರ್ಷದ ಚಾರ್ಲಿ ಪೆಂಗ್​ನನ್ನು ಐಟಿ ಇಲಾಖೆಯು ದೇಶದೊಳಗೆ ಹವಾಲಾ ಜಾಲದ ಮೂಲಕ ಕೋಟ್ಯಂತರ ರೂಪಾಯಿ ಮೊತ್ತವನ್ನ ದೇಶದೊಳಕ್ಕೆ ತರಲು ವ್ಯವಸ್ಥೆ ಮಾಡಿದ್ದನಂತೆ. ಈತನ ಕೃತ್ಯದಲ್ಲಿ ಕೆಲವು ಖಾಸಗಿ ಬ್ಯಾಂಕ್​ಗಳ ಸಿಬ್ಬಂದಿ ಸಹ ಶಾಮೀಲಾಗಿದ್ದಾರಂತೆ.

ಯಾರು ಈ ಚಾರ್ಲಿ ಪೆಂಗ್​ ? ಚೀನಾ ದೇಶದ ಪ್ರಜೆಯಾದ ಚಾರ್ಲಿ ಪೆಂಗ್​ ಮೂಲ ಹೆಸರು ಲೂ ಸಾಂಗ್​. ಈ ಆಸಾಮಿ ಭಾರತಕ್ಕೆ ಬಂದ ಕೂಡಲೇ ತನ್ನ ಹೆಸರು ಬದಲಿಸುವುದರ ಜೊತೆಗೆ ಇಲ್ಲಿನ ಮಹಿಳೆಯೊಟ್ಟಿಗೆ ಮದುವೆ ಸಹ ಆಗಿದ್ದಾನೆ. ಅಚ್ಚರಿಯೆಂದರೆ, ಈ ಆಸಾಮಿ ಪಾಸ್​ಪೋರ್ಟ್​ ಆಧಾರ್​ ಕಾರ್ಡ್​ ಮತ್ತು ಪ್ಯಾನ್​ ಕಾರ್ಡ್​ ಸಹ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ನಕಲಿ ಪಾಸ್​ಪೋರ್ಟ್​ ಹೊಂದಿದ್ದ ಆರೋಪದಡಿ 2018ರಲ್ಲಿ ಈತನನ್ನು ಬಂಧಿಸಲಾಗಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರವಿಲ್ಲದೆ ಬಿಡುಗಡೆ ಮಾಡಬೇಕಾಗಿತ್ತು. ಪ್ರತಿ ಬಾರಿ ತನ್ನ ನಿವಾಸ ಬದಲಾಯಿಸುತ್ತಿದ್ದ ಪೆಂಗ್​ ಈವರೆಗೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾಗಿದ್ದ.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು