AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಭದ್ರತೆ ಲೋಪವಾಗಿದ್ದಕ್ಕೆ ಪ್ರತೀಕಾರ ಇದು; ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ ಆಗಿದ್ದಕ್ಕೆ ಸಿಎಂ ಛನ್ನಿ ಆಕ್ರೋಶ

ಪ್ರಧಾನಿ ಮೋದಿಯವರ ಫಿರೋಜ್​ಪುರ ಭೇಟಿ ಸಂದರ್ಭವನ್ನು ಮರೆಯಬೇಡಿ ಎಂದು ಇ.ಡಿ. ದಾಳಿ ನಡೆಸಲು ಬಂದಾಗ ಹೇಳಿತ್ತು ಎಂದೂ ಸಿಎಂ ಛನ್ನಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ಭದ್ರತೆ ಲೋಪವಾಗಿದ್ದಕ್ಕೆ ಪ್ರತೀಕಾರ ಇದು; ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ ಆಗಿದ್ದಕ್ಕೆ ಸಿಎಂ ಛನ್ನಿ ಆಕ್ರೋಶ
ಚರಣ್​​ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on:Jan 20, 2022 | 9:29 AM

Share

ತಮ್ಮ ಸೋದರಳಿಯನ  ಮನೆ ಮೇಲೆ ನಡೆದ ಇ.ಡಿ. ದಾಳಿಯನ್ನು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್ ಸಿಂಗ್​ ಛನ್ನಿ(Charanjit Singh Channi), ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭದ್ರತಾ ಲೋಪಕ್ಕೆ (PM Security Breach) ಲಿಂಕ್​ ಮಾಡಿದ್ದಾರೆ. ಅಂದರೆ ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್​ಗೆ ಭೇಟಿ ಕೊಟ್ಟಿದ್ದಾಗ ಅವರ ಭದ್ರತೆಯಲ್ಲಿ ಲೋಪವುಂಟಾಗಿದ್ದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಈ ಇ.ಡಿ.ದಾಳಿ ನಡೆಸಿದೆ ಎಂದು ಹೇಳಿದ್ದಾರೆ.  ಇತ್ತೀಚೆಗಷ್ಟೇ ಪಂಜಾಬ್ ಸಿಎಂ ಸೋದರಳಿಯ ಭೂಪಿಂದರ್ ಸಿಂಗ್ ಹನಿ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ ಆರೋಪದಡಿ ಜಾರಿ ನಿರ್ದೇಶನಲಾಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಒಟ್ಟು 10-12 ಸ್ಥಳಗಳ ಮೇಲೆ ಇ.ಡಿ. ರೇಡ್​ ಆಗಿತ್ತು. ಅದರಲ್ಲಿ ಭೂಪಿಂದರ್​ ಸಿಂಗ್​ ಹನಿಗೆ ಸೇರಿದ ಪ್ರದೇಶದ ಮೇಲೆಯೂ ನಡೆದಿತ್ತು. 

ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಛನ್ನಿ, ಜಾರಿ ನಿರ್ದೇಶನಲಾಯ, ಆದಾಯ ತೆರಿಗೆ ಇಲಾಖೆ ಮತ್ತಿತರ ತನಿಖಾ ದಳಗಳನ್ನು ಕೇಂದ್ರ ಸರ್ಕಾರ  ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ. ರಾಜ್ಯ ಸರ್ಕಾರಗಳ ವಿರುದ್ಧ ಪ್ರತೀಕಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಪ್ರಧಾನಿ ಮೋದಿಯವರ ಫಿರೋಜ್​ಪುರ ಭೇಟಿ ಸಂದರ್ಭವನ್ನು ಮರೆಯಬೇಡಿ ಎಂದು ಇ.ಡಿ. ದಾಳಿ ನಡೆಸಲು ಬಂದಾಗ ಹೇಳಿತ್ತು ಎಂದೂ ಸಿಎಂ ಛನ್ನಿ ಪ್ರತಿಪಾದಿಸಿದ್ದಾರೆ. ಇದು ಪಕ್ಕಾ ಪ್ರತೀಕಾರದ ದಾಳಿಯಾಗಿದೆ. ನನ್ನನ್ನು ಸಿಕ್ಕಿಹಾಕಿಸುವ ಸಲುವಾಗಿ ನನ್ನ ಸೋದರಳಿಯನನ್ನು 24 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ನನ್ನ ವಿರುದ್ಧ ಇ.ಡಿ.ಗೆ ಯಾವುದೇ ಪುರಾವೆಯೂ ಸಿಕ್ಕಿಲ್ಲ. ಪಂಜಾಬ್​ ಮತ್ತು ಪಶ್ಚಿಮ ಬಂಗಾಳದಲ್ಲಿ ಕ್ರಾಂತಿ ಈಗಾಗಲೇ ಶುರುವಾಗಿದೆ. ದೆಹಲಿ ಸರ್ಕಾರ (ಕೇಂದ್ರ ಸರ್ಕಾರ) ನಮ್ಮನ್ನು ಹತ್ತಿಕ್ಕಲು ಪ್ರಯತ್ನಿಸಿತು. ಆದರೆ ನಾವು ಅದಕ್ಕೆ ಪ್ರತಿಯಾಗಿ ಹೊಡೆತ ಕೊಟ್ಟಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮನ್ನು ಸೋಲಿಸುವ ಪ್ರಯತ್ನ ಮಾಡುತ್ತಿರುವ ಬಿಜೆಪಿ, ನನ್ನನ್ನು ಟಾರ್ಗೆಟ್​ ಮಾಡುತ್ತಿದೆ. ಆದರೆ ಇವರು ಸಾಗುತ್ತಿರುವ ಮಾರ್ಗ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ. ಅಂದಹಾಗೆ, ಭೂಪಿಂದರ್​ ಹನಿ ಅವರ ಮೊಹಾಲಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ ಇ.ಡಿ. ಅಧಿಕಾರಿಗಳು 10 ಕೋಟಿ ರೂ.ನಗದು ಮತ್ತು 21 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.

ಸಿಎಂ ಛನ್ನಿ ಸೋದರಳಿಯನ ಮನೆ ಮೇಲೆ ಇ.ಡಿ.ದಾಳಿಯಾಗುತ್ತಿದ್ದಂತೆ ಕಾಂಗ್ರೆಸ್​ ಬಿಜೆಪಿ ವಿರುದ್ಧ ಆರೋಪ ಮಾಡಿತ್ತು. ಒಂದು ಹಳೇ ಪ್ರಕರಣದ ನೆಪ ಇಟ್ಟುಕೊಂಡು ಈಗ ಕೇಂದ್ರ ಸರ್ಕಾರ ಪಂಜಾಭ್​ ಮತ್ತು ಪಂಜಾಬಿಯತ್​​ಗೆ ಅವಮಾನ ಮಾಡುತ್ತಿದೆ. ಈ ರಾಜ್ಯದ ಜನರೇ ಇದಕ್ಕೆಲ್ಲ ತಕ್ಕ ಶಾಸ್ತಿ ಮಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಹೇಳಿತ್ತು. ಆದರೆ ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚುತ್ತಿರುವ ಬಗ್ಗೆ ಆಮ್​ ಆದ್ಮಿ ಪಕ್ಷ ಕೂಡ ಧ್ವನಿ ಎತ್ತಿತ್ತು ಪಂಜಾಬ್​​ನಲ್ಲಿ ಅದರಲ್ಲೂ ಮುಖ್ಯಮಂತ್ರಿ ಛನ್ನಿ ಅವರ ಸ್ವಕ್ಷೇತ್ರ ಚಮಕೌರ್​ ಸಾಹಿಬ್​​ನಲ್ಲಿಯೇ  ಅಕ್ರಮ ಮರಳು ಗಣಿಗಾರಿಕೆ  ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿತ್ತು.

ಇದನ್ನೂ ಓದಿ: ರೈತಾಪಿ ಜನರೇ ದಯವಿಟ್ಟು ರಸ್ತೆಯಲ್ಲಿ ಕಣ ಹಾಕಬೇಡಿ, ಗರ್ಭಿಣಿಯಿದ್ದ ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಸಿಲುಕಿ ಪರದಾಟ

Published On - 9:29 am, Thu, 20 January 22

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್