AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಯಾದವ್ ಮತ್ತು ಸಹೋದರಿಯರ ಮನೆಯಿಂದ ₹70 ಲಕ್ಷ ನಗದು, 1.5 ಕೆಜಿ ಚಿನ್ನಾಭರಣ ವಶಪಡಿಸಿದ ಇಡಿ

ತೇಜಸ್ವಿ ಇದ್ದ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಲಾಗಿದ್ದು, ಪ್ರಕರಣದ ಆರೋಪಿ ಕಂಪನಿಯಾದ ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತನಿಖೆಯ ಬಗ್ಗೆ ಅರಿವು ಇರುವ ಜನರು ಹೇಳಿದ್ದಾರೆ.

ತೇಜಸ್ವಿ ಯಾದವ್ ಮತ್ತು ಸಹೋದರಿಯರ ಮನೆಯಿಂದ ₹70 ಲಕ್ಷ ನಗದು, 1.5 ಕೆಜಿ ಚಿನ್ನಾಭರಣ ವಶಪಡಿಸಿದ ಇಡಿ
ತೇಜಸ್ವಿ ಯಾದವ್
Follow us
ರಶ್ಮಿ ಕಲ್ಲಕಟ್ಟ
|

Updated on:Mar 11, 2023 | 1:04 PM

ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಪುತ್ರಿಯರು ಮತ್ತು ಪುತ್ರ ತೇಜಸ್ವಿ ಯಾದವ್ (Tejashwi Yadav) ಅವರ ಮನೆಗಳಿಂದ ₹70 ಲಕ್ಷ ನಗದು, 1.5 ಕೆಜಿ ಚಿನ್ನಾಭರಣ, 540 ಗ್ರಾಂ ಚಿನ್ನಾಭರಣ ಮತ್ತು 900 ಅಮೆರಿಕನ್ ಡಾಲರ್ ಸೇರಿದಂತೆ ವಿದೇಶಿ ಕರೆನ್ಸಿಗಳನ್ನು ಜಾರಿ ನಿರ್ದೇಶನಾಲಯ (ED) ವಶಪಡಿಸಿಕೊಂಡಿದೆ. ಕೆಲಸಕ್ಕಾಗಿ ಭೂಮಿ ಹಗರಣ ಆರೋಪದಲ್ಲಿ ಇಡಿ ಶುಕ್ರವಾರ ತೇಜಸ್ವಿ ಯಾದವ್ ಮನೆ ಮೇಲೆ ದಾಳಿ ನಡೆಸಿತ್ತು. ದೆಹಲಿಯಲ್ಲಿರುವ ಬಿಹಾರ ಉಪಮುಖ್ಯಮಂತ್ರಿ ನಿವಾಸ ಸೇರಿದಂತೆ ರಾಷ್ಟ್ರ ರಾಜಧಾನಿ ಪ್ರದೇಶ (ಎನ್‌ಸಿಆರ್), ಪಾಟ್ನಾ, ರಾಂಚಿ ಮತ್ತು ಮುಂಬೈನ 24 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿತ್ತು. ಲಾಲು ಅವರ ಮೂವರು ಪುತ್ರಿಯರಾದ ರಾಗಿಣಿ, ಚಂದಾ ಮತ್ತು ಹೇಮಾ ಯಾದವ್ ಮತ್ತು ಲಾಲು ಅವರ ನಿಕಟವರ್ತಿ ಎಂದು ಪರಿಗಣಿಸಲಾದ ಆರ್‌ಜೆಡಿ ಮಾಜಿ ಶಾಸಕ ಅಬು ದೋಜಾನಾ ಅವರ ಮನೆಗಳ ಮೇಲೆ ಶುಕ್ರವಾರ ದಾಳಿ ನಡೆದಿದೆ. ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಜಿತೇಂದ್ರ ಯಾದವ್ ಅವರ ಗಾಜಿಯಾಬಾದ್‌ನಲ್ಲಿರುವ ನಿವಾಸವನ್ನೂ ಕೇಂದ್ರ ಸಂಸ್ಥೆ ಶೋಧಿಸಿದೆ. ಜಿತೇಂದ್ರ ಯಾದವ್ ರಾಗಿಣಿ ಅವರ ಪತಿ.

ತೇಜಸ್ವಿ ಇದ್ದ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಲಾಗಿದ್ದು, ಪ್ರಕರಣದ ಆರೋಪಿ ಕಂಪನಿಯಾದ ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತನಿಖೆಯ ಬಗ್ಗೆ ಅರಿವು ಇರುವ ಜನರು ಹೇಳಿದ್ದಾರೆ. ಲಂಚ ರೀತಿಯಲ್ಲಿ ಭೂಮಿ ನೀಡಿದ್ದ ವ್ಯಕ್ತಿಗೆ ರೈಲ್ವೆಯಲ್ಲಿ ಕೆಲಸ ಸಿಕ್ಕಿತ್ತು. ಈ ಕೆಲಸ ಕೊಡಿಸಿದ್ದು ಎಕೆ ಇನ್ಫೋ ಸಿಸ್ಟಮ್ಸ್ ಎಂಬ ಆರೋಪವಿದೆ.

“ಇದರರ್ಥ ತೇಜಸ್ವಿ ಯಾದವ್ ಅಥವಾ ಲಾಲು ಯಾದವ್ ಅವರ ಕುಟುಂಬವು ಆರೋಪಿ ಕಂಪನಿಯ ಹೆಸರಿನಲ್ಲಿ ನೋಂದಾಯಿಸಲಾದ ನಿವಾಸವನ್ನು ಬಳಸುತ್ತಿದೆ” ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದರು.

ಆರ್‌ಜೆಡಿ ಮಾಜಿ ಶಾಸಕ ಅಬು ದೋಜಾನಾ ಒಡೆತನದ ಮೆರಿಡಿಯನ್ ಕನ್‌ಸ್ಟ್ರಕ್ಷನ್‌ಗೆ ನಾಲ್ಕು ಲ್ಯಾಂಡ್ ಪಾರ್ಸೆಲ್‌ಗಳನ್ನು ಮಾರಾಟ ಮಾಡಿರುವುದು ಇಡಿ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ಪಾಟ್ನಾದಲ್ಲಿ ಲಾಲು ಅವರ ಪತ್ನಿ ರಾಬ್ರಿ ದೇವಿ ಅವರ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ಲಾಲು ಅವರನ್ನು ಪ್ರಶ್ನಿಸಿದ ನಂತರ ಇಡಿ ದಾಳಿ ನಡೆದಿವೆ. ಶನಿವಾರ ಸಿಬಿಐ ತೇಜಸ್ವಿ ಅವರಿಗೆ ಭೂ-ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಶನಿವಾರದಂದು ಹೊಸ ದಿನಾಂಕವನ್ನು ನೀಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Sat, 11 March 23

ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ