AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumbh Mela Covid 19: ಕುಂಭಮೇಳ ಕೊವಿಡ್ 19 ನಕಲಿ ತಪಾಸಣೆ ಹಗರಣ; ಲ್ಯಾಬೋರೇಟರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಇ.ಡಿ.

Kumbh Mela: ಈ ಬಾರಿ ಕೊವಿಡ್​ 19 ಮಧ್ಯೆಯೂ ಕುಂಭಮೇಳ ನಡೆದಿತ್ತು. ಅದಾದ ಬಳಿಕ ಕೊವಿಡ್​ ಪ್ರಕರಣಗಳು ಹೆಚ್ಚಿದ್ದವು. ನಂತರ ಕುಂಭಮೇಳದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಕೊವಿಡ್​ 19 ತಪಾಸಣೆ ಮಾಡಲು ಡಯಾಗ್ನೋಸ್ಟಿಕ್​ ಸಂಸ್ಥೆಗಳಿಗೆ ಉತ್ತರಾಖಂಡ ಸರ್ಕಾರವೇ ಗುತ್ತಿಗೆ ನೀಡಿತ್ತು.

Kumbh Mela Covid 19: ಕುಂಭಮೇಳ ಕೊವಿಡ್ 19 ನಕಲಿ ತಪಾಸಣೆ ಹಗರಣ; ಲ್ಯಾಬೋರೇಟರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಇ.ಡಿ.
ಕುಂಭಮೇಳ ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 07, 2021 | 10:13 AM

Share

ಉತ್ತರಾಖಂಡ್​: ಇಲ್ಲಿ ಕುಂಭಮೇಳ (Kumbh Mela)ದ ಸಮಯದಲ್ಲಿ ನಡೆದಿದೆ ಎನ್ನಲಾದ ನಕಲಿ ಕೊವಿಡ್​ 19 ಪರೀಕ್ಷೆ (Covid 19 Test Scam) ಹಗರಣಕ್ಕೆ ಸಂಬಂಧಪಟ್ಟಂತೆ ಐದು ಡಯಾಗ್ನೋಸ್ಟಿಕ್ಸ್ (ರೋಗನಿರ್ಣಯ) ಸಂಸ್ಥೆಗಳ ಉನ್ನತ ಕಾರ್ಯನಿರ್ವಾಹಕರ ಮನೆಗಳು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲ ಯ(Enforcement Directorate) ಶುಕ್ರವಾರ ಶೋಧಕಾರ್ಯ ನಡೆಸಿದೆ.

ಈ ಬಾರಿ ಕೊವಿಡ್​ 19 ಮಧ್ಯೆಯೂ ಕುಂಭಮೇಳ ನಡೆದಿತ್ತು. ಅದಾದ ಬಳಿಕ ಕೊವಿಡ್​ ಪ್ರಕರಣಗಳು ಹೆಚ್ಚಿದ್ದವು. ನಂತರ ಕುಂಭಮೇಳದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಕೊವಿಡ್​ 19 ತಪಾಸಣೆ ಮಾಡಲು ಡಯಾಗ್ನೋಸ್ಟಿಕ್​ ಸಂಸ್ಥೆಗಳಿಗೆ ಉತ್ತರಾಖಂಡ ಸರ್ಕಾರವೇ ಗುತ್ತಿಗೆ ನೀಡಿತ್ತು. ಅದರ ಅನ್ವಯ ಈ ಲ್ಯಾಬೋರೇಟರಿಗಳು ಜನರಿಗೆ ಕೊರೊನಾ ಱಪಿಡ್​ ಆ್ಯಂಟಿಜೆನ್​ ಟೆಸ್ಟ್​ ಮತ್ತು ಆರ್​ಟಿ-ಪಿಸಿಆರ್​ ಟೆಸ್ಟ್​ಗಳನ್ನು ಮಾಡಿ ರಿಪೋರ್ಟ್​ ನೀಡಬೇಕಿತ್ತು. ಆದರೆ ಲ್ಯಾಬೋರೇಟರಿಗಳು ಕೊಟ್ಟ ಕೆಲಸವನ್ನು ಸರಿಯಾಗಿ ನಡೆಸದೆ, ಅದೆಷ್ಟೋ ಜನರಿಗೆ ಕೊರೊನಾ ತಪಾಸಣೆಯನ್ನೇ ಮಾಡದೆ ವರದಿ ನೀಡಿದ್ದವು. ಅದಕ್ಕಾಗಿ ಹಣ ಪಡೆದಿದ್ದಲ್ಲದೆ, ಸರ್ಕಾರಕ್ಕೆ ತೋರಿಸಲು ನಕಲಿ ಬಿಲ್​ಗಳನ್ನೂ ಸೃಷ್ಟಿಸಿದ್ದವು. ಹಗರಣ ಬೆಳಕಿಗೆ ಬರುತ್ತಿದ್ದಂತೆ ಉತ್ತಾರಖಂಡ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸಿದ್ದರು.

ಈ ಲ್ಯಾಬೋರೇಟರಿಗಳು ಹೇಗೆ ಜನರನ್ನು ವಂಚಿಸಿವೆ ಎಂಬುದನ್ನು ಇಡಿ ವಿವರಿಸಿದೆ. ಒಬ್ಬರ ಸ್ಯಾಂಪಲ್​​ ತಪಾಸಣೆಯ ವರದಿಯನ್ನೇ ಹಲವರಿಗೆ ನೀಡಿದ್ದಾಗಿ ತಿಳಿಸಿದೆ. ಅದೆಷ್ಟರ ಮಟ್ಟಿಗೆ ಎಡವಟ್ಟು ಮಾಡಿಕೊಂಡಿವೆ ಎಂದರೆ, ಕುಂಭಮೇಳದಲ್ಲಿ ಪಾಲ್ಗೊಳ್ಳದೆ, ಕೊವಿಡ್​ ತಪಾಸಣೆಗೆ ಒಳಗಾಗದೆ ಇರುವವರ ಮೊಬೈಲ್​ಗೂ ನೆಗೆಟಿವ್​ ರಿಪೋರ್ಟ್ ಹೋಗಿದೆ ಎಂದು ಇಡಿ ಮಾಹಿತಿ ನೀಡಿದೆ. ಸದ್ಯ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯ ಐದು ಲ್ಯಾಬೋರೇಟರಿಗಳ ಉನ್ನತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೇರಿದ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿದೆ. ಸದ್ಯ ಈ ಲ್ಯಾಬೋರೇಟರಿಗಳ ಲೈಸೆನ್ಸ್​ ರದ್ದುಗೊಳಿಸಲಾಗಿದ್ದು, ಯಾವುದೇ ರೋಗ ತಪಾಸಣೆ ಮಾಡುವಂತಿಲ್ಲ ಎಂದು ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮಾಜಿ ಗೃಹ ಸಚಿವರಿಗೆ ಹಾರ ಹಾಕಿ ಜನ್ಮದಿನ ಶುಭಾಶಯ ಕೋರಿದ ರೌಡಿ ಶೀಟರ್, ನೆಲಮಂಗಲದ ಕಡೆ ಹೆಜ್ಜೆ ಹಾಕಿದರಾ ಪರಮೇಶ್ವರ್?

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ

Published On - 9:42 am, Sat, 7 August 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?